<p><strong>ಢಾಕಾ:</strong> ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 3) ನಡೆಸಲಿದೆ.</p>.<p>ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಸೈಫುಲ್ ಇಸ್ಲಾಂ ಅವರು ಮಂಗಳವಾರದ ವಿಚಾರಣೆ ನಡೆಸಲಿದ್ದಾರೆ ಎಂದು ಬಾಂಗ್ಲಾದೇಶದ ಸುದ್ದಿಮಾಧ್ಯಮ ‘ಬಿಡಿನ್ಯೂಸ್24 ಡಾಟ್ ಕಾಮ್’ ವರದಿ ಮಾಡಿದೆ.</p>.<p>ವಿಚಾರಣೆಯ ದಿನಾಂಕವನ್ನು ಈಗಾಗಲೇ ನಿಗದಿಪಡಿಸಲಾಗಿದೆ. ಆದರೆ ಬುಧವಾರ ಮತ್ತು ಗುರುವಾರ ವಕೀಲರು ಕಲಾಪ ಬಹಿಷ್ಕರಿಸಿ, ಕೆಲಸಕ್ಕೆ ಗೈರಾದ ಕಾರಣ ಈ ಪ್ರಕಟಣೆ ಹೊರಡಿಸುವುದು ವಿಳಂಬವಾಗಿದೆ ಎಂದು ಚಟ್ಟೋಗ್ರಾಮ ನ್ಯಾಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಕೃಷ್ಣದಾಸ್ ಬಂಧನ: ಬಾಂಗ್ಲಾದಲ್ಲಿ ಉದ್ವಿಗ್ನ ಸ್ಥಿತಿ .<p>ಬಾಂಗ್ಲಾದೇಶ ಸಮ್ಮಿಲಿತ್ ಸನಾತನಿ ಜಾಗರಣ ಜೋತೆ‘ ವಕ್ತಾರರಾದ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಕಳೆದ ಸೋಮವಾರ ಬಂಧಿಸಲಾಗಿದೆ. ಚಟ್ಟೋಗ್ರಾಮ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿ ಕಳೆದ ಮಂಗಳವಾರ ಜೈಲಿಗೆ ಕಳುಹಿಸಿದೆ.</p>.<p>ದಾಸ್ ಅವರನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ದೇಶದ ಹಲವೆಡೆ ಹಿಂದೂ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ. </p> <p>ಅಕ್ಟೋಬರ್ 30 ರಂದು, ಹಿಂದೂ ಸಮುದಾಯದ ಸಮಾವೇಶದಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಲ್ಲಿ ದಾಸ್ ಸೇರಿದಂತೆ 19 ಜನರ ವಿರುದ್ಧ ಚಟ್ಟೋಗ್ರಾಮದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.</p> .<p>ಅಲ್ಲದೇ ದಾಸ್ ಸೇರಿದಂತೆ ಇಸ್ಕಾನ್ ಸಂಘಟನೆಗೆ ಸೇರಿದ 17 ಜನರ ಬ್ಯಾಂಕ್ ಖಾತೆಗಳನ್ನು 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಅಧಿಕಾರಿಗಳು ಗುರುವಾರ ಆದೇಶಿಸಿದ್ದಾರೆ </p>.ಕೋಲ್ಕತ್ತ: ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 3) ನಡೆಸಲಿದೆ.</p>.<p>ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಸೈಫುಲ್ ಇಸ್ಲಾಂ ಅವರು ಮಂಗಳವಾರದ ವಿಚಾರಣೆ ನಡೆಸಲಿದ್ದಾರೆ ಎಂದು ಬಾಂಗ್ಲಾದೇಶದ ಸುದ್ದಿಮಾಧ್ಯಮ ‘ಬಿಡಿನ್ಯೂಸ್24 ಡಾಟ್ ಕಾಮ್’ ವರದಿ ಮಾಡಿದೆ.</p>.<p>ವಿಚಾರಣೆಯ ದಿನಾಂಕವನ್ನು ಈಗಾಗಲೇ ನಿಗದಿಪಡಿಸಲಾಗಿದೆ. ಆದರೆ ಬುಧವಾರ ಮತ್ತು ಗುರುವಾರ ವಕೀಲರು ಕಲಾಪ ಬಹಿಷ್ಕರಿಸಿ, ಕೆಲಸಕ್ಕೆ ಗೈರಾದ ಕಾರಣ ಈ ಪ್ರಕಟಣೆ ಹೊರಡಿಸುವುದು ವಿಳಂಬವಾಗಿದೆ ಎಂದು ಚಟ್ಟೋಗ್ರಾಮ ನ್ಯಾಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಕೃಷ್ಣದಾಸ್ ಬಂಧನ: ಬಾಂಗ್ಲಾದಲ್ಲಿ ಉದ್ವಿಗ್ನ ಸ್ಥಿತಿ .<p>ಬಾಂಗ್ಲಾದೇಶ ಸಮ್ಮಿಲಿತ್ ಸನಾತನಿ ಜಾಗರಣ ಜೋತೆ‘ ವಕ್ತಾರರಾದ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಕಳೆದ ಸೋಮವಾರ ಬಂಧಿಸಲಾಗಿದೆ. ಚಟ್ಟೋಗ್ರಾಮ ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿ ಕಳೆದ ಮಂಗಳವಾರ ಜೈಲಿಗೆ ಕಳುಹಿಸಿದೆ.</p>.<p>ದಾಸ್ ಅವರನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ದೇಶದ ಹಲವೆಡೆ ಹಿಂದೂ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದಾರೆ. </p> <p>ಅಕ್ಟೋಬರ್ 30 ರಂದು, ಹಿಂದೂ ಸಮುದಾಯದ ಸಮಾವೇಶದಲ್ಲಿ ಬಾಂಗ್ಲಾದೇಶದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಲ್ಲಿ ದಾಸ್ ಸೇರಿದಂತೆ 19 ಜನರ ವಿರುದ್ಧ ಚಟ್ಟೋಗ್ರಾಮದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.</p> .<p>ಅಲ್ಲದೇ ದಾಸ್ ಸೇರಿದಂತೆ ಇಸ್ಕಾನ್ ಸಂಘಟನೆಗೆ ಸೇರಿದ 17 ಜನರ ಬ್ಯಾಂಕ್ ಖಾತೆಗಳನ್ನು 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಅಧಿಕಾರಿಗಳು ಗುರುವಾರ ಆದೇಶಿಸಿದ್ದಾರೆ </p>.ಕೋಲ್ಕತ್ತ: ಹಿಂದೂ ಮುಖಂಡ ಚಿನ್ಮಯಿ ಕೃಷ್ಣದಾಸ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>