ವಿದ್ಯಾರ್ಥಿ ಸಾವು ದುರದೃಷ್ಟಕರ. ಉಮಾ ಸತ್ಯಸಾಯಿ ನಿಧನದಿಂದ ತೀವ್ರ ದುಃಖವಾಗಿದೆ. ಮೃತ ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸುವುದು ಸೇರಿದಂತೆ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮಾಡಲಾಗುವುದು ಎಂದು ಭಾರತೀಯ ರಾಯಭಾರಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದು ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅರಾಫತ್ ನಿಗೂಢವಾಗಿ ಮೃತಪಟ್ಟಿದ್ದ. ಈ ವರ್ಷದ ಆರಂಭದಲ್ಲಿ ಹೈದರಾಬಾದ್ನ ವಿದ್ಯಾರ್ಥಿ ಸೈಯದ್ ಅಲಿ, ಇಂಡಿಯಾನದಲ್ಲಿ ನೀಲ್ ಆಚಾರ್ಯ, ಜಾರ್ಜಿಯಾದಲ್ಲಿ ವಿವೇಕ್ ಸೈನಿ ಅವರ ಹತ್ಯೆ ನಡೆದಿತ್ತು.
ಈ ವರ್ಷದಲ್ಲಿ ಇಲ್ಲಿಯವರೆಗೂ 10 ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.