<p><strong>ಬ್ರಾಸಿಲಿಯಾ(ಬ್ರೆಸಿಲ್):</strong> ಬ್ರೆಜಿಲ್ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಮತ್ತು ಮಣ್ಣು ಕುಸಿತ ಸೇರಿದಂತೆ ಮಳೆ ಸಂಬಂಧಿತ ಅವಘಡಗಳಲ್ಲಿ 57 ಮಂದಿ ಮೃತಪಟ್ಟಿದ್ದಾರೆ.</p><p>ಸಾವಿರಾರು ಮಂದಿ ಮನೆಗಳನ್ನು ತೊರೆದಿದ್ದು, ಕುಸಿದ ರಸ್ತೆ, ಸೇತುವೆ, ಮನೆಗಳ ಅವಶೇಷಗಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.</p><p>ಜಲಾಶಯಗಳಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಿಯೊ ಗ್ರ್ಯಾಂಡೆ ಡೊ ಸುಲ್ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಗವರ್ನರ್ ಎಡ್ವರ್ಡೊ ಲೀಟೆ ಆದೇಶಿಸಿದ್ದಾರೆ.</p><p>‘ಇತಿಹಾಸದಲ್ಲೇ ಅತ್ಯಂತ ಕೆಟ್ಟ ಪ್ರಾಕೃತಿಕ ವಿಕೋಪವನ್ನು ನಾವು ಎದುರಿಸುತ್ತಿದ್ದೇವೆ’ ಎಂದು ಲೀಟೆ ಹೇಳಿದ್ದಾರೆ.</p><p>ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಲ್ ಜಝೀರಾ ವರದಿ ಮಾಡಿದೆ.</p>. <p>ರಕ್ಷಣಾ ಕಾರ್ಯಾಚರಣೆ ಸಂಪೂರ್ಣ ನೆರವು ನೀಡುವುದಾಗಿ ಘೋಷಿಸಿರುವ ಅಧ್ಯಕ್ಷ ಲೂಸ್ ಇನ್ಯಾಸಿಯೊ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ರಕ್ಷಣಾ ತಂಡ ಮತ್ತು ಅಗತ್ಯ ವಸ್ತುಗಳ ಯಾವುದೇ ಕೊರತೆ ಇಲ್ಲ ಎಂದಿದ್ದಾರೆ.</p><p>ಗುವಾಬ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮತ್ತಷ್ಟು ಆತಂಕ ಶುರುವಾಗಿದೆ. ನದಿ ಸಮೀಪದ ಅತ್ಯಂತ ಅಪಾಯದ ಪ್ರದೇಶಗಳಿಂದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಾಸಿಲಿಯಾ(ಬ್ರೆಸಿಲ್):</strong> ಬ್ರೆಜಿಲ್ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಪ್ರವಾಹ ಮತ್ತು ಮಣ್ಣು ಕುಸಿತ ಸೇರಿದಂತೆ ಮಳೆ ಸಂಬಂಧಿತ ಅವಘಡಗಳಲ್ಲಿ 57 ಮಂದಿ ಮೃತಪಟ್ಟಿದ್ದಾರೆ.</p><p>ಸಾವಿರಾರು ಮಂದಿ ಮನೆಗಳನ್ನು ತೊರೆದಿದ್ದು, ಕುಸಿದ ರಸ್ತೆ, ಸೇತುವೆ, ಮನೆಗಳ ಅವಶೇಷಗಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.</p><p>ಜಲಾಶಯಗಳಲ್ಲಿ ನೀರಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಿಯೊ ಗ್ರ್ಯಾಂಡೆ ಡೊ ಸುಲ್ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ ಗವರ್ನರ್ ಎಡ್ವರ್ಡೊ ಲೀಟೆ ಆದೇಶಿಸಿದ್ದಾರೆ.</p><p>‘ಇತಿಹಾಸದಲ್ಲೇ ಅತ್ಯಂತ ಕೆಟ್ಟ ಪ್ರಾಕೃತಿಕ ವಿಕೋಪವನ್ನು ನಾವು ಎದುರಿಸುತ್ತಿದ್ದೇವೆ’ ಎಂದು ಲೀಟೆ ಹೇಳಿದ್ದಾರೆ.</p><p>ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಲ್ ಜಝೀರಾ ವರದಿ ಮಾಡಿದೆ.</p>. <p>ರಕ್ಷಣಾ ಕಾರ್ಯಾಚರಣೆ ಸಂಪೂರ್ಣ ನೆರವು ನೀಡುವುದಾಗಿ ಘೋಷಿಸಿರುವ ಅಧ್ಯಕ್ಷ ಲೂಸ್ ಇನ್ಯಾಸಿಯೊ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಪ್ರದೇಶಗಳಲ್ಲಿ ರಕ್ಷಣಾ ತಂಡ ಮತ್ತು ಅಗತ್ಯ ವಸ್ತುಗಳ ಯಾವುದೇ ಕೊರತೆ ಇಲ್ಲ ಎಂದಿದ್ದಾರೆ.</p><p>ಗುವಾಬ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮತ್ತಷ್ಟು ಆತಂಕ ಶುರುವಾಗಿದೆ. ನದಿ ಸಮೀಪದ ಅತ್ಯಂತ ಅಪಾಯದ ಪ್ರದೇಶಗಳಿಂದ ಜನರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>