<p><strong>ಸಿಂಗಪುರ:</strong> ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಪ್ರಯಾಣಿಕರು ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಂಗಪುರ ಪ್ರಧಾನಿ ಲ್ಯಾವರೆನ್ಸ್ ವಾಂಗ್ ಪತ್ರ ಬರೆದಿದ್ದಾರೆ.</p><p>ಗುರುವಾರ ನಡೆದ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಹಾಗೂ ನಾಗರಿಕರು ಸೇರಿದಂತೆ ಕನಿಷ್ಠ 265 ಜನರು ಮೃತಪಟ್ಟಿದ್ದಾರೆ. </p><p>'ಜೂನ್ 12ರಂದು ನಡೆದ ಏರ್ ಇಂಡಿಯಾ ಎಐ171 ವಿಮಾನ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸಿಂಗಪುರ ಸರ್ಕಾರದ ಪರವಾಗಿ, ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಹಾಗೂ ಅವರ ಕುಟುಂಬದವರಿಗೆ ತೀವ್ರ ಸಂತಾಪವನ್ನು ಸೂಚಿಸುತ್ತೇವೆ. ದುಃಖದ ಸಮಯದಲ್ಲಿ ಭಾರತದ ಜೊತೆಗೆ ಸಿಂಗಪುರವಿರಲಿದೆ’ಎಂದು ಪತ್ರದಲ್ಲಿ ಬರೆದಿದ್ದಾರೆ.</p>.Ahmedabad Plane Crash | ಟೇಕಾಫ್ ಆದ 25 ಸೆಕೆಂಡುಗಳಲ್ಲಿ ಪತನಗೊಂಡ ಏರ್ ಇಂಡಿಯಾ.<p>ಸಿಂಗಪುರದ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಕೂಡ ಸಂತಾಪ ಸೂಚಿಸಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳಬೇಕಿದ್ದ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ಮೇಲೆ ಅಪ್ಪಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗಪುರ:</strong> ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಪ್ರಯಾಣಿಕರು ಮೃತಪಟ್ಟಿದ್ದು, ಮೃತರಿಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಂಗಪುರ ಪ್ರಧಾನಿ ಲ್ಯಾವರೆನ್ಸ್ ವಾಂಗ್ ಪತ್ರ ಬರೆದಿದ್ದಾರೆ.</p><p>ಗುರುವಾರ ನಡೆದ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಹಾಗೂ ನಾಗರಿಕರು ಸೇರಿದಂತೆ ಕನಿಷ್ಠ 265 ಜನರು ಮೃತಪಟ್ಟಿದ್ದಾರೆ. </p><p>'ಜೂನ್ 12ರಂದು ನಡೆದ ಏರ್ ಇಂಡಿಯಾ ಎಐ171 ವಿಮಾನ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ಸಿಂಗಪುರ ಸರ್ಕಾರದ ಪರವಾಗಿ, ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಹಾಗೂ ಅವರ ಕುಟುಂಬದವರಿಗೆ ತೀವ್ರ ಸಂತಾಪವನ್ನು ಸೂಚಿಸುತ್ತೇವೆ. ದುಃಖದ ಸಮಯದಲ್ಲಿ ಭಾರತದ ಜೊತೆಗೆ ಸಿಂಗಪುರವಿರಲಿದೆ’ಎಂದು ಪತ್ರದಲ್ಲಿ ಬರೆದಿದ್ದಾರೆ.</p>.Ahmedabad Plane Crash | ಟೇಕಾಫ್ ಆದ 25 ಸೆಕೆಂಡುಗಳಲ್ಲಿ ಪತನಗೊಂಡ ಏರ್ ಇಂಡಿಯಾ.<p>ಸಿಂಗಪುರದ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಕೂಡ ಸಂತಾಪ ಸೂಚಿಸಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.</p><p>ಅಹಮದಾಬಾದ್ನಿಂದ ಲಂಡನ್ಗೆ ತೆರಳಬೇಕಿದ್ದ ವಿಮಾನವು ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ವೈದ್ಯಕೀಯ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ಮೇಲೆ ಅಪ್ಪಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>