<p class="title"><strong>ಢಾಕಾ: </strong>ಬಾಂಗ್ಲಾ ದೇಶಕ್ಕೆ ಭೇಟಿ ನೀಡಿರುವ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ, ಬಾಂಗ್ಲಾ ವಿಮೋಚನೆಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದವರಿಗೆ ಗುರುವಾರ ಗೌರವ ನಮನ ಸಲ್ಲಿಸಿದರು.</p>.<p class="title">ಬಾಂಗ್ಲಾ ಸೇನಾ ಮುಖ್ಯಸ್ಥ ಜನರಲ್ ಅಜೀಜ್ ಅಹ್ಮದ್ ಅವರ ಆಹ್ವಾನದ ಮೇರೆಗೆ ನರವಣೆ ಅವರು ಬಾಂಗ್ಲಾ ದೇಶಕ್ಕೆ ಐದು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸೇನಾಕುಂಜ್ನಲ್ಲಿ ಜನರಲ್ ನರವಣೆ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.</p>.<p class="title">ಉಭಯ ದೇಶಗಳ ಸಶಸ್ತ್ರ ಪಡೆಗಳ ನಡುವಿನ ಸಂಬಂಧದ ಸುಧಾರಣೆ ಕುರಿತು ಉಭಯ ದೇಶಗಳು ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಏಪ್ರಿಲ್ 8 ರಿಂದ 12ರವರೆಗಿನ ಈ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಬಲಗೊಳ್ಳಲು ನೆರವಾಗಲಿದೆ’ ಎಂದು ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್ ಹೇಳಿದರು.</p>.<p>‘ಜನರಲ್ ನರವಣೆ ಅವರು ಬಾಂಗ್ಲಾದೇಶಕ್ಕೆ 5 ದಿನಗಳ ಭೇಟಿ ನೀಡಿದ್ದು, ಮೊದಲನೇ ದಿನ ಶಿಖಾ ಅನಿರ್ಬನ್ನಲ್ಲಿ ಬಾಂಗ್ಲಾ ವಿಮೋಚನೆಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿದರು. ಬಾಂಗ್ಲಾ ಸೇನೆಯ ಮೂರು ಮುಖ್ಯಸ್ಥರನ್ನು ಅವರು ಭೇಟಿಯಾಗಲಿದ್ದಾರೆ’ ಎಂದು ಎಡಿಜಿ- ಪಿಐ (ಭಾರತೀಯ ಸೇನೆ) ಟ್ವೀಟ್ ಮಾಡಿದೆ.</p>.<p>ಸೇನಾ ಮುಖ್ಯಸ್ಥರು ಏಪ್ರಿಲ್ 11 ರಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.</p>.<p>‘ವಿಶ್ವಸಂಸ್ಥೆಯ ಶಾಂತಿ ಬೆಂಬಲ ಕಾರ್ಯಾಚರಣೆ ಕುರಿತ ವಿಚಾರ ಸಂಕಿರಣದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ಭಯೋತ್ಪಾದನೆ ವಿರುದ್ಧ ವಿವಿಧ ದೇಶಗಳು ನಡೆಸುತ್ತಿರುವ ಜಂಟಿ ಸಮರಾಭ್ಯಾಸದ ಸಮಾರೋಪ ಸಮಾರಂಭದಲ್ಲಿಯೂ ಅವರು ಭಾಗವಹಿಸಲಿದ್ದಾರೆ’ ಎಂದು ಭಾರತದ ರಾಯಭಾರ ಕಚೇರಿಯ ಹೇಳಿಕೆ ತಿಳಿಸಿದೆ.</p>.<p>ಭಾರತ, ಬಾಂಗ್ಲಾ ಸೇನೆಯ ಜೊತೆಗೆ ಭೂತಾನ್, ಶ್ರೀಲಂಕಾ, ಅಮೆರಿಕ, ಇಂಗ್ಲೆಂಡ್, ಟರ್ಕಿ ಮತ್ತು ಸೌದಿ ಅರೇಬಿಯಾ ಸೇನೆಯೂ ತಾಲೀಮಿನಲ್ಲಿ ಭಾಗವಹಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಢಾಕಾ: </strong>ಬಾಂಗ್ಲಾ ದೇಶಕ್ಕೆ ಭೇಟಿ ನೀಡಿರುವ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ, ಬಾಂಗ್ಲಾ ವಿಮೋಚನೆಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದವರಿಗೆ ಗುರುವಾರ ಗೌರವ ನಮನ ಸಲ್ಲಿಸಿದರು.</p>.<p class="title">ಬಾಂಗ್ಲಾ ಸೇನಾ ಮುಖ್ಯಸ್ಥ ಜನರಲ್ ಅಜೀಜ್ ಅಹ್ಮದ್ ಅವರ ಆಹ್ವಾನದ ಮೇರೆಗೆ ನರವಣೆ ಅವರು ಬಾಂಗ್ಲಾ ದೇಶಕ್ಕೆ ಐದು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಸೇನಾಕುಂಜ್ನಲ್ಲಿ ಜನರಲ್ ನರವಣೆ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.</p>.<p class="title">ಉಭಯ ದೇಶಗಳ ಸಶಸ್ತ್ರ ಪಡೆಗಳ ನಡುವಿನ ಸಂಬಂಧದ ಸುಧಾರಣೆ ಕುರಿತು ಉಭಯ ದೇಶಗಳು ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ಏಪ್ರಿಲ್ 8 ರಿಂದ 12ರವರೆಗಿನ ಈ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಇನ್ನಷ್ಟು ಬಲಗೊಳ್ಳಲು ನೆರವಾಗಲಿದೆ’ ಎಂದು ಸೇನಾ ವಕ್ತಾರ ಕರ್ನಲ್ ಅಮನ್ ಆನಂದ್ ಹೇಳಿದರು.</p>.<p>‘ಜನರಲ್ ನರವಣೆ ಅವರು ಬಾಂಗ್ಲಾದೇಶಕ್ಕೆ 5 ದಿನಗಳ ಭೇಟಿ ನೀಡಿದ್ದು, ಮೊದಲನೇ ದಿನ ಶಿಖಾ ಅನಿರ್ಬನ್ನಲ್ಲಿ ಬಾಂಗ್ಲಾ ವಿಮೋಚನೆಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿದರು. ಬಾಂಗ್ಲಾ ಸೇನೆಯ ಮೂರು ಮುಖ್ಯಸ್ಥರನ್ನು ಅವರು ಭೇಟಿಯಾಗಲಿದ್ದಾರೆ’ ಎಂದು ಎಡಿಜಿ- ಪಿಐ (ಭಾರತೀಯ ಸೇನೆ) ಟ್ವೀಟ್ ಮಾಡಿದೆ.</p>.<p>ಸೇನಾ ಮುಖ್ಯಸ್ಥರು ಏಪ್ರಿಲ್ 11 ರಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.</p>.<p>‘ವಿಶ್ವಸಂಸ್ಥೆಯ ಶಾಂತಿ ಬೆಂಬಲ ಕಾರ್ಯಾಚರಣೆ ಕುರಿತ ವಿಚಾರ ಸಂಕಿರಣದಲ್ಲಿ ಭಾರತೀಯ ಸೇನಾ ಮುಖ್ಯಸ್ಥರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ಭಯೋತ್ಪಾದನೆ ವಿರುದ್ಧ ವಿವಿಧ ದೇಶಗಳು ನಡೆಸುತ್ತಿರುವ ಜಂಟಿ ಸಮರಾಭ್ಯಾಸದ ಸಮಾರೋಪ ಸಮಾರಂಭದಲ್ಲಿಯೂ ಅವರು ಭಾಗವಹಿಸಲಿದ್ದಾರೆ’ ಎಂದು ಭಾರತದ ರಾಯಭಾರ ಕಚೇರಿಯ ಹೇಳಿಕೆ ತಿಳಿಸಿದೆ.</p>.<p>ಭಾರತ, ಬಾಂಗ್ಲಾ ಸೇನೆಯ ಜೊತೆಗೆ ಭೂತಾನ್, ಶ್ರೀಲಂಕಾ, ಅಮೆರಿಕ, ಇಂಗ್ಲೆಂಡ್, ಟರ್ಕಿ ಮತ್ತು ಸೌದಿ ಅರೇಬಿಯಾ ಸೇನೆಯೂ ತಾಲೀಮಿನಲ್ಲಿ ಭಾಗವಹಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>