<p><strong>ಢಾಕಾ:</strong> ಬಾಂಗ್ಲಾದೇಶ ಕೇಂದ್ರ ಬ್ಯಾಂಕ್ ಗವರ್ನರ್ ಅಬ್ದುಲ್ ರೌಫ್ ತಲುಕ್ದೇರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p><p>ಅಬ್ದುಲ್ ಅವರು 'ವೈಯಕ್ತಿಕ ಕಾರಣ' ನೀಡಿ ಶುಕ್ರವಾರ ಹುದ್ದೆ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದರೆ, ಈ ಕುರಿತು ಕೇಂದ್ರ ಬ್ಯಾಂಕ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ವಿವಾದಿತ ಮೀಸಲಾತಿ ವಿರೋಧಿಸಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆ ಪ್ರಧಾನಿ ಹುದ್ದೆಗೆ (ಆಗಸ್ಟ್ 5 ರಂದು) ರಾಜೀನಾಮೆ ನೀಡಿ ದೇಶದಿಂದ ಪಲಾಯನಗೈದಿರುವ ಶೇಖ್ ಹಸೀನಾ, ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.</p><p>ಈ ವಿದ್ಯಮಾನಗಳ ನಡುವೆ, ಪ್ರತಿಭಟನಾಕಾರರು ಬುಧವಾರ (ಆಗಸ್ಟ್ 7ರಂದು) ಕೇಂದ್ರ ಬ್ಯಾಂಕ್ನ ಪ್ರಧಾನ ಕಚೇರಿಗೆ ನುಗ್ಗಿ ಘೋಷಣೆಗಳನ್ನು ಕೂಗಿದ್ದರು. ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಅಬ್ದುಲ್ ಅಧಿಕಾರದಿಂದ ಇಳಿದಿದ್ದಾರೆ.</p><p>ದೇಶವು ಕರೆನ್ಸಿ ಅಪಮೌಲ್ಯ ಹಾಗೂ ಹಣದುಬ್ಬರದಿಂದ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ (2022ರ ಜುಲೈನಲ್ಲಿ) ಕೇಂದ್ರ ಬ್ಯಾಂಕ್ ಜವಾಬ್ದಾರಿ ವಹಿಸಿಕೊಂಡಿದ್ದ ಅಬ್ದುಲ್ ಅವರ ಅಧಿಕಾರ ಅವಧಿ ಇನ್ನೂ ಎರಡು ವರ್ಷ ಇತ್ತು.</p><p>ಸದ್ಯ, ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಆದಾಗ್ಯೂ, ಪ್ರತಿಭಟನೆಯ ಕಿಚ್ಚು ತಣ್ಣಗಾಗಿಲ್ಲ. ಜುಲೈನಲ್ಲಿ ಆರಂಭವಾದ ಪ್ರತಿಭಟನೆಯಲ್ಲಿ ಇದುವರೆಗೆ 400ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.</p>.Bangla Unrest: ಮಹಿಳೆಯರ T20 ವಿಶ್ವಕಪ್ ಆಯೋಜನೆಗೆ ಸೇನೆಯ ನೆರವು ಕೋರಿದ ಬಿಸಿಬಿ.Bangla Unrest | ನಾಗರಿಕರ ಸುರಕ್ಷತೆಗೆ ಆದ್ಯತೆ: ಮೊಹಮ್ಮದ್ ಯೂನಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶ ಕೇಂದ್ರ ಬ್ಯಾಂಕ್ ಗವರ್ನರ್ ಅಬ್ದುಲ್ ರೌಫ್ ತಲುಕ್ದೇರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p><p>ಅಬ್ದುಲ್ ಅವರು 'ವೈಯಕ್ತಿಕ ಕಾರಣ' ನೀಡಿ ಶುಕ್ರವಾರ ಹುದ್ದೆ ತೊರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದರೆ, ಈ ಕುರಿತು ಕೇಂದ್ರ ಬ್ಯಾಂಕ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p><p>ವಿವಾದಿತ ಮೀಸಲಾತಿ ವಿರೋಧಿಸಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆ ಪ್ರಧಾನಿ ಹುದ್ದೆಗೆ (ಆಗಸ್ಟ್ 5 ರಂದು) ರಾಜೀನಾಮೆ ನೀಡಿ ದೇಶದಿಂದ ಪಲಾಯನಗೈದಿರುವ ಶೇಖ್ ಹಸೀನಾ, ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.</p><p>ಈ ವಿದ್ಯಮಾನಗಳ ನಡುವೆ, ಪ್ರತಿಭಟನಾಕಾರರು ಬುಧವಾರ (ಆಗಸ್ಟ್ 7ರಂದು) ಕೇಂದ್ರ ಬ್ಯಾಂಕ್ನ ಪ್ರಧಾನ ಕಚೇರಿಗೆ ನುಗ್ಗಿ ಘೋಷಣೆಗಳನ್ನು ಕೂಗಿದ್ದರು. ಅಧಿಕಾರಿಗಳ ರಾಜೀನಾಮೆಗೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಅಬ್ದುಲ್ ಅಧಿಕಾರದಿಂದ ಇಳಿದಿದ್ದಾರೆ.</p><p>ದೇಶವು ಕರೆನ್ಸಿ ಅಪಮೌಲ್ಯ ಹಾಗೂ ಹಣದುಬ್ಬರದಿಂದ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ (2022ರ ಜುಲೈನಲ್ಲಿ) ಕೇಂದ್ರ ಬ್ಯಾಂಕ್ ಜವಾಬ್ದಾರಿ ವಹಿಸಿಕೊಂಡಿದ್ದ ಅಬ್ದುಲ್ ಅವರ ಅಧಿಕಾರ ಅವಧಿ ಇನ್ನೂ ಎರಡು ವರ್ಷ ಇತ್ತು.</p><p>ಸದ್ಯ, ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಆದಾಗ್ಯೂ, ಪ್ರತಿಭಟನೆಯ ಕಿಚ್ಚು ತಣ್ಣಗಾಗಿಲ್ಲ. ಜುಲೈನಲ್ಲಿ ಆರಂಭವಾದ ಪ್ರತಿಭಟನೆಯಲ್ಲಿ ಇದುವರೆಗೆ 400ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.</p>.Bangla Unrest: ಮಹಿಳೆಯರ T20 ವಿಶ್ವಕಪ್ ಆಯೋಜನೆಗೆ ಸೇನೆಯ ನೆರವು ಕೋರಿದ ಬಿಸಿಬಿ.Bangla Unrest | ನಾಗರಿಕರ ಸುರಕ್ಷತೆಗೆ ಆದ್ಯತೆ: ಮೊಹಮ್ಮದ್ ಯೂನಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>