<p><strong>ಲಾಹೋರ್: </strong>ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು, ಪಾಕಿಸ್ತಾನದೊಂದಿಗೆ ವಾಣಿಜ್ಯ ಮತ್ತು ಆರ್ಥಿಕ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ, ಪಾಕ್ ಜನರಿಗೆ ವೀಸಾ ಪ್ರಕ್ರಿಯೆಯನ್ನು ಸರಳಗೊಳಿಸಿದೆ.</p><p>ಬಾಂಗ್ಲಾದಲ್ಲಿ ಹಿಂದೂಗಳು ಹಾಗೂ ಧಾರ್ಮಿಕ ಅಲ್ಪ ಸಂಖ್ಯಾತರ ಮೇಲಿನ ದಾಳಿಯಿಂದಾಗಿ ಭಾರತದೊಂದಿಗಿನ ಸಂಬಂಧ ಹಳಸಿರುವ ಹೊತ್ತಿನಲ್ಲಿ ಈ ಕ್ರಮ ಕೈಗೊಂಡಿದೆ.</p><p>ವೀಸಾ ಅನುಮೋದಿಸಲು ಪಾಕ್ ರಾಯಭಾರ ಕಚೇರಿಗೆ ಢಾಕಾ ಅನುಮತಿ ನೀಡುವ ಅಗತ್ಯವಿತ್ತು. ಅದನ್ನು ಈಗ ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ ಎಂದು ಪಾಕಿಸ್ತಾನದಲ್ಲಿ ಬಾಂಗ್ಲಾದೇಶದ ಹೈಕಮಿಷನರ್ ಆಗಿರುವ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ. ಲಾಹೋರ್ನಲ್ಲಿ ಶನಿವಾರ ನಡೆದ ವಾಣಿಜ್ಯ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.</p><p>'ಹೂಡಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಎರಡೂ ರಾಷ್ಟ್ರಗಳು ಆದ್ಯತೆ ನೀಡಬೇಕು' ಎಂದು ಹುಸೇನ್ ಹೇಳಿರುವುದಾಗಿ 'ಡಾನ್' ನ್ಯೂಸ್ ವರದಿ ಮಾಡಿದೆ.</p><p>'ಉಭಯ ದೇಶಗಳ ನಡುವಣ ಸಂಬಂಧವು ದಶಕಗಳಿಂದ ತೃಪ್ತಿಕರವಾಗಿಲ್ಲ' ಎಂಬುದನ್ನು ಒತ್ತಿ ಹೇಳಿರುವ ಅವರು, ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾ ಮಧ್ಯಂತರ ಸರ್ಕಾರವು ಪಾಕ್ ಜೊತೆಗಿನ ಬಾಂಧವ್ಯವನ್ನು ಉತ್ತಮಪಡಿಸಲು ಉತ್ಸುಕವಾಗಿದೆ ಎಂದೂ ಹೇಳಿದ್ದಾರೆ.</p><p>'ಬಾಂಗ್ಲಾದೇಶವು, 18 ಕೋಟಿ ಜನಸಂಖ್ಯೆ ಹೊಂದಿದ್ದು, ಪ್ರಮುಖ ಗ್ರಾಹಕ ಮಾರುಕಟ್ಟೆಯನ್ನು ಪ್ರತಿನಿಧಿಸುತ್ತದೆ. ಇದರ ಲಾಭ ಪಡೆಯುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ' ಎಂದಿದ್ದಾರೆ.</p><p>ಪ್ರಾದೇಶಿಕ ಸಹಕಾರಕ್ಕಾಗಿ ಯೂನಸ್ ಅವರು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಪ್ರಸ್ತಾಪಿಸಿದ ಹುಸೇನ್, ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರಕ್ಕೂ ಕರೆ ನೀಡಿದ್ದಾರೆ.</p><p>ಪ್ರಾದೇಶಿಕ ವ್ಯಾಪಾರ ಮತ್ತು ಸಹಕಾರವನ್ನು ಸುಧಾರಿಸಲು ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘಟನೆ (ಎಸ್ಎಎಆರ್ಸಿ – ಸಾರ್ಕ್) ಅನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್: </strong>ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು, ಪಾಕಿಸ್ತಾನದೊಂದಿಗೆ ವಾಣಿಜ್ಯ ಮತ್ತು ಆರ್ಥಿಕ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ, ಪಾಕ್ ಜನರಿಗೆ ವೀಸಾ ಪ್ರಕ್ರಿಯೆಯನ್ನು ಸರಳಗೊಳಿಸಿದೆ.</p><p>ಬಾಂಗ್ಲಾದಲ್ಲಿ ಹಿಂದೂಗಳು ಹಾಗೂ ಧಾರ್ಮಿಕ ಅಲ್ಪ ಸಂಖ್ಯಾತರ ಮೇಲಿನ ದಾಳಿಯಿಂದಾಗಿ ಭಾರತದೊಂದಿಗಿನ ಸಂಬಂಧ ಹಳಸಿರುವ ಹೊತ್ತಿನಲ್ಲಿ ಈ ಕ್ರಮ ಕೈಗೊಂಡಿದೆ.</p><p>ವೀಸಾ ಅನುಮೋದಿಸಲು ಪಾಕ್ ರಾಯಭಾರ ಕಚೇರಿಗೆ ಢಾಕಾ ಅನುಮತಿ ನೀಡುವ ಅಗತ್ಯವಿತ್ತು. ಅದನ್ನು ಈಗ ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ ಎಂದು ಪಾಕಿಸ್ತಾನದಲ್ಲಿ ಬಾಂಗ್ಲಾದೇಶದ ಹೈಕಮಿಷನರ್ ಆಗಿರುವ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ. ಲಾಹೋರ್ನಲ್ಲಿ ಶನಿವಾರ ನಡೆದ ವಾಣಿಜ್ಯ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.</p><p>'ಹೂಡಿಕೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಎರಡೂ ರಾಷ್ಟ್ರಗಳು ಆದ್ಯತೆ ನೀಡಬೇಕು' ಎಂದು ಹುಸೇನ್ ಹೇಳಿರುವುದಾಗಿ 'ಡಾನ್' ನ್ಯೂಸ್ ವರದಿ ಮಾಡಿದೆ.</p><p>'ಉಭಯ ದೇಶಗಳ ನಡುವಣ ಸಂಬಂಧವು ದಶಕಗಳಿಂದ ತೃಪ್ತಿಕರವಾಗಿಲ್ಲ' ಎಂಬುದನ್ನು ಒತ್ತಿ ಹೇಳಿರುವ ಅವರು, ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾ ಮಧ್ಯಂತರ ಸರ್ಕಾರವು ಪಾಕ್ ಜೊತೆಗಿನ ಬಾಂಧವ್ಯವನ್ನು ಉತ್ತಮಪಡಿಸಲು ಉತ್ಸುಕವಾಗಿದೆ ಎಂದೂ ಹೇಳಿದ್ದಾರೆ.</p><p>'ಬಾಂಗ್ಲಾದೇಶವು, 18 ಕೋಟಿ ಜನಸಂಖ್ಯೆ ಹೊಂದಿದ್ದು, ಪ್ರಮುಖ ಗ್ರಾಹಕ ಮಾರುಕಟ್ಟೆಯನ್ನು ಪ್ರತಿನಿಧಿಸುತ್ತದೆ. ಇದರ ಲಾಭ ಪಡೆಯುವ ಸಾಮರ್ಥ್ಯ ಪಾಕಿಸ್ತಾನಕ್ಕೆ ಇದೆ' ಎಂದಿದ್ದಾರೆ.</p><p>ಪ್ರಾದೇಶಿಕ ಸಹಕಾರಕ್ಕಾಗಿ ಯೂನಸ್ ಅವರು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆಯೂ ಪ್ರಸ್ತಾಪಿಸಿದ ಹುಸೇನ್, ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರಕ್ಕೂ ಕರೆ ನೀಡಿದ್ದಾರೆ.</p><p>ಪ್ರಾದೇಶಿಕ ವ್ಯಾಪಾರ ಮತ್ತು ಸಹಕಾರವನ್ನು ಸುಧಾರಿಸಲು ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘಟನೆ (ಎಸ್ಎಎಆರ್ಸಿ – ಸಾರ್ಕ್) ಅನ್ನು ಪುನರುಜ್ಜೀವನಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>