<p><strong>ಢಾಕಾ/ಪ್ಯಾರಿಸ್:</strong> ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಆರ್ಥಿಕ ತಜ್ಞ ಮೊಹಮ್ಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ರಾತ್ರಿ ನೇಮಕ ಮಾಡಿದ್ದಾರೆ ಎಂದು ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ತಿಳಿಸಿದ್ದಾರೆ.</p><p>ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ವಿದ್ಯಾರ್ಥಿ ಆಂದೋಲನದ ಸಂಯೋಜಕರೊಂದಿಗೆ ಶಹಾಬುದ್ದೀನ್ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p><p>ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಧ್ಯಂತರ ಸರ್ಕಾರದಲ್ಲಿ ಯಾರೆಲ್ಲ ಇರಬೇಕೆಂಬುದನ್ನು ಅಂತಿಮಗೊಳಿಸ ಲಾಗುವುದು ಎಂದು ಪತ್ರಿಕಾ ಕಾರ್ಯದರ್ಶಿ ತಿಳಿಸಿದ್ದಾರೆ.</p><p>ಯೂನಸ್ ಅವರು ಸದ್ಯ ದೇಶದಿಂದ ಹೊರಗಿದ್ದಾರೆ. ಆದರೆ, ಶೇಖ್ ಹಸೀನಾ ಅವರ ಆಡಳಿತದ ಪದಚ್ಯುತಿಯನ್ನು ಯೂನಸ್ ಸ್ವಾಗತಿಸಿದ್ದಾರೆ. ದೇಶದಲ್ಲಿ ಈಗ ಆಗಿರುವ ಬೆಳವಣಿಗೆಯನ್ನು ಅವರು ದೇಶದ ‘ಎರಡನೇ ವಿಮೋಚನೆ’ ಎಂದು ಬಣ್ಣಿಸಿದರು.</p><p>ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ‘ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಚಳವಳಿ’ ಸಂಘಟನೆ ಒತ್ತಾಯಿಸಿದಾಗ, ಯೂನಸ್ ಅದಕ್ಕೆ ಸಮ್ಮತಿಸಿದರು.</p><p>‘ಪ್ರತಿಭಟನೆ ನಡೆಸುತ್ತಿರುವವರು ನನ್ನಲ್ಲಿ ಇಟ್ಟಿರುವ ನಂಬಿಕೆ ನನಗೆ ಗೌರವ ತರುವ ವಿಚಾರ. ಮಧ್ಯಂತರ ಸರ್ಕಾರ ಆರಂಭ ಮಾತ್ರ. ಮುಕ್ತ ಚುನಾವಣೆಗಳಿಂದ ಮಾತ್ರ ಶಾಶ್ವತ ಶಾಂತಿ ನೆಲೆಸಲು ಸಾಧ್ಯ. ಚುನಾವಣೆಗಳಿಲ್ಲದೇ ಬದಲಾವಣೆ ಸಾಧ್ಯವಿಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p><strong>ಪದಚ್ಯುತ ಸಚಿವರ ಬಂಧನ:</strong> </p><p>ಶೇಖ್ ಹಸೀನಾ ಅವರು ದೇಶ ತೊರೆದ ಬೆನ್ನಲ್ಲೇ, ದೇಶದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದ ಪದಚ್ಯುತ ವಿದೇಶಾಂಗ ಸಚಿವ ಹಸನ್ ಮಹಮೂದ್ ಮತ್ತು ಮಾಜಿ ರಾಜ್ಯ ಸಚಿವ ಜುನೈದ್ ಅಹ್ಮದ್ ಪಾಲಕ್ ಅವರನ್ನು ಮಂಗಳವಾರ ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. </p><p>ಮಹಮೂದ್ ಅವರು ಢಾಕಾದ ಹಜರತ್ ಶಹಜಲಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೆಹಲಿ ಮಾರ್ಗದ ವಿಮಾನವೇರಲು ತೆರಳಿದ್ದರು ಎಂದು ಏರ್ಪೋರ್ಟ್ ಏವಿಯೇಷನ್ ಸೆಕ್ಯುರಿಟಿ (ಎವಿಎಸ್ಇಸಿ) ಅಧಿಕಾರಿಯೊಬ್ಬರು ಹೇಳಿರುವುದಾಗಿ ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p><p>ಮಾಧ್ಯಮ ವರದಿಗಳ ಪ್ರಕಾರ, ಮಹಮೂದ್ ಈ ಹಿಂದೆ ಬಂದರಿನ ಮೂಲಕ ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸಿದ್ದರು. ಆದರೆ ಗಡಿ ದಾಟಲು ಅವರಿಗೆ ಅವಕಾಶ ನೀಡಿರಲಿಲ್ಲ.</p><p>ಅಂಚೆ, ದೂರಸಂಪರ್ಕ ಮತ್ತು ಐಸಿಟಿಯ ಮಾಜಿ ರಾಜ್ಯ ಸಚಿವ ಜುನೈದ್ ಅಹ್ಮದ್ ಪಾಲಕ್ ಅವರ ಮೇಲೆ ದೇಶ ತೊರೆಯದಂತೆ ನಿರ್ಬಂಧ ಹೇರಿದ ಕೆಲವು ತಾಸುಗಳಲ್ಲಿ ಅವರನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ/ಪ್ಯಾರಿಸ್:</strong> ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ, ಆರ್ಥಿಕ ತಜ್ಞ ಮೊಹಮ್ಮದ್ ಯೂನಸ್ ಅವರನ್ನು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ರಾತ್ರಿ ನೇಮಕ ಮಾಡಿದ್ದಾರೆ ಎಂದು ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ತಿಳಿಸಿದ್ದಾರೆ.</p><p>ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದಾಗಿ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ವಿದ್ಯಾರ್ಥಿ ಆಂದೋಲನದ ಸಂಯೋಜಕರೊಂದಿಗೆ ಶಹಾಬುದ್ದೀನ್ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p><p>ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಧ್ಯಂತರ ಸರ್ಕಾರದಲ್ಲಿ ಯಾರೆಲ್ಲ ಇರಬೇಕೆಂಬುದನ್ನು ಅಂತಿಮಗೊಳಿಸ ಲಾಗುವುದು ಎಂದು ಪತ್ರಿಕಾ ಕಾರ್ಯದರ್ಶಿ ತಿಳಿಸಿದ್ದಾರೆ.</p><p>ಯೂನಸ್ ಅವರು ಸದ್ಯ ದೇಶದಿಂದ ಹೊರಗಿದ್ದಾರೆ. ಆದರೆ, ಶೇಖ್ ಹಸೀನಾ ಅವರ ಆಡಳಿತದ ಪದಚ್ಯುತಿಯನ್ನು ಯೂನಸ್ ಸ್ವಾಗತಿಸಿದ್ದಾರೆ. ದೇಶದಲ್ಲಿ ಈಗ ಆಗಿರುವ ಬೆಳವಣಿಗೆಯನ್ನು ಅವರು ದೇಶದ ‘ಎರಡನೇ ವಿಮೋಚನೆ’ ಎಂದು ಬಣ್ಣಿಸಿದರು.</p><p>ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ‘ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಚಳವಳಿ’ ಸಂಘಟನೆ ಒತ್ತಾಯಿಸಿದಾಗ, ಯೂನಸ್ ಅದಕ್ಕೆ ಸಮ್ಮತಿಸಿದರು.</p><p>‘ಪ್ರತಿಭಟನೆ ನಡೆಸುತ್ತಿರುವವರು ನನ್ನಲ್ಲಿ ಇಟ್ಟಿರುವ ನಂಬಿಕೆ ನನಗೆ ಗೌರವ ತರುವ ವಿಚಾರ. ಮಧ್ಯಂತರ ಸರ್ಕಾರ ಆರಂಭ ಮಾತ್ರ. ಮುಕ್ತ ಚುನಾವಣೆಗಳಿಂದ ಮಾತ್ರ ಶಾಶ್ವತ ಶಾಂತಿ ನೆಲೆಸಲು ಸಾಧ್ಯ. ಚುನಾವಣೆಗಳಿಲ್ಲದೇ ಬದಲಾವಣೆ ಸಾಧ್ಯವಿಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p><p><strong>ಪದಚ್ಯುತ ಸಚಿವರ ಬಂಧನ:</strong> </p><p>ಶೇಖ್ ಹಸೀನಾ ಅವರು ದೇಶ ತೊರೆದ ಬೆನ್ನಲ್ಲೇ, ದೇಶದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದ ಪದಚ್ಯುತ ವಿದೇಶಾಂಗ ಸಚಿವ ಹಸನ್ ಮಹಮೂದ್ ಮತ್ತು ಮಾಜಿ ರಾಜ್ಯ ಸಚಿವ ಜುನೈದ್ ಅಹ್ಮದ್ ಪಾಲಕ್ ಅವರನ್ನು ಮಂಗಳವಾರ ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. </p><p>ಮಹಮೂದ್ ಅವರು ಢಾಕಾದ ಹಜರತ್ ಶಹಜಲಾಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೆಹಲಿ ಮಾರ್ಗದ ವಿಮಾನವೇರಲು ತೆರಳಿದ್ದರು ಎಂದು ಏರ್ಪೋರ್ಟ್ ಏವಿಯೇಷನ್ ಸೆಕ್ಯುರಿಟಿ (ಎವಿಎಸ್ಇಸಿ) ಅಧಿಕಾರಿಯೊಬ್ಬರು ಹೇಳಿರುವುದಾಗಿ ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p><p>ಮಾಧ್ಯಮ ವರದಿಗಳ ಪ್ರಕಾರ, ಮಹಮೂದ್ ಈ ಹಿಂದೆ ಬಂದರಿನ ಮೂಲಕ ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸಿದ್ದರು. ಆದರೆ ಗಡಿ ದಾಟಲು ಅವರಿಗೆ ಅವಕಾಶ ನೀಡಿರಲಿಲ್ಲ.</p><p>ಅಂಚೆ, ದೂರಸಂಪರ್ಕ ಮತ್ತು ಐಸಿಟಿಯ ಮಾಜಿ ರಾಜ್ಯ ಸಚಿವ ಜುನೈದ್ ಅಹ್ಮದ್ ಪಾಲಕ್ ಅವರ ಮೇಲೆ ದೇಶ ತೊರೆಯದಂತೆ ನಿರ್ಬಂಧ ಹೇರಿದ ಕೆಲವು ತಾಸುಗಳಲ್ಲಿ ಅವರನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>