<p><strong>ವಾಷಿಂಗ್ಟನ್:</strong> ನ್ಯೂಯಾರ್ಕ್ನ ಗುರುದ್ವಾರಕ್ಕೆ ಭೇಟಿ ನೀಡಿದ್ದ ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರಿಗೆ ಕೆಲವರು ಅಡ್ಡಿಪಡಿಸಿದ ಘಟನೆಯನ್ನು ‘ಸಿಖ್ಸ್ ಫಾರ್ ಅಮೆರಿಕ’ ಸಂಘಟನೆ ಖಂಡಿಸಿದೆ.</p>.<p>‘ಸಿಖ್ ಸಮುದಾಯಕ್ಕೆ ಸೇರಿದ ಭಕ್ತರೊಬ್ಬರಿಗೆ ಅಗೌರವ ತೋರಿದ್ದನ್ನು ಸಂಘಟನೆಯು ಬಲವಾಗಿ ಖಂಡಿಸುತ್ತದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆಯು ಗುರುದ್ವಾರ ವ್ಯವಸ್ಥಾಪನಾ ಸಮಿತಿಯನ್ನು ಆಗ್ರಹಿಸಿದೆ.</p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯು, ‘ಗುರುದ್ವಾರಗಳು ಪ್ರಾರ್ಥನೆ ಸಲ್ಲಿಸುವ ಸ್ಥಳಗಳಾಗಿದ್ದು, ಇವುಗಳನ್ನು ವೈಯಕ್ತಿಕ ರಾಜಕಾರಣದಿಂದ ದೂರ ಇಡಬೇಕು’ ಎಂದು ಹೇಳಿದೆ.</p>.<p>ನ್ಯೂಯಾರ್ಕ್ನ ಹಿಕ್ಸ್ವಿಲ್ಲೆಯಲ್ಲಿರುವ ಗುರುದ್ವಾರಕ್ಕೆ ಭಾನುವಾರ ಭೇಟಿ ನೀಡಿದ್ದ ಸಂಧು ಅವರಿಗೆ ಖಾಲಿಸ್ತಾನ ಬೆಂಬಲಿಗರು ಅಡ್ಡಿಪಡಿಸಿದ್ದರು. ಕೆನಡಾದಲ್ಲಿ ನಡೆದಿರುವ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಸಂಧು ಅವರನ್ನು ಪ್ರಶ್ನೆ ಮಾಡಿದ್ದ ಅವರು, ಘೋಷಣೆಗಳನ್ನು ಕೂಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ನ್ಯೂಯಾರ್ಕ್ನ ಗುರುದ್ವಾರಕ್ಕೆ ಭೇಟಿ ನೀಡಿದ್ದ ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರಿಗೆ ಕೆಲವರು ಅಡ್ಡಿಪಡಿಸಿದ ಘಟನೆಯನ್ನು ‘ಸಿಖ್ಸ್ ಫಾರ್ ಅಮೆರಿಕ’ ಸಂಘಟನೆ ಖಂಡಿಸಿದೆ.</p>.<p>‘ಸಿಖ್ ಸಮುದಾಯಕ್ಕೆ ಸೇರಿದ ಭಕ್ತರೊಬ್ಬರಿಗೆ ಅಗೌರವ ತೋರಿದ್ದನ್ನು ಸಂಘಟನೆಯು ಬಲವಾಗಿ ಖಂಡಿಸುತ್ತದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಸಂಘಟನೆಯು ಗುರುದ್ವಾರ ವ್ಯವಸ್ಥಾಪನಾ ಸಮಿತಿಯನ್ನು ಆಗ್ರಹಿಸಿದೆ.</p>.<p>ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆಯು, ‘ಗುರುದ್ವಾರಗಳು ಪ್ರಾರ್ಥನೆ ಸಲ್ಲಿಸುವ ಸ್ಥಳಗಳಾಗಿದ್ದು, ಇವುಗಳನ್ನು ವೈಯಕ್ತಿಕ ರಾಜಕಾರಣದಿಂದ ದೂರ ಇಡಬೇಕು’ ಎಂದು ಹೇಳಿದೆ.</p>.<p>ನ್ಯೂಯಾರ್ಕ್ನ ಹಿಕ್ಸ್ವಿಲ್ಲೆಯಲ್ಲಿರುವ ಗುರುದ್ವಾರಕ್ಕೆ ಭಾನುವಾರ ಭೇಟಿ ನೀಡಿದ್ದ ಸಂಧು ಅವರಿಗೆ ಖಾಲಿಸ್ತಾನ ಬೆಂಬಲಿಗರು ಅಡ್ಡಿಪಡಿಸಿದ್ದರು. ಕೆನಡಾದಲ್ಲಿ ನಡೆದಿರುವ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ವಿಚಾರವಾಗಿ ಸಂಧು ಅವರನ್ನು ಪ್ರಶ್ನೆ ಮಾಡಿದ್ದ ಅವರು, ಘೋಷಣೆಗಳನ್ನು ಕೂಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>