<p><strong>ಬ್ಯಾಂಕಾಕ್</strong>: ಮ್ಯಾನ್ಮಾರ್ನ ಮಧ್ಯ ಭಾಗದ ಸಾಗ್ಯಾಂಗ್ ಪ್ರಾಂತ್ಯದ ಬೌದ್ಧ ವಿಹಾರದ ಮೇಲೆ ನಡೆದ ವಾಯುದಾಳಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ.</p>.<p>‘ಲಿನ್ ತ–ಲು ಗ್ರಾಮದಲ್ಲಿರುವ ವಿಹಾರದ ಮೇಲೆ ರಾತ್ರಿ ವೇಳೆ ನಡೆದ ದಾಳಿಯಲ್ಲಿ 30 ಮಂದಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ’ ಎಂದು ಬಂಡುಕೋರರ ಗುಂಪಿನ ಸದಸ್ಯರು ತಿಳಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ನಡೆದ ಸಂಘರ್ಷದಿಂದಾಗಿ 150ಕ್ಕೂ ಅಧಿಕ ಗ್ರಾಮಸ್ಥರು ವಿಹಾರದಲ್ಲಿ ನೆಲೆ ಪಡೆದಿದ್ದರು. ರಾತ್ರಿ 1 ಗಂಟೆ ವೇಳೆ ಯುದ್ಧ ವಿಮಾನದ ಮೂಲಕ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p class="title">2021ರಲ್ಲಿ ಮ್ಯಾನ್ಮಾರ್ನಲ್ಲಿ ಅಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಅಧಿಕಾರ ಕಿತ್ತುಕೊಂಡು, ಸೇನೆಯು ಆಡಳಿತ ನಡೆಸುತ್ತಿದೆ. ಇಡೀ ದೇಶದಲ್ಲಿ ದಂಗೆ ಆರಂಭವಾಗಿದ್ದು, ಪ್ರತಿರೋಧ ವ್ಯಕ್ತಪಡಿಸುವವರ ವಿರುದ್ಧ ಸೇನೆಯು ಹಿಂಸಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ದಾಳಿ ಕುರಿತು ಸೇನೆಯು ಪ್ರತಿಕ್ರಿಯಿಸಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್</strong>: ಮ್ಯಾನ್ಮಾರ್ನ ಮಧ್ಯ ಭಾಗದ ಸಾಗ್ಯಾಂಗ್ ಪ್ರಾಂತ್ಯದ ಬೌದ್ಧ ವಿಹಾರದ ಮೇಲೆ ನಡೆದ ವಾಯುದಾಳಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ.</p>.<p>‘ಲಿನ್ ತ–ಲು ಗ್ರಾಮದಲ್ಲಿರುವ ವಿಹಾರದ ಮೇಲೆ ರಾತ್ರಿ ವೇಳೆ ನಡೆದ ದಾಳಿಯಲ್ಲಿ 30 ಮಂದಿ ಗಾಯಗೊಂಡಿದ್ದು, ಈ ಪೈಕಿ 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ’ ಎಂದು ಬಂಡುಕೋರರ ಗುಂಪಿನ ಸದಸ್ಯರು ತಿಳಿಸಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ನಡೆದ ಸಂಘರ್ಷದಿಂದಾಗಿ 150ಕ್ಕೂ ಅಧಿಕ ಗ್ರಾಮಸ್ಥರು ವಿಹಾರದಲ್ಲಿ ನೆಲೆ ಪಡೆದಿದ್ದರು. ರಾತ್ರಿ 1 ಗಂಟೆ ವೇಳೆ ಯುದ್ಧ ವಿಮಾನದ ಮೂಲಕ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p class="title">2021ರಲ್ಲಿ ಮ್ಯಾನ್ಮಾರ್ನಲ್ಲಿ ಅಂಗ್ ಸಾನ್ ಸೂಕಿ ನೇತೃತ್ವದ ಚುನಾಯಿತ ಸರ್ಕಾರದಿಂದ ಅಧಿಕಾರ ಕಿತ್ತುಕೊಂಡು, ಸೇನೆಯು ಆಡಳಿತ ನಡೆಸುತ್ತಿದೆ. ಇಡೀ ದೇಶದಲ್ಲಿ ದಂಗೆ ಆರಂಭವಾಗಿದ್ದು, ಪ್ರತಿರೋಧ ವ್ಯಕ್ತಪಡಿಸುವವರ ವಿರುದ್ಧ ಸೇನೆಯು ಹಿಂಸಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ದಾಳಿ ಕುರಿತು ಸೇನೆಯು ಪ್ರತಿಕ್ರಿಯಿಸಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>