<p><strong>ಬ್ಯಾಂಕಾಕ್:</strong> ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ 7.7 ತೀವ್ರತೆಯ ಭೂಕಂಪ ಶುಕ್ರವಾರ ಸಂಭವಿಸಿದ್ದು, 30 ಅಂತಸ್ತಿನ ಎತ್ತರದ ಕಟ್ಟಡ ಕುಸಿದಿದೆ. ಅದರಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ. ಈ ಘಟನೆಯ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾಲ್ನಲ್ಲೂ ಕಂಪನದ ಅನುಭವವಾಗಿದೆ ಎಂದು ಅಲ್ಲಿನ ಜನರು ಹೇಳಿದ್ದಾರೆ.</p><p>ಭೂಕಂಪದ ತೀವ್ರತೆಗೆ ಬ್ಯಾಂಕಾಕ್ನ ಬಹುಮಹಡಿ ಕಟ್ಟಡವು ಧರೆಗುರುಳಿ ಧೂಳು ಎಬ್ಬಿಸಿದ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಜನರ ಚೀರಾಟ, ಸುರಕ್ಷಿತ ಸ್ಥಳ ಅರಸಿ ಓಡುತ್ತಿರುವ ದೃಶ್ಯ ಹೃದಯ ಕಲಕುವಂತಿತ್ತು.</p>.ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮನೆಗಳಿಂದ ಹೊರಗೆ ಓಡಿಬಂದ ಜನ .ಮ್ಯಾನ್ಮಾರ್, ಥಾಯ್ಲೆಂಡ್ ಭೂಕಂಪ: ನೆರವಿಗೆ ಭಾರತ ಸಿದ್ಧ; ಪ್ರಧಾನಿ ಮೋದಿ ಅಭಯ. <ul><li><p>ಥಾಯ್ಲೆಂಡ್ನಲ್ಲಿ ತುರ್ತು ಪರಿಸ್ಥಿತಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಪೀತಾಂಗ್ತ್ರನ್ ಶಿನ್ವಾತ್ರಾ ಹೇಳಿದ್ದಾರೆ.</p></li></ul><ul><li><p>ಮ್ಯಾನ್ಮಾರ್ನ ಮಂಡಲೆ ನಗರದ ಬಳಿ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ದಾಖಲಾಗಿದೆ. ಭೂಕಂಪವು ರಿಕ್ಟರ್ ಮಾಪನದಲ್ಲಿ 7.7 ತೀವ್ರತೆಯದ್ದಾಗಿತ್ತು. ನಿರ್ಮಾಣ ಹಂತದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ನೆಲಸಮಗೊಂಡಿತು.</p></li><li><p>ಮಂಡಲೆ ಬಳಿ 90 ವರ್ಷ ಹಳೆಯ ಸೇತುವೆ ಕುಸಿದಿದೆ. ಇದು ಮಂಡಲೆ ಮತ್ತು ಮ್ಯಾನ್ಮಾರ್ನ ಪ್ರಮುಖ ನಗರ ಯಾನ್ಗಾಂಗ್ಗೆ ಸಂಪರ್ಕ ಕಲ್ಪಿಸುತ್ತಿತ್ತು.</p></li><li><p>ಬ್ಯಾಂಕಾಕ್ನ ಚತುಚಕ್ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡ ಕುಸಿತ ಸಂಭವಿಸಿದ ದುರ್ಘಟನೆಯಲ್ಲಿ ಎಷ್ಟು ಕಾರ್ಮಿಕರು ಸಿಲುಕಿದ್ದಾರೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.</p></li><li><p>ಪ್ರಬಲ ಭೂಕಂಪದ ನಂತರ ಥಾಯ್ಲೆಂಡ್ನ ಷೇರು ಮಾರುಕಟ್ಟೆಯು ತನ್ನ ವಹಿವಾಟನ್ನು ಸ್ಥಗಿತಗೊಳಿಸಿತು.</p></li><li><p>ಮ್ಯಾನ್ಮಾರ್ನ ರಾಜಧಾನಿ ನಾಯ್ಪಯಿತಾದಲ್ಲಿ ಹಲವು ಮನೆಗಳು ನೆಲಸಮಗೊಂಡಿವೆ ಎಂದು ವರದಿಯಾಗಿದೆ.</p></li><li><p>ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿನ ಭೂಕಂಪನದ ತೀವ್ರತೆಯ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾಲ್ನಲ್ಲೂ ಆಗಿದೆ. ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ.</p></li><li><p>ಮಣಿಪುರದಲ್ಲೂ ಭೂಕಂಪದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.</p></li><li><p>ಪ್ರಧಾನಿ ನರೇಂದ್ರ ಮೋದಿ ಅವರು ಭೂಕಂಪದ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನೆರವಿಗೆ ಸದಾ ಸಿದ್ಧ ಎಂದೂ ಹೇಳಿದ್ದಾರೆ. </p></li><li><p>ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನ ಬೆನ್ನಲ್ಲೇ ಬಾಂಗ್ಲಾದೇಶದಲ್ಲೂ 7.3 ತೀವ್ರತೆಯ ಭೂಕಂಪ ಸಂಭವಿಸಿದೆ. ಢಾಕಾ ಮತ್ತು ಚತ್ತೋಗ್ರಾಮ್ನಲ್ಲಿ ಸಂಭವಿಸಿದ ಈ ಭೂಕಂಪದಲ್ಲಿ ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ.</p></li></ul>.ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: 7.3 ತೀವ್ರತೆ ದಾಖಲು.Bangkok Earthquake Video: ಮ್ಯಾನ್ಮಾರ್, ಥಾಯ್ಲೆಂಡ್ನ ಭೀಕರ ಭೂಕಂಪದ ದೃಶ್ಯಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್:</strong> ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ 7.7 ತೀವ್ರತೆಯ ಭೂಕಂಪ ಶುಕ್ರವಾರ ಸಂಭವಿಸಿದ್ದು, 30 ಅಂತಸ್ತಿನ ಎತ್ತರದ ಕಟ್ಟಡ ಕುಸಿದಿದೆ. ಅದರಡಿಯಲ್ಲಿ 40ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ. ಈ ಘಟನೆಯ ಬೆನ್ನಲ್ಲೇ ಭಾರತದ ಕೋಲ್ಕತ್ತ ಮತ್ತು ಇಂಫಾಲ್ನಲ್ಲೂ ಕಂಪನದ ಅನುಭವವಾಗಿದೆ ಎಂದು ಅಲ್ಲಿನ ಜನರು ಹೇಳಿದ್ದಾರೆ.</p><p>ಭೂಕಂಪದ ತೀವ್ರತೆಗೆ ಬ್ಯಾಂಕಾಕ್ನ ಬಹುಮಹಡಿ ಕಟ್ಟಡವು ಧರೆಗುರುಳಿ ಧೂಳು ಎಬ್ಬಿಸಿದ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಜನರ ಚೀರಾಟ, ಸುರಕ್ಷಿತ ಸ್ಥಳ ಅರಸಿ ಓಡುತ್ತಿರುವ ದೃಶ್ಯ ಹೃದಯ ಕಲಕುವಂತಿತ್ತು.</p>.ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮನೆಗಳಿಂದ ಹೊರಗೆ ಓಡಿಬಂದ ಜನ .ಮ್ಯಾನ್ಮಾರ್, ಥಾಯ್ಲೆಂಡ್ ಭೂಕಂಪ: ನೆರವಿಗೆ ಭಾರತ ಸಿದ್ಧ; ಪ್ರಧಾನಿ ಮೋದಿ ಅಭಯ. <ul><li><p>ಥಾಯ್ಲೆಂಡ್ನಲ್ಲಿ ತುರ್ತು ಪರಿಸ್ಥಿತಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಪೀತಾಂಗ್ತ್ರನ್ ಶಿನ್ವಾತ್ರಾ ಹೇಳಿದ್ದಾರೆ.</p></li></ul><ul><li><p>ಮ್ಯಾನ್ಮಾರ್ನ ಮಂಡಲೆ ನಗರದ ಬಳಿ 10 ಕಿ.ಮೀ ಆಳದಲ್ಲಿ ಕೇಂದ್ರಬಿಂದು ದಾಖಲಾಗಿದೆ. ಭೂಕಂಪವು ರಿಕ್ಟರ್ ಮಾಪನದಲ್ಲಿ 7.7 ತೀವ್ರತೆಯದ್ದಾಗಿತ್ತು. ನಿರ್ಮಾಣ ಹಂತದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ನೆಲಸಮಗೊಂಡಿತು.</p></li><li><p>ಮಂಡಲೆ ಬಳಿ 90 ವರ್ಷ ಹಳೆಯ ಸೇತುವೆ ಕುಸಿದಿದೆ. ಇದು ಮಂಡಲೆ ಮತ್ತು ಮ್ಯಾನ್ಮಾರ್ನ ಪ್ರಮುಖ ನಗರ ಯಾನ್ಗಾಂಗ್ಗೆ ಸಂಪರ್ಕ ಕಲ್ಪಿಸುತ್ತಿತ್ತು.</p></li><li><p>ಬ್ಯಾಂಕಾಕ್ನ ಚತುಚಕ್ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡ ಕುಸಿತ ಸಂಭವಿಸಿದ ದುರ್ಘಟನೆಯಲ್ಲಿ ಎಷ್ಟು ಕಾರ್ಮಿಕರು ಸಿಲುಕಿದ್ದಾರೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.</p></li><li><p>ಪ್ರಬಲ ಭೂಕಂಪದ ನಂತರ ಥಾಯ್ಲೆಂಡ್ನ ಷೇರು ಮಾರುಕಟ್ಟೆಯು ತನ್ನ ವಹಿವಾಟನ್ನು ಸ್ಥಗಿತಗೊಳಿಸಿತು.</p></li><li><p>ಮ್ಯಾನ್ಮಾರ್ನ ರಾಜಧಾನಿ ನಾಯ್ಪಯಿತಾದಲ್ಲಿ ಹಲವು ಮನೆಗಳು ನೆಲಸಮಗೊಂಡಿವೆ ಎಂದು ವರದಿಯಾಗಿದೆ.</p></li><li><p>ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿನ ಭೂಕಂಪನದ ತೀವ್ರತೆಯ ಅನುಭವ ಭಾರತದ ಕೋಲ್ಕತ್ತ ಮತ್ತು ಇಂಫಾಲ್ನಲ್ಲೂ ಆಗಿದೆ. ಮೇಘಾಲಯದ ಪೂರ್ವ ಗರೊ ಪರ್ವತ ಶ್ರೇಣಿಯಲ್ಲಿ ಕಂಪನದ ಅನುಭವವಾಗಿದೆ.</p></li><li><p>ಮಣಿಪುರದಲ್ಲೂ ಭೂಕಂಪದ ಅನುಭವವಾಗಿದ್ದು, ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ.</p></li><li><p>ಪ್ರಧಾನಿ ನರೇಂದ್ರ ಮೋದಿ ಅವರು ಭೂಕಂಪದ ಕುರಿತು ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ ನೆರವಿಗೆ ಸದಾ ಸಿದ್ಧ ಎಂದೂ ಹೇಳಿದ್ದಾರೆ. </p></li><li><p>ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನ ಬೆನ್ನಲ್ಲೇ ಬಾಂಗ್ಲಾದೇಶದಲ್ಲೂ 7.3 ತೀವ್ರತೆಯ ಭೂಕಂಪ ಸಂಭವಿಸಿದೆ. ಢಾಕಾ ಮತ್ತು ಚತ್ತೋಗ್ರಾಮ್ನಲ್ಲಿ ಸಂಭವಿಸಿದ ಈ ಭೂಕಂಪದಲ್ಲಿ ಯಾವುದೇ ಹಾನಿಯಾದ ಕುರಿತು ವರದಿಯಾಗಿಲ್ಲ.</p></li></ul>.ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: 7.3 ತೀವ್ರತೆ ದಾಖಲು.Bangkok Earthquake Video: ಮ್ಯಾನ್ಮಾರ್, ಥಾಯ್ಲೆಂಡ್ನ ಭೀಕರ ಭೂಕಂಪದ ದೃಶ್ಯಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>