<p><strong>ಇಸ್ಲಾಮಾಬಾದ್/ಕರಾಚಿ:</strong> ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚ್ ಉಗ್ರರು 9 ಮಂದಿ ಪ್ರಯಾಣಿಕರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಝೋಬ್ ಜಿಲ್ಲೆಯ ಸುರ್-ಡಕೈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.</p>.<p>ಶಸ್ತ್ರಸಜ್ಜಿತ ಉಗ್ರರು ಪಂಜಾಬ್ಗೆ ಹೋಗುತ್ತಿದ್ದ ಎರಡು ಬಸ್ಗಳನ್ನು ತಡೆದಿದ್ದಾರೆ. ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 9 ಪ್ರಯಾಣಿಕರನ್ನು ಬಸ್ಗಳಿಂದ ಇಳಿಸಿ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಆಲಂ ಹೇಳಿದ್ದಾರೆ.</p>.<p>ಮೃತ 9 ಮಂದಿ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರು ಎಂದೂ ಅವರು ತಿಳಿಸಿದ್ದಾರೆ.</p>.<p>ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLF) ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.</p>.<p>9 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಉಗ್ರರರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾ ಆರಂಭಿಸಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಪ್ರಯಾಣಿಕರ ಹತ್ಯೆಯನ್ನು ಖಂಡಿಸಿದ ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಸರ್ಫರಾಜ್ ಬುಗ್ತಿ, 'ಅಮಾಯಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ' ಎಂದು ಹೇಳಿದ್ದಾರೆ.</p>.<p>ಭಯೋತ್ಪಾದಕರು ತಾವು ಮನುಷ್ಯರಲ್ಲ, ಹೇಡಿತನದ ಮೃಗಗಳು ಎಂದು ಸಾಬೀತುಪಡಿಸಿದ್ದಾರೆ. ಬಲೂಚಿಸ್ತಾನದ ನೆಲದಲ್ಲಿ ಅಮಾಯಕರ ರಕ್ತ ವ್ಯರ್ಥವಾಗಲು ಬಿಡುವುದಿಲ್ಲ. ಹಂತಕರು ಎಲ್ಲೇ ಅಡಗಿದ್ದರೂ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಬುಗ್ತಿ ಹೇಳಿದ್ದಾರೆ.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್/ಕರಾಚಿ:</strong> ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚ್ ಉಗ್ರರು 9 ಮಂದಿ ಪ್ರಯಾಣಿಕರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>ಝೋಬ್ ಜಿಲ್ಲೆಯ ಸುರ್-ಡಕೈ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ತಿಳಿಸಿದ್ದಾರೆ.</p>.<p>ಶಸ್ತ್ರಸಜ್ಜಿತ ಉಗ್ರರು ಪಂಜಾಬ್ಗೆ ಹೋಗುತ್ತಿದ್ದ ಎರಡು ಬಸ್ಗಳನ್ನು ತಡೆದಿದ್ದಾರೆ. ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, 9 ಪ್ರಯಾಣಿಕರನ್ನು ಬಸ್ಗಳಿಂದ ಇಳಿಸಿ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಆಲಂ ಹೇಳಿದ್ದಾರೆ.</p>.<p>ಮೃತ 9 ಮಂದಿ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರು ಎಂದೂ ಅವರು ತಿಳಿಸಿದ್ದಾರೆ.</p>.<p>ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLF) ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.</p>.<p>9 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಉಗ್ರರರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾ ಆರಂಭಿಸಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>ಪ್ರಯಾಣಿಕರ ಹತ್ಯೆಯನ್ನು ಖಂಡಿಸಿದ ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಸರ್ಫರಾಜ್ ಬುಗ್ತಿ, 'ಅಮಾಯಕರನ್ನು ಕೊಲ್ಲುವುದು ಅಕ್ಷಮ್ಯ ಅಪರಾಧ' ಎಂದು ಹೇಳಿದ್ದಾರೆ.</p>.<p>ಭಯೋತ್ಪಾದಕರು ತಾವು ಮನುಷ್ಯರಲ್ಲ, ಹೇಡಿತನದ ಮೃಗಗಳು ಎಂದು ಸಾಬೀತುಪಡಿಸಿದ್ದಾರೆ. ಬಲೂಚಿಸ್ತಾನದ ನೆಲದಲ್ಲಿ ಅಮಾಯಕರ ರಕ್ತ ವ್ಯರ್ಥವಾಗಲು ಬಿಡುವುದಿಲ್ಲ. ಹಂತಕರು ಎಲ್ಲೇ ಅಡಗಿದ್ದರೂ ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಬುಗ್ತಿ ಹೇಳಿದ್ದಾರೆ.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>