<p><strong>ವಾಷಿಂಗ್ಟನ್</strong>: ರಿಲಯನ್ಸ್ ಫೌಂಡೇಷನ್ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರದ ಸ್ಥಾಪಕ ಅನಂತ್ ಅಂಬಾನಿ ಅವರಿಗೆ ಅಮೆರಿಕದ ಗ್ಲೋಬಲ್ ಹ್ಯೂಮನ್ ಸೊಸೈಟಿಯು ವಿಶ್ವ ಮಾನವೀಯ ಪ್ರಶಸ್ತಿ ಪ್ರದಾನ ಮಾಡಿದೆ. </p><p>ವನ್ಯಜೀವಿ ಸಂರಕ್ಷಣೆಯಲ್ಲಿ ಅನಂತ್ ಅಂಬಾನಿ ಅವರ ದೂರದೃಷ್ಟಿಯ ನಾಯಕತ್ವ, ವೈಜ್ಞಾನಿಕ ಕ್ರಮಗಳನ್ನು ಸಂಸ್ಥೆಯು ಶ್ಲಾಘಿಸಿದೆ. ಅಂತರ<br>ರಾಷ್ಟ್ರೀಯ ಮಟ್ಟದ ಈ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗ ಹಾಗೂ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅನಂತ್ ಪಾತ್ರರಾಗಿದ್ದಾರೆ. </p><p>ಅಳಿವಿನಂಚಿನಲ್ಲಿರುವ ವನ್ಯಜೀವಿ ತಳಿಗಳನ್ನು ಸಂರಕ್ಷಿಸುವಲ್ಲಿ ಅಂಬಾನಿ ಅವರ ಸುಸ್ಥಿರ ಕ್ರಮಗಳು ನೆರವಾಗಿವೆ. ವನ್ಯಜೀವಿಗಳು ಮತ್ತು ಮನುಷ್ಯರ ಬದುಕಿನಲ್ಲಿ ಗಮನಾರ್ಹ ಬದಲಾವಣೆ ತರಲು ಅಜೀವ ಬದ್ಧತೆ ಪ್ರದರ್ಶಿಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಮೀಸಲಿಡ<br>ಲಾಗಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಪ್ರಕಟಣೆ ತಿಳಿಸಿದೆ. </p><p>‘ಅತ್ಯುತ್ಕೃಷ್ಟ ಕಾಳಜಿ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ವಂತಾರ ಎತ್ತಿ ಹಿಡಿದಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಿಇಒ ಡಾ. ರಾಬಿನ್ ಗ್ಯಾನ್ಜೆರ್ಟ್ ಹೇಳಿದ್ದಾರೆ. </p><p>’ಪ್ರಾಣಿಗಳು ನಮಗೆ ಮಾನವೀಯತೆ, ವಿಶ್ವಾಸ ಮತ್ತು ಬದುಕಿನ ಸಮತೋಲನವನ್ನು ಕಲಿಸುತ್ತವೆ. ಸೇವೆಯ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ವಂತಾರ ಮಾಡುತ್ತಿದೆ’ ಎಂದು ಅನಂತ್ ಅಂಬಾನಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ರಿಲಯನ್ಸ್ ಫೌಂಡೇಷನ್ ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರದ ಸ್ಥಾಪಕ ಅನಂತ್ ಅಂಬಾನಿ ಅವರಿಗೆ ಅಮೆರಿಕದ ಗ್ಲೋಬಲ್ ಹ್ಯೂಮನ್ ಸೊಸೈಟಿಯು ವಿಶ್ವ ಮಾನವೀಯ ಪ್ರಶಸ್ತಿ ಪ್ರದಾನ ಮಾಡಿದೆ. </p><p>ವನ್ಯಜೀವಿ ಸಂರಕ್ಷಣೆಯಲ್ಲಿ ಅನಂತ್ ಅಂಬಾನಿ ಅವರ ದೂರದೃಷ್ಟಿಯ ನಾಯಕತ್ವ, ವೈಜ್ಞಾನಿಕ ಕ್ರಮಗಳನ್ನು ಸಂಸ್ಥೆಯು ಶ್ಲಾಘಿಸಿದೆ. ಅಂತರ<br>ರಾಷ್ಟ್ರೀಯ ಮಟ್ಟದ ಈ ಪುರಸ್ಕಾರ ಪಡೆದ ಏಷ್ಯಾದ ಮೊದಲಿಗ ಹಾಗೂ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅನಂತ್ ಪಾತ್ರರಾಗಿದ್ದಾರೆ. </p><p>ಅಳಿವಿನಂಚಿನಲ್ಲಿರುವ ವನ್ಯಜೀವಿ ತಳಿಗಳನ್ನು ಸಂರಕ್ಷಿಸುವಲ್ಲಿ ಅಂಬಾನಿ ಅವರ ಸುಸ್ಥಿರ ಕ್ರಮಗಳು ನೆರವಾಗಿವೆ. ವನ್ಯಜೀವಿಗಳು ಮತ್ತು ಮನುಷ್ಯರ ಬದುಕಿನಲ್ಲಿ ಗಮನಾರ್ಹ ಬದಲಾವಣೆ ತರಲು ಅಜೀವ ಬದ್ಧತೆ ಪ್ರದರ್ಶಿಸುವ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ಮೀಸಲಿಡ<br>ಲಾಗಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಪ್ರಕಟಣೆ ತಿಳಿಸಿದೆ. </p><p>‘ಅತ್ಯುತ್ಕೃಷ್ಟ ಕಾಳಜಿ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ವಂತಾರ ಎತ್ತಿ ಹಿಡಿದಿದೆ’ ಎಂದು ಗ್ಲೋಬಲ್ ಹ್ಯೂಮನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಿಇಒ ಡಾ. ರಾಬಿನ್ ಗ್ಯಾನ್ಜೆರ್ಟ್ ಹೇಳಿದ್ದಾರೆ. </p><p>’ಪ್ರಾಣಿಗಳು ನಮಗೆ ಮಾನವೀಯತೆ, ವಿಶ್ವಾಸ ಮತ್ತು ಬದುಕಿನ ಸಮತೋಲನವನ್ನು ಕಲಿಸುತ್ತವೆ. ಸೇವೆಯ ಮೂಲಕ ಪ್ರತಿಯೊಂದು ಪ್ರಾಣಿಯ ಘನತೆಯನ್ನು ಎತ್ತಿ ಹಿಡಿಯುವ ಕೆಲಸವನ್ನು ವಂತಾರ ಮಾಡುತ್ತಿದೆ’ ಎಂದು ಅನಂತ್ ಅಂಬಾನಿ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>