<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ಕುಷ್ಟಿಯಾ ಮತ್ತು ರಂಗಪುರ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಹತ್ಯೆ ಮಾಡಲಾಗಿದೆ.</p><p>ಇದೇ ವೇಳೆ ಪ್ರತಿಭಟನಾಕಾರರು ಹಿಂದೂಗಳ ಮಾಲೀಕತ್ವದ ಮನೆ ಹಾಗೂ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹತ್ಯೆ ಘಟನೆಗೂ ಮತ್ತು ಹಿಂದೂಗಳಿಗೂ ಯಾವುದೇ ಸಂಬಂಧ ಇಲ್ಲದಿದ್ದರೂ ದಾಳಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಗಮನವನ್ನು ಬೇರೆಡೆಗೆ ಸೆಳೆಯಲು ಕಿಡಿಗೇಡಿಗಳು ಈ ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದು ಘಟನೆ ಸಂಬಂಧ ಹಲವರನ್ನು ಬಂಧಿಸಿದ್ದು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಕುಷ್ಟಿಯಾ ಜಿಲ್ಲೆಯಲ್ಲಿ ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಇಸ್ಲಾಂ ಧರ್ಮಗುರುವನ್ನು ಗುಂಪು ಹತ್ಯೆ ಮಾಡಲಾಗಿದೆ. ಹಾಗೂ ರಂಗಪುರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ರಾಕೀಬ್ ಹಸನ್ ಎಂಬ ಯುವಕನನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪು ಹತ್ಯೆ ಮಾಡಲಾಗಿದೆ.</p><p>ಈ ವೇಳೆ ನಡೆದ ಪ್ರತಿಭಟೆ ಸಮಯದಲ್ಲಿ ಎರಡು ಕಡೆಗಳಲ್ಲಿ ಹಿಂದೂಗಳ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಲಾಗಿದೆ. </p><p>ಬಾಂಗ್ಲಾದೇಶದಲ್ಲಿ ಹಿಂದೂ ಬೌದ್ಧ ಕ್ರಿಶ್ಚಿಯನ್ ಐಕ್ಯತಾ ಪರಿಷತ್ತಿನ ಪ್ರಕಾರ, ಈ ವರ್ಷದ ಜನವರಿ 1ರಿಂದ ಮಾರ್ಚ್ 31ರ ನಡುವೆ ದೇಶದಲ್ಲಿ ಒಟ್ಟು 133 ಕೋಮು ಹಿಂಸಾಚಾರದ ಘಟನೆಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ಕುಷ್ಟಿಯಾ ಮತ್ತು ರಂಗಪುರ ಜಿಲ್ಲೆಗಳಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಹತ್ಯೆ ಮಾಡಲಾಗಿದೆ.</p><p>ಇದೇ ವೇಳೆ ಪ್ರತಿಭಟನಾಕಾರರು ಹಿಂದೂಗಳ ಮಾಲೀಕತ್ವದ ಮನೆ ಹಾಗೂ ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹತ್ಯೆ ಘಟನೆಗೂ ಮತ್ತು ಹಿಂದೂಗಳಿಗೂ ಯಾವುದೇ ಸಂಬಂಧ ಇಲ್ಲದಿದ್ದರೂ ದಾಳಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಗಮನವನ್ನು ಬೇರೆಡೆಗೆ ಸೆಳೆಯಲು ಕಿಡಿಗೇಡಿಗಳು ಈ ದಾಂಧಲೆ ನಡೆಸಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದು ಘಟನೆ ಸಂಬಂಧ ಹಲವರನ್ನು ಬಂಧಿಸಿದ್ದು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಕುಷ್ಟಿಯಾ ಜಿಲ್ಲೆಯಲ್ಲಿ ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಇಸ್ಲಾಂ ಧರ್ಮಗುರುವನ್ನು ಗುಂಪು ಹತ್ಯೆ ಮಾಡಲಾಗಿದೆ. ಹಾಗೂ ರಂಗಪುರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ರಾಕೀಬ್ ಹಸನ್ ಎಂಬ ಯುವಕನನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಗುಂಪು ಹತ್ಯೆ ಮಾಡಲಾಗಿದೆ.</p><p>ಈ ವೇಳೆ ನಡೆದ ಪ್ರತಿಭಟೆ ಸಮಯದಲ್ಲಿ ಎರಡು ಕಡೆಗಳಲ್ಲಿ ಹಿಂದೂಗಳ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಲಾಗಿದೆ. </p><p>ಬಾಂಗ್ಲಾದೇಶದಲ್ಲಿ ಹಿಂದೂ ಬೌದ್ಧ ಕ್ರಿಶ್ಚಿಯನ್ ಐಕ್ಯತಾ ಪರಿಷತ್ತಿನ ಪ್ರಕಾರ, ಈ ವರ್ಷದ ಜನವರಿ 1ರಿಂದ ಮಾರ್ಚ್ 31ರ ನಡುವೆ ದೇಶದಲ್ಲಿ ಒಟ್ಟು 133 ಕೋಮು ಹಿಂಸಾಚಾರದ ಘಟನೆಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>