<p><strong>ವಿಶ್ವಸಂಸ್ಥೆ:</strong> ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ಸಂಘಟಿಸಿದ್ದ ಜೈಷ್–ಎ–ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ಗೆ ನಿರ್ಬಂಧ ವಿಧಿಸುವಂತೆ ಅಮೆರಿಕ, ಇಂಗ್ಲೆಂಡ್ ಹಾಗೂ ಫ್ರಾನ್ಸ್ ದೇಶಗಳ ರಾಜತಾಂತ್ರಿಕರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಒತ್ತಾಯಿಸಿದ್ದಾರೆ.</p>.<p>ಉಗ್ರ ಮಸೂದ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನಗಳು ನಡೆದಿವೆ.ಈ ಹಿಂದೆ2016 ಹಾಗೂ 17ರಲ್ಲಿ ಮಸೂದ್ಗೆ ನಿರ್ಬಂಧ ಹೇರಲು ಚೀನಾ ಅಡ್ಡಿಪಡಿಸಿತ್ತು. ಈ ಬಾರಿಯೂ ಚೀನಾ ತಕರಾರು ಎತ್ತಲಿದೆ ಎಂದು ರಾಜತಾಂತ್ರಿಕರು ಅಭಿಪ್ರಾಯಪಟ್ಟಿದ್ದಾರೆ.</p>.<p>ಜೆಇಎಂ 2001ರಲ್ಲಿ ತಾನಾಗಿಯೇ ಭಯೋತ್ಪಾದನೆ ಸಂಘಟನೆಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿತ್ತು. ಇದೀಗ ಫೆಬ್ರುವರಿ 14ರ ಪುಲ್ವಾಮಾ ದಾಳಿಯ ಹೊಣೆಯನ್ನೂ ಹೊತ್ತುಕೊಂಡಿದೆ.ಹೀಗಾಗಿ ಇದರ ನಾಯಕನ ವಿರುದ್ಧ ಮೂರು ರಾಷ್ಟ್ರಗಳು ಮನವಿ ಸಲ್ಲಿಸಿದ್ದು, ಅದನ್ನು ಪರಿಗಣಿಸಲು ಭದ್ರತಾ ಮಂಡಳಿಗೆ 10 ದಿನಗಳ ಕಾಲಾವಕಾಶವಿದೆ.</p>.<p>ಫೆಬ್ರುವರಿ 14ರ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಬಾಲಾಕೋಟ್ನಲ್ಲಿರುವ ಜೆಇಎಂ ಸಂಘಟನೆಯ ಶಿಬಿರಗಳನ್ನು ಗುರಿಯಾಗಿರಿಸಿ ಭಾರತವೂ ವಾಯುದಾಳಿ ನಡೆಸಿತ್ತು. 1971ರಿಂದ ಈಚೆಗೆ ಭಾರತ ಗಡಿದಾಟಿ ಹೋಗಿ ದಾಳಿ ನಡೆಸಿರುವುದು ಇದೇ ಮೊದಲು. ಹೀಗಾಗಿ ಪಾಕಿಸ್ತಾನವೂ ತಕ್ಕ ಉತ್ತರ ನೀಡುವುದಾಗಿ ಹೇಳಿತ್ತು.</p>.<p>ಅದರಂತೆ ಬುಧವಾರಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಪಾಕ್ ಪಡೆಗಳು ಶೆಲ್ ದಾಳಿ ನಡೆಸಿದ್ದವು. ಅದಲ್ಲದೆ ಆ ದೇಶದಯುದ್ಧ ವಿಮಾನಗಳು ಪೂಂಚ್ ಹಾಗೂ ನೌಶೆರಾ ಪ್ರದೇಶಗಳಲ್ಲಿನ ಭಾರತದ ವಾಯುವಲಯ ದಾಟಿ ಒಳನುಸುಳಿದ್ದವು. ಭಾರತೀಯ ಯುದ್ಧ ವಿಮಾನಗಳು ಅವುಗಳನ್ನು ಹಿಮ್ಮೆಟ್ಟಿಸಿ,ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದವು.</p>.<p>ಭಾರತದ ಎರಡು ಜೆಟ್ ವಿಮಾನಗಳನ್ನು ಹೊಡೆದುರುಳಿಸಿ ಇಬ್ಬರು ಪೈಲಟ್ಗಳನ್ನು ಸೆರೆಹಿಡಿದಿರುವುದಾಗಿ ಪಾಕ್ ಹೇಳಿಕೆ ಬಿಡುಗಡೆ ಮಾಡಿತ್ತು. ಬಳಿಕ ಒಬ್ಬ ಪೈಲಟ್ಅನ್ನು ಮಾತ್ರವೇ ಸೆರೆ ಹಿಡಿದಿರುವುದಾಗಿ ಮಾತು ಬದಲಿಸಿತ್ತು. ಜೊತೆಗೆ ವಿಡಿಯೊ ಬಿಡುಗಡೆ ಮಾಡಿತ್ತು.ಇದರಿಂದ ಬುಧವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಸದ್ಯ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಅಂಟೊನಿಯೊ ಗುಟೆರಸ್ ಮಾತನಾಡಿದ್ದು, ಭಾರತ–ಪಾಕಿಸ್ತಾನ ಶಾಂತಿ ಮಾತುಕತೆಗೆ ನೆರವಾಗುವುದಾಗಿ ಹೇಳಿದ್ದಾರೆ. ವಿಶ್ವಸಂಸ್ಥೆಯುಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮದ್ ಖುರೇಷಿಮನವಿ ಮಾಡಿದ್ದರು.</p>.<p>‘ಸದ್ಯದ ಒತ್ತಡವನ್ನು ಕಡಿಮೆ ಮಾಡಲು ಉಭಯ ರಾಷ್ಟ್ರಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಅರ್ಥಪೂರ್ಣ ಮಾತುಕತೆ, ಪರಸ್ಪರ ಒಪ್ಪಂದದ ಮೂಲಕ ಪ್ರಾದೇಶಿಕ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿಗಳನ್ನು ನಿರ್ವಹಿಸಬೇಕು’ ಎಂದುವಿಶ್ವಸಂಸ್ಥೆ ವಕ್ತಾರಸ್ಟೀಫನ್ ಡುವಾರಿಕ್ ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ಸಂಘಟಿಸಿದ್ದ ಜೈಷ್–ಎ–ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ಗೆ ನಿರ್ಬಂಧ ವಿಧಿಸುವಂತೆ ಅಮೆರಿಕ, ಇಂಗ್ಲೆಂಡ್ ಹಾಗೂ ಫ್ರಾನ್ಸ್ ದೇಶಗಳ ರಾಜತಾಂತ್ರಿಕರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಒತ್ತಾಯಿಸಿದ್ದಾರೆ.</p>.<p>ಉಗ್ರ ಮಸೂದ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನಗಳು ನಡೆದಿವೆ.ಈ ಹಿಂದೆ2016 ಹಾಗೂ 17ರಲ್ಲಿ ಮಸೂದ್ಗೆ ನಿರ್ಬಂಧ ಹೇರಲು ಚೀನಾ ಅಡ್ಡಿಪಡಿಸಿತ್ತು. ಈ ಬಾರಿಯೂ ಚೀನಾ ತಕರಾರು ಎತ್ತಲಿದೆ ಎಂದು ರಾಜತಾಂತ್ರಿಕರು ಅಭಿಪ್ರಾಯಪಟ್ಟಿದ್ದಾರೆ.</p>.<p>ಜೆಇಎಂ 2001ರಲ್ಲಿ ತಾನಾಗಿಯೇ ಭಯೋತ್ಪಾದನೆ ಸಂಘಟನೆಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿತ್ತು. ಇದೀಗ ಫೆಬ್ರುವರಿ 14ರ ಪುಲ್ವಾಮಾ ದಾಳಿಯ ಹೊಣೆಯನ್ನೂ ಹೊತ್ತುಕೊಂಡಿದೆ.ಹೀಗಾಗಿ ಇದರ ನಾಯಕನ ವಿರುದ್ಧ ಮೂರು ರಾಷ್ಟ್ರಗಳು ಮನವಿ ಸಲ್ಲಿಸಿದ್ದು, ಅದನ್ನು ಪರಿಗಣಿಸಲು ಭದ್ರತಾ ಮಂಡಳಿಗೆ 10 ದಿನಗಳ ಕಾಲಾವಕಾಶವಿದೆ.</p>.<p>ಫೆಬ್ರುವರಿ 14ರ ಆತ್ಮಾಹುತಿ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಬಾಲಾಕೋಟ್ನಲ್ಲಿರುವ ಜೆಇಎಂ ಸಂಘಟನೆಯ ಶಿಬಿರಗಳನ್ನು ಗುರಿಯಾಗಿರಿಸಿ ಭಾರತವೂ ವಾಯುದಾಳಿ ನಡೆಸಿತ್ತು. 1971ರಿಂದ ಈಚೆಗೆ ಭಾರತ ಗಡಿದಾಟಿ ಹೋಗಿ ದಾಳಿ ನಡೆಸಿರುವುದು ಇದೇ ಮೊದಲು. ಹೀಗಾಗಿ ಪಾಕಿಸ್ತಾನವೂ ತಕ್ಕ ಉತ್ತರ ನೀಡುವುದಾಗಿ ಹೇಳಿತ್ತು.</p>.<p>ಅದರಂತೆ ಬುಧವಾರಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಮೇಲೆ ಪಾಕ್ ಪಡೆಗಳು ಶೆಲ್ ದಾಳಿ ನಡೆಸಿದ್ದವು. ಅದಲ್ಲದೆ ಆ ದೇಶದಯುದ್ಧ ವಿಮಾನಗಳು ಪೂಂಚ್ ಹಾಗೂ ನೌಶೆರಾ ಪ್ರದೇಶಗಳಲ್ಲಿನ ಭಾರತದ ವಾಯುವಲಯ ದಾಟಿ ಒಳನುಸುಳಿದ್ದವು. ಭಾರತೀಯ ಯುದ್ಧ ವಿಮಾನಗಳು ಅವುಗಳನ್ನು ಹಿಮ್ಮೆಟ್ಟಿಸಿ,ಎಫ್–16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದವು.</p>.<p>ಭಾರತದ ಎರಡು ಜೆಟ್ ವಿಮಾನಗಳನ್ನು ಹೊಡೆದುರುಳಿಸಿ ಇಬ್ಬರು ಪೈಲಟ್ಗಳನ್ನು ಸೆರೆಹಿಡಿದಿರುವುದಾಗಿ ಪಾಕ್ ಹೇಳಿಕೆ ಬಿಡುಗಡೆ ಮಾಡಿತ್ತು. ಬಳಿಕ ಒಬ್ಬ ಪೈಲಟ್ಅನ್ನು ಮಾತ್ರವೇ ಸೆರೆ ಹಿಡಿದಿರುವುದಾಗಿ ಮಾತು ಬದಲಿಸಿತ್ತು. ಜೊತೆಗೆ ವಿಡಿಯೊ ಬಿಡುಗಡೆ ಮಾಡಿತ್ತು.ಇದರಿಂದ ಬುಧವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಸದ್ಯ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಅಂಟೊನಿಯೊ ಗುಟೆರಸ್ ಮಾತನಾಡಿದ್ದು, ಭಾರತ–ಪಾಕಿಸ್ತಾನ ಶಾಂತಿ ಮಾತುಕತೆಗೆ ನೆರವಾಗುವುದಾಗಿ ಹೇಳಿದ್ದಾರೆ. ವಿಶ್ವಸಂಸ್ಥೆಯುಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮದ್ ಖುರೇಷಿಮನವಿ ಮಾಡಿದ್ದರು.</p>.<p>‘ಸದ್ಯದ ಒತ್ತಡವನ್ನು ಕಡಿಮೆ ಮಾಡಲು ಉಭಯ ರಾಷ್ಟ್ರಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಅರ್ಥಪೂರ್ಣ ಮಾತುಕತೆ, ಪರಸ್ಪರ ಒಪ್ಪಂದದ ಮೂಲಕ ಪ್ರಾದೇಶಿಕ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿಗಳನ್ನು ನಿರ್ವಹಿಸಬೇಕು’ ಎಂದುವಿಶ್ವಸಂಸ್ಥೆ ವಕ್ತಾರಸ್ಟೀಫನ್ ಡುವಾರಿಕ್ ಕಿವಿಮಾತು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>