<p><strong>ಸಹರಾನ್ಪುರ: </strong>ಆಫ್ಘಾನಿಸ್ತಾನ–ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧವು ಭವಿಷ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿದೆ’ ಎಂದು ಆಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಖಾನ್ ಮುತ್ತಖಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶನಿವಾರ ಇಲ್ಲಿನ ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ನಾವು ಭಾರತಕ್ಕೆ ಹೊಸ ರಾಯಭಾರಿ ಕಳುಹಿಸುತ್ತೇವೆ. ಭಾರತದಿಂದಲೂ ಜನರು ಕಾಬೂಲ್ಗೆ ಭೇಟಿ ನೀಡಬಹುದು. ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವು ಇನ್ನಷ್ಟು ಉತ್ತಮಗೊಳ್ಳುತ್ತದೆ’ ಎಂದು ಅವರು ಹೇಳಿದರು. </p>.<p>ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರದ ಕುಲಪತಿ ಅಬ್ದುಲ್ ಖಾಸಿಂ ನೊಮಾನಿ, ಜಮಿಯತ್ ಉಲಮಾ ಇ–ಹಿಂದ್ ಅಧ್ಯಕ್ಷ ಮೌಲಾನ ಅಶ್ರದ್ ಮದನಿ ಅವರು ಅಮಿರ್ ಖಾನ್ ಮುತ್ತಖಿ ಅವರನ್ನು ಸ್ವಾಗತಿಸಿದರು. ಶೈಕ್ಷಣಿಕ ಕೇಂದ್ರದ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು, ಸ್ಥಳೀಯರು ಭಾಗವಹಿಸಿದ್ದರು. </p>.<p class="bodytext">ಮುತ್ತಖಿ ಭೇಟಿಯ ಹಿನ್ನೆಲೆಯಲ್ಲಿ ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರದ ಕ್ಯಾಂಪಸ್ನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. </p>.<p class="bodytext">ಚಾಬಹಾರ್ ಬಂದರು ಅಭಿವೃದ್ಧಿಗೆ ಸಂಬಂಧಿಸಿದ ಅಡೆತಡೆ ನಿವಾರಣೆಗೂ ಶ್ರಮಿಸುವುದಾಗಿ ಮುತ್ತಖಿ ಹೇಳಿದ್ದಾರೆ. ಈ ಬಂದರು, ಮಧ್ಯ ಏಷ್ಯಾ ದೇಶಗಳೊಂದಿಗೆ ಭಾರತ, ಅಫ್ಗಾನಿಸ್ತಾನ ಮತ್ತು ಇರಾನಿನ ವಾಣಿಜ್ಯ ವಹಿವಾಟು ವಿಸ್ತರಿಸುವ ಮಹಾದ್ವಾರವಾಗಿ ಬಳಕೆಗೆ ಬರಲಿದೆ.</p>.<p class="bodytext">ಮುತ್ತಖಿ ಅವರ 6 ದಿನಗಳ ಭಾರತ ಪ್ರವಾಸವು ಅ.9ರಿಂದ ಆರಂಭಗೊಂಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿ ತಾಲಿಬಾನ್ ಸರ್ಕಾರದ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಹರಾನ್ಪುರ: </strong>ಆಫ್ಘಾನಿಸ್ತಾನ–ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧವು ಭವಿಷ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿದೆ’ ಎಂದು ಆಫ್ಘಾನಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಖಾನ್ ಮುತ್ತಖಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಶನಿವಾರ ಇಲ್ಲಿನ ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. </p>.<p>‘ನಾವು ಭಾರತಕ್ಕೆ ಹೊಸ ರಾಯಭಾರಿ ಕಳುಹಿಸುತ್ತೇವೆ. ಭಾರತದಿಂದಲೂ ಜನರು ಕಾಬೂಲ್ಗೆ ಭೇಟಿ ನೀಡಬಹುದು. ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ ಸಂಬಂಧವು ಇನ್ನಷ್ಟು ಉತ್ತಮಗೊಳ್ಳುತ್ತದೆ’ ಎಂದು ಅವರು ಹೇಳಿದರು. </p>.<p>ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರದ ಕುಲಪತಿ ಅಬ್ದುಲ್ ಖಾಸಿಂ ನೊಮಾನಿ, ಜಮಿಯತ್ ಉಲಮಾ ಇ–ಹಿಂದ್ ಅಧ್ಯಕ್ಷ ಮೌಲಾನ ಅಶ್ರದ್ ಮದನಿ ಅವರು ಅಮಿರ್ ಖಾನ್ ಮುತ್ತಖಿ ಅವರನ್ನು ಸ್ವಾಗತಿಸಿದರು. ಶೈಕ್ಷಣಿಕ ಕೇಂದ್ರದ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು, ಸ್ಥಳೀಯರು ಭಾಗವಹಿಸಿದ್ದರು. </p>.<p class="bodytext">ಮುತ್ತಖಿ ಭೇಟಿಯ ಹಿನ್ನೆಲೆಯಲ್ಲಿ ದಾರುಲ್ ಉಲೂಮ್ ದೇವಬಂದ್ ಇಸ್ಲಾಮಿಕ್ ಶೈಕ್ಷಣಿಕ ಕೇಂದ್ರದ ಕ್ಯಾಂಪಸ್ನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. </p>.<p class="bodytext">ಚಾಬಹಾರ್ ಬಂದರು ಅಭಿವೃದ್ಧಿಗೆ ಸಂಬಂಧಿಸಿದ ಅಡೆತಡೆ ನಿವಾರಣೆಗೂ ಶ್ರಮಿಸುವುದಾಗಿ ಮುತ್ತಖಿ ಹೇಳಿದ್ದಾರೆ. ಈ ಬಂದರು, ಮಧ್ಯ ಏಷ್ಯಾ ದೇಶಗಳೊಂದಿಗೆ ಭಾರತ, ಅಫ್ಗಾನಿಸ್ತಾನ ಮತ್ತು ಇರಾನಿನ ವಾಣಿಜ್ಯ ವಹಿವಾಟು ವಿಸ್ತರಿಸುವ ಮಹಾದ್ವಾರವಾಗಿ ಬಳಕೆಗೆ ಬರಲಿದೆ.</p>.<p class="bodytext">ಮುತ್ತಖಿ ಅವರ 6 ದಿನಗಳ ಭಾರತ ಪ್ರವಾಸವು ಅ.9ರಿಂದ ಆರಂಭಗೊಂಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿ ತಾಲಿಬಾನ್ ಸರ್ಕಾರದ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>