<p><strong>ಟೊರಾಂಟೊ</strong>: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪ್ರಮುಖ ಹಿಂದೂ ದೇವಾಲಯವನ್ನು ಖಾಲಿಸ್ತಾನ್ನ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ.</p><p>ಸರ್ರೆಯಲ್ಲಿರುವ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಫೇಸ್ಬುಕ್ ಪುಟದ ಪ್ರಕಾರ, ಆಗಸ್ಟ್ 12 ರಂದು ತಡರಾತ್ರಿ 12.29ಕ್ಕೆ ದೇಗುಲದ ಗೋಡೆ ಹಾರಿ ಬಂದ ಒಬ್ಬ ಪುರುಷ ಮತ್ತು ಮಹಿಳೆ ಉದ್ದೇಶಪೂರ್ವಕವಾಗಿ #Khalistanreferendum ಪೋಸ್ಟರ್ಗಳನ್ನು ಸರ್ರೆ ಮಂದಿರದ ಮುಖ್ಯ ಪ್ರವೇಶ ದ್ವಾರ ಮತ್ತು ಮುಖ್ಯ ಪ್ರವೇಶದ್ವಾರದಲ್ಲಿ ಅಂಟಿಸಿದ್ದಾರೆ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.</p><p>ಕೆನಡಾದಲ್ಲಿ ಖಾಲಿಸ್ತಾನ್ನ ಬೆಂಬಲಿಗರು ಹಿಂದೂ ದೇವಾಲಯಗಳ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಭಾರತ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸಲು ಈ ಕೃತ್ಯ ಎಸಗಲಾಗಿದೆ ಎಂದು ಹೇಳಿದೆ.</p><p>‘ನ್ಯಾಯ ಬೇಕಿದ್ದರೆ ಕಾನೂನು ಮಾರ್ಗಗಳನ್ನು ಅನುಸರಿಸಬೇಕು. ಪವಿತ್ರ ಸ್ಥಳವನ್ನು ಅವಮಾನಿಸುವುದಲ್ಲ’ ಎಂದು ದೇವಾಲಯದ ವೆಬ್ಸೈಟ್ ತಿಳಿಸಿದೆ.</p><p>ದೇವಾಲಯ ವಿರೂಪಗೊಳಿಸಿರುವುದು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಟೊರಾಂಟೊದಲ್ಲಿನ ಭಾರತದ ಕಾನ್ಸಲ್ ಜನರಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೊರಾಂಟೊ</strong>: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪ್ರಮುಖ ಹಿಂದೂ ದೇವಾಲಯವನ್ನು ಖಾಲಿಸ್ತಾನ್ನ ಬೆಂಬಲಿಗರು ಧ್ವಂಸಗೊಳಿಸಿದ್ದಾರೆ.</p><p>ಸರ್ರೆಯಲ್ಲಿರುವ ಲಕ್ಷ್ಮಿ ನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಫೇಸ್ಬುಕ್ ಪುಟದ ಪ್ರಕಾರ, ಆಗಸ್ಟ್ 12 ರಂದು ತಡರಾತ್ರಿ 12.29ಕ್ಕೆ ದೇಗುಲದ ಗೋಡೆ ಹಾರಿ ಬಂದ ಒಬ್ಬ ಪುರುಷ ಮತ್ತು ಮಹಿಳೆ ಉದ್ದೇಶಪೂರ್ವಕವಾಗಿ #Khalistanreferendum ಪೋಸ್ಟರ್ಗಳನ್ನು ಸರ್ರೆ ಮಂದಿರದ ಮುಖ್ಯ ಪ್ರವೇಶ ದ್ವಾರ ಮತ್ತು ಮುಖ್ಯ ಪ್ರವೇಶದ್ವಾರದಲ್ಲಿ ಅಂಟಿಸಿದ್ದಾರೆ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.</p><p>ಕೆನಡಾದಲ್ಲಿ ಖಾಲಿಸ್ತಾನ್ನ ಬೆಂಬಲಿಗರು ಹಿಂದೂ ದೇವಾಲಯಗಳ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿರುವ ಭಾರತ, ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಹಿಂದೂಗಳಲ್ಲಿ ಭಯದ ವಾತಾವರಣ ಸೃಷ್ಟಿಸಲು ಈ ಕೃತ್ಯ ಎಸಗಲಾಗಿದೆ ಎಂದು ಹೇಳಿದೆ.</p><p>‘ನ್ಯಾಯ ಬೇಕಿದ್ದರೆ ಕಾನೂನು ಮಾರ್ಗಗಳನ್ನು ಅನುಸರಿಸಬೇಕು. ಪವಿತ್ರ ಸ್ಥಳವನ್ನು ಅವಮಾನಿಸುವುದಲ್ಲ’ ಎಂದು ದೇವಾಲಯದ ವೆಬ್ಸೈಟ್ ತಿಳಿಸಿದೆ.</p><p>ದೇವಾಲಯ ವಿರೂಪಗೊಳಿಸಿರುವುದು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಟೊರಾಂಟೊದಲ್ಲಿನ ಭಾರತದ ಕಾನ್ಸಲ್ ಜನರಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>