<p><strong>ಢಾಕಾ:</strong> ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿದೆ. ಬಾಂಗ್ಲಾದೇಶದ ಸಿರಾಜಗಂಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚನೆಯಾಗಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.</p><p>ಜೂನ್ 8 ರಂದು ಟ್ಯಾಗೋರ್ ಅವರ ವಸ್ತು ಪ್ರದರ್ಶನಾಲಯ ಭೇಟಿ ಬಂದಿದ್ದ ವ್ಯಕ್ತಿ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ ನಡೆಸಿದ್ದ ಎನ್ನಲಾಗಿದ್ದು ಇದೇ ವಿಚಾರ ಘಟನೆಗೆ ಕಾರಣ ಎಂದು ಹೇಳಲಾಗಿದೆ.</p><p>ಜೂನ್ 11 ರಂದು ಟ್ಯಾಗೋರ್ ಪೂರ್ವಜರ ಸ್ಮಾರಕದ ಬಂಗಲೆಯ ಮೇಲೆ ದಾಳಿ ನಡೆದಿದ್ದು ಕಿಟಕಿ ಗಾಜು, ಬಾಗಿಲು, ಪೀಠೋಪಕರಣಗಳು ಹಾನಿಗೊಳಗಾಗಿವೆ. ಗಲಾಟೆ, ದಾಳಿ ನಡೆದ ಬಳಿಕ ಟ್ಯಾಗೋರ್ ಅವರ ಬಂಗಲೆಯನ್ನು ಮುಚ್ಚಲಾಗಿದೆ. ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ.</p><p><strong>ಭಾರತದಲ್ಲಿ ಬಿಜೆಪಿ ಖಂಡನೆ</strong></p><p>ಭಾರತೀಯರ ಪರಂಪರೆಯಾಗಿರುವ ರವೀಂದ್ರನಾಥ ಟ್ಯಾಗೋರ್ ಅವರ ಮನೆ ಮೇಲೆ ದಾಳಿ ನಡೆದಿರುವುದನ್ನು ಖಂಡಿಸಿರುವ ಬಿಜೆಪಿ, ಬಾಂಗ್ಲಾದೇಶದಲ್ಲಿರುವ ಮಧ್ಯಂತರ ಸರ್ಕಾರದ ವಿರುದ್ಧ ಕಿಡಿಕಾರಿದೆ.</p><p>ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ದಾಳಿಯ ಹಿಂದೆ ಜಮಾತ್– ಎ– ಇಸ್ಲಾಮಿ ಮತ್ತು ಹೆಫಜತ್-ಎ-ಇಸ್ಲಾಂ ಸಂಘಟನೆಗಳು ಕೈವಾಡವಿದೆ. ಟ್ಯಾಗೋರ್ ಪಶ್ಚಿಮ ಬಂಗಾಳ, ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಭಾಗವಾಗಿದ್ದಾರೆ ಇದೇ ಕಾರಣಕ್ಕೆ ಅವರ ಪೂರ್ಜಜನರ ಮನೆ ಮೇಲೆ ದಾಳಿ ನಡೆಸಲಾಗಿದೆ’ ಎಂದು ದೂರಿದ್ದಾರೆ.</p><p>ಪಶ್ಚಿಮ ಬಂಗಾಳದ ಹೊಸತನಕ್ಕೆ ರುವಾರಿಯಾದ ಟ್ಯಾಗೋರ್ ಮನೆ ಮೇಲೆ ದಾಳಿ ನಡೆದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಚಾರದ ಬಗ್ಗೆ ಮಾತನಾಡುತ್ತಿಲ್ಲ. ನೆರೆಯ ಬಾಂಗ್ಲಾದೇಶದ ನುಸುಳುಕೋರರನ್ನು ಅವರು ಮತಬ್ಯಾಂಕ್ ಆಗಿ ನೋಡುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಮೌನವಾಗಿರಲು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿದೆ. ಬಾಂಗ್ಲಾದೇಶದ ಸಿರಾಜಗಂಜ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚನೆಯಾಗಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.</p><p>ಜೂನ್ 8 ರಂದು ಟ್ಯಾಗೋರ್ ಅವರ ವಸ್ತು ಪ್ರದರ್ಶನಾಲಯ ಭೇಟಿ ಬಂದಿದ್ದ ವ್ಯಕ್ತಿ ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ ನಡೆಸಿದ್ದ ಎನ್ನಲಾಗಿದ್ದು ಇದೇ ವಿಚಾರ ಘಟನೆಗೆ ಕಾರಣ ಎಂದು ಹೇಳಲಾಗಿದೆ.</p><p>ಜೂನ್ 11 ರಂದು ಟ್ಯಾಗೋರ್ ಪೂರ್ವಜರ ಸ್ಮಾರಕದ ಬಂಗಲೆಯ ಮೇಲೆ ದಾಳಿ ನಡೆದಿದ್ದು ಕಿಟಕಿ ಗಾಜು, ಬಾಗಿಲು, ಪೀಠೋಪಕರಣಗಳು ಹಾನಿಗೊಳಗಾಗಿವೆ. ಗಲಾಟೆ, ದಾಳಿ ನಡೆದ ಬಳಿಕ ಟ್ಯಾಗೋರ್ ಅವರ ಬಂಗಲೆಯನ್ನು ಮುಚ್ಚಲಾಗಿದೆ. ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ.</p><p><strong>ಭಾರತದಲ್ಲಿ ಬಿಜೆಪಿ ಖಂಡನೆ</strong></p><p>ಭಾರತೀಯರ ಪರಂಪರೆಯಾಗಿರುವ ರವೀಂದ್ರನಾಥ ಟ್ಯಾಗೋರ್ ಅವರ ಮನೆ ಮೇಲೆ ದಾಳಿ ನಡೆದಿರುವುದನ್ನು ಖಂಡಿಸಿರುವ ಬಿಜೆಪಿ, ಬಾಂಗ್ಲಾದೇಶದಲ್ಲಿರುವ ಮಧ್ಯಂತರ ಸರ್ಕಾರದ ವಿರುದ್ಧ ಕಿಡಿಕಾರಿದೆ.</p><p>ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ದಾಳಿಯ ಹಿಂದೆ ಜಮಾತ್– ಎ– ಇಸ್ಲಾಮಿ ಮತ್ತು ಹೆಫಜತ್-ಎ-ಇಸ್ಲಾಂ ಸಂಘಟನೆಗಳು ಕೈವಾಡವಿದೆ. ಟ್ಯಾಗೋರ್ ಪಶ್ಚಿಮ ಬಂಗಾಳ, ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಭಾಗವಾಗಿದ್ದಾರೆ ಇದೇ ಕಾರಣಕ್ಕೆ ಅವರ ಪೂರ್ಜಜನರ ಮನೆ ಮೇಲೆ ದಾಳಿ ನಡೆಸಲಾಗಿದೆ’ ಎಂದು ದೂರಿದ್ದಾರೆ.</p><p>ಪಶ್ಚಿಮ ಬಂಗಾಳದ ಹೊಸತನಕ್ಕೆ ರುವಾರಿಯಾದ ಟ್ಯಾಗೋರ್ ಮನೆ ಮೇಲೆ ದಾಳಿ ನಡೆದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಚಾರದ ಬಗ್ಗೆ ಮಾತನಾಡುತ್ತಿಲ್ಲ. ನೆರೆಯ ಬಾಂಗ್ಲಾದೇಶದ ನುಸುಳುಕೋರರನ್ನು ಅವರು ಮತಬ್ಯಾಂಕ್ ಆಗಿ ನೋಡುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಮೌನವಾಗಿರಲು ನಿರ್ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>