<p><strong>ಢಾಕಾ (ಪಿಟಿಐ):</strong> ‘ಬಾಂಗ್ಲಾದೇಶದಿಂದ ತನ್ನ ರಾಯಭಾರಿಗಳ ಕುಟುಂಬದವರನ್ನು ಭಾರತ ಮರಳಿ ಕರೆಸಿಕೊಳ್ಳುತ್ತಿರುವುದಕ್ಕೆ ಯಾವುದೇ ಕಾರಣವಿಲ್ಲ.ರಾಯಭಾರ ಅಧಿಕಾರಿಗಳಿಗೆ ಅಥವಾ ಅವರ ಕುಟುಂಬಸ್ಥರಿಗೆ ಇಲ್ಲಿ ಭದ್ರತಾ ಬೆದರಿಕೆಯೇನೂ ಇಲ್ಲ’ ಎಂದು ಬಾಂಗ್ಲಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ತೋಹಿದ್ ಹುಸೈನ್ ಬುಧವಾರ ಹೇಳಿದ್ದಾರೆ. </p>.<p>ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ದೇಶದಲ್ಲಿ ಹೆಚ್ಚುತ್ತಿರುವ ತೀವ್ರಗಾಮಿ ಚಟುವಟಿಕೆಗಳನ್ನು ಗಮನಿಸಿ, ಭದ್ರತಾ ಹಿತದೃಷ್ಟಿಯಿಂದ ತನ್ನ ರಾಯಭಾರ ಅಧಿಕಾರಿಗಳ ಕುಟುಂಬಗಳನ್ನು ಮರಳಿ ಕರೆಸಿಕೊಳ್ಳಲು ಭಾರತ ಕಳೆದವಾರ ನಿರ್ಧರಿಸಿದೆ. </p>.<p>ಈ ಕುರಿತು ಪ್ರತಿಕ್ರಿಯಿಸಿರುವ ಹುಸೈನ್, ‘ಅಧಿಕಾರಿಗಳು ಅಥವಾ ಕುಟುಂಬಗಳಿಗೆ ಬೆದರಿಕೆ ಒಡ್ಡುವಂತಹ ಯಾವುದೇ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಆದಾಗ್ಯೂ, ಕುಟುಂಬಗಳನ್ನು ಮರಳಿ ಕರೆಸಿಕೊಳ್ಳುವುದು ಭಾರತದ ಆಂತರಿಕ ವಿಚಾರವಾಗಿದೆ. ಈ ಮೂಲಕ ಭಾರತ ಯಾವುದೋ ಸಂದೇಶ ನೀಡಲು ಬಯಸಿರಬಹುದು. ಆದರೆ, ನಮಗೆ ಯಾವ ಸ್ಪಷ್ಟ ಕಾರಣಗಳೂ ಕಂಡುಬಂದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಪಿಟಿಐ):</strong> ‘ಬಾಂಗ್ಲಾದೇಶದಿಂದ ತನ್ನ ರಾಯಭಾರಿಗಳ ಕುಟುಂಬದವರನ್ನು ಭಾರತ ಮರಳಿ ಕರೆಸಿಕೊಳ್ಳುತ್ತಿರುವುದಕ್ಕೆ ಯಾವುದೇ ಕಾರಣವಿಲ್ಲ.ರಾಯಭಾರ ಅಧಿಕಾರಿಗಳಿಗೆ ಅಥವಾ ಅವರ ಕುಟುಂಬಸ್ಥರಿಗೆ ಇಲ್ಲಿ ಭದ್ರತಾ ಬೆದರಿಕೆಯೇನೂ ಇಲ್ಲ’ ಎಂದು ಬಾಂಗ್ಲಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ತೋಹಿದ್ ಹುಸೈನ್ ಬುಧವಾರ ಹೇಳಿದ್ದಾರೆ. </p>.<p>ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ದೇಶದಲ್ಲಿ ಹೆಚ್ಚುತ್ತಿರುವ ತೀವ್ರಗಾಮಿ ಚಟುವಟಿಕೆಗಳನ್ನು ಗಮನಿಸಿ, ಭದ್ರತಾ ಹಿತದೃಷ್ಟಿಯಿಂದ ತನ್ನ ರಾಯಭಾರ ಅಧಿಕಾರಿಗಳ ಕುಟುಂಬಗಳನ್ನು ಮರಳಿ ಕರೆಸಿಕೊಳ್ಳಲು ಭಾರತ ಕಳೆದವಾರ ನಿರ್ಧರಿಸಿದೆ. </p>.<p>ಈ ಕುರಿತು ಪ್ರತಿಕ್ರಿಯಿಸಿರುವ ಹುಸೈನ್, ‘ಅಧಿಕಾರಿಗಳು ಅಥವಾ ಕುಟುಂಬಗಳಿಗೆ ಬೆದರಿಕೆ ಒಡ್ಡುವಂತಹ ಯಾವುದೇ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಆದಾಗ್ಯೂ, ಕುಟುಂಬಗಳನ್ನು ಮರಳಿ ಕರೆಸಿಕೊಳ್ಳುವುದು ಭಾರತದ ಆಂತರಿಕ ವಿಚಾರವಾಗಿದೆ. ಈ ಮೂಲಕ ಭಾರತ ಯಾವುದೋ ಸಂದೇಶ ನೀಡಲು ಬಯಸಿರಬಹುದು. ಆದರೆ, ನಮಗೆ ಯಾವ ಸ್ಪಷ್ಟ ಕಾರಣಗಳೂ ಕಂಡುಬಂದಿಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>