<p><strong>ಢಾಕಾ:</strong> ಹಿಂಸಾಚಾರಪೀಡಿತ ಬಾಂಗ್ಲಾದೇಶವು ಸೀಮಿತ ವ್ಯಾಪ್ತಿಯೊಳಗೆ ಇಂಟರ್ನೆಟ್ನ ಮರುಸಂಪರ್ಕ ಹಾಗೂ ಸರ್ಕಾರಿ ಕಚೇರಿಗಳ ಆರಂಭದೊಂದಿಗೆ ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿದೆ.</p>.<p>ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿಗೆ ಸಂಬಂಧಿಸಿದ ವಿವಾದಾತ್ಮಕ ನೀತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದರಿಂದ ಬಾಂಗ್ಲಾದೇಶವು ತತ್ತರಿಸಿತ್ತು. ವಾರದ ಅವಧಿಯಲ್ಲಿ ಸುಮಾರು 200 ಮಂದಿ ಮೃತಪಟ್ಟಿರುವುದು ವರದಿಯಾಗಿತ್ತು.</p>.<p>ರಾಜಧಾನಿಯಲ್ಲಿ ಏಳು ತಾಸು ಕರ್ಫ್ಯೂ ಸಡಿಲಿಸಿದ್ದರಿಂದ ರಸ್ತೆ ಸಂಚಾರ ಪುನರಾರಂಭವಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಬುಧವಾರ ಕೆಲ ತಾಸು ಕಾರ್ಯನಿರ್ವಹಿಸಿದವು. ಢಾಕಾ ಹಾಗೂ ಚಟ್ಟೋಗ್ರಾಮ್ನ ಕೆಲ ಪ್ರದೇಶಗಳಲ್ಲಿ ಇಂಟರ್ನೆಟ್ ಹಾಗೂ ಬ್ರಾಡ್ಬ್ಯಾಂಡ್ ಸೇವೆಗಳನ್ನು ಮರುಸ್ಥಾಪಿಸಲಾಗಿದೆ.</p>.<p>ಜುಲೈ 16ರಿಂದ ನಡೆದ ಹಿಂಸಾಚಾರದಲ್ಲಿ ಕನಿಷ್ಠ 197 ಜನರು ಮೃತಪಟ್ಟಿದ್ದಾರೆ ಎಂದು ಬಂಗಾಳಿ ಭಾಷೆಯ ‘ಪ್ರೊಥೊಮ್ ಅಲೋ’ ಬುಧವಾರ ವರದಿ ಮಾಡಿದೆ. ಎಪಿ ಸುದ್ದಿಸಂಸ್ಥೆ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ.</p>.<p>‘ಹಂತಹಂತವಾಗಿ ಇಂಟರ್ನೆಟ್ ಸಂಪರ್ಕವನ್ನು ಮರುಸ್ಥಾಪಿಸಲಾಗುವುದು ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ಜುನೈದ್ ಅಹ್ಮದ್ ತಿಳಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಹಿಂಸಾಚಾರಪೀಡಿತ ಬಾಂಗ್ಲಾದೇಶವು ಸೀಮಿತ ವ್ಯಾಪ್ತಿಯೊಳಗೆ ಇಂಟರ್ನೆಟ್ನ ಮರುಸಂಪರ್ಕ ಹಾಗೂ ಸರ್ಕಾರಿ ಕಚೇರಿಗಳ ಆರಂಭದೊಂದಿಗೆ ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿದೆ.</p>.<p>ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿಗೆ ಸಂಬಂಧಿಸಿದ ವಿವಾದಾತ್ಮಕ ನೀತಿ ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದರಿಂದ ಬಾಂಗ್ಲಾದೇಶವು ತತ್ತರಿಸಿತ್ತು. ವಾರದ ಅವಧಿಯಲ್ಲಿ ಸುಮಾರು 200 ಮಂದಿ ಮೃತಪಟ್ಟಿರುವುದು ವರದಿಯಾಗಿತ್ತು.</p>.<p>ರಾಜಧಾನಿಯಲ್ಲಿ ಏಳು ತಾಸು ಕರ್ಫ್ಯೂ ಸಡಿಲಿಸಿದ್ದರಿಂದ ರಸ್ತೆ ಸಂಚಾರ ಪುನರಾರಂಭವಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಬುಧವಾರ ಕೆಲ ತಾಸು ಕಾರ್ಯನಿರ್ವಹಿಸಿದವು. ಢಾಕಾ ಹಾಗೂ ಚಟ್ಟೋಗ್ರಾಮ್ನ ಕೆಲ ಪ್ರದೇಶಗಳಲ್ಲಿ ಇಂಟರ್ನೆಟ್ ಹಾಗೂ ಬ್ರಾಡ್ಬ್ಯಾಂಡ್ ಸೇವೆಗಳನ್ನು ಮರುಸ್ಥಾಪಿಸಲಾಗಿದೆ.</p>.<p>ಜುಲೈ 16ರಿಂದ ನಡೆದ ಹಿಂಸಾಚಾರದಲ್ಲಿ ಕನಿಷ್ಠ 197 ಜನರು ಮೃತಪಟ್ಟಿದ್ದಾರೆ ಎಂದು ಬಂಗಾಳಿ ಭಾಷೆಯ ‘ಪ್ರೊಥೊಮ್ ಅಲೋ’ ಬುಧವಾರ ವರದಿ ಮಾಡಿದೆ. ಎಪಿ ಸುದ್ದಿಸಂಸ್ಥೆ ಸಾವಿನ ಸಂಖ್ಯೆಯನ್ನು ದೃಢಪಡಿಸಿಲ್ಲ.</p>.<p>‘ಹಂತಹಂತವಾಗಿ ಇಂಟರ್ನೆಟ್ ಸಂಪರ್ಕವನ್ನು ಮರುಸ್ಥಾಪಿಸಲಾಗುವುದು ಎಂದು ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ಜುನೈದ್ ಅಹ್ಮದ್ ತಿಳಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>