<p><strong>ಢಾಕಾ:</strong> ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ನೀಲ ನಕ್ಷೆಯ ವಿವರಗಳನ್ನು ಚುನಾವಣಾ ಆಯೋಗವು ಇದೇ ವಾರದಲ್ಲಿ ಪ್ರಕಟಿಸಲಿದೆ.</p>.<p>ಬಾಂಗ್ಲಾದೇಶ ಚುನಾವಣಾ ಆಯೋಗದ ಹಿರಿಯ ಕಾರ್ಯದರ್ಶಿ ಅಖ್ತರ್ ಅಹ್ಮದ್ ಈ ಬಗ್ಗೆ ಸೋಮವಾರ ಮಾಹಿತಿ ನೀಡಿದ್ದಾರೆ. ಚುನಾವಣಾ ರೂಪುರೇಷೆ ಸಂಬಂಧಿಸಿದ ಕರಡು ಪ್ರತಿ ಈಗಾಗಲೇ ಸಿದ್ಧವಾಗಿದ್ದು, ಆಯೋಗದ ಅಂತಿಮ ಅನುಮತಿಗಾಗಿ ಶೀಘ್ರವೇ ಸಲ್ಲಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕ್ರಿಯಾ ಯೋಜನೆಯು ಆಂತರಿಕ ಸಹಕಾರ ಹಾಗೂ ಚುನಾವಣಾ ಸಂಬಂಧಿತ ಕಾರ್ಯಾಚರಣೆಗಳ ಸಮಸ್ಯೆಗಳನ್ನು ಕೇಂದ್ರೀಕರಿಸಲಿದೆ. ವಾರದ ಒಳಗೆ ಯೋಜನೆಯ ಸಿದ್ದತೆಯನ್ನು ಅಂತಿಮವಾಗಿ ಪರಿಶೀಲಿಸಿ, ಪ್ರಕಟಿಸಲು ಸಿದ್ಧತೆ ನಡೆದಿದೆ ಎಂದಿದ್ದಾರೆ. </p>.<p>ಜತೆಗೆ, ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆಗಳನ್ನು ಕೈಗೊಂಡಿವೆ ಎಂದೂ ಅಖ್ತರ್ ಮಾಹಿತಿ ನೀಡಿದ್ದಾರೆ. </p>.<p>ಬಾಂಗ್ಲಾದಲ್ಲಿ ಫೆಬ್ರವರಿಯಲ್ಲೂ ಚುನಾವಣೆ ನಡೆಯುವ ಬಗ್ಗೆ ಕೆಲ ರಾಜಕೀಯ ಪಕ್ಷಗಳ ನಾಯಕರು ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅಖ್ತರ್ ಅವರು ಈ ಮಾಹಿತಿ ನೀಡಿರುವುದು ಪ್ರಾಮುಖ್ಯತೆ ಪಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ನೀಲ ನಕ್ಷೆಯ ವಿವರಗಳನ್ನು ಚುನಾವಣಾ ಆಯೋಗವು ಇದೇ ವಾರದಲ್ಲಿ ಪ್ರಕಟಿಸಲಿದೆ.</p>.<p>ಬಾಂಗ್ಲಾದೇಶ ಚುನಾವಣಾ ಆಯೋಗದ ಹಿರಿಯ ಕಾರ್ಯದರ್ಶಿ ಅಖ್ತರ್ ಅಹ್ಮದ್ ಈ ಬಗ್ಗೆ ಸೋಮವಾರ ಮಾಹಿತಿ ನೀಡಿದ್ದಾರೆ. ಚುನಾವಣಾ ರೂಪುರೇಷೆ ಸಂಬಂಧಿಸಿದ ಕರಡು ಪ್ರತಿ ಈಗಾಗಲೇ ಸಿದ್ಧವಾಗಿದ್ದು, ಆಯೋಗದ ಅಂತಿಮ ಅನುಮತಿಗಾಗಿ ಶೀಘ್ರವೇ ಸಲ್ಲಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಕ್ರಿಯಾ ಯೋಜನೆಯು ಆಂತರಿಕ ಸಹಕಾರ ಹಾಗೂ ಚುನಾವಣಾ ಸಂಬಂಧಿತ ಕಾರ್ಯಾಚರಣೆಗಳ ಸಮಸ್ಯೆಗಳನ್ನು ಕೇಂದ್ರೀಕರಿಸಲಿದೆ. ವಾರದ ಒಳಗೆ ಯೋಜನೆಯ ಸಿದ್ದತೆಯನ್ನು ಅಂತಿಮವಾಗಿ ಪರಿಶೀಲಿಸಿ, ಪ್ರಕಟಿಸಲು ಸಿದ್ಧತೆ ನಡೆದಿದೆ ಎಂದಿದ್ದಾರೆ. </p>.<p>ಜತೆಗೆ, ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆಗಳನ್ನು ಕೈಗೊಂಡಿವೆ ಎಂದೂ ಅಖ್ತರ್ ಮಾಹಿತಿ ನೀಡಿದ್ದಾರೆ. </p>.<p>ಬಾಂಗ್ಲಾದಲ್ಲಿ ಫೆಬ್ರವರಿಯಲ್ಲೂ ಚುನಾವಣೆ ನಡೆಯುವ ಬಗ್ಗೆ ಕೆಲ ರಾಜಕೀಯ ಪಕ್ಷಗಳ ನಾಯಕರು ಅನುಮಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅಖ್ತರ್ ಅವರು ಈ ಮಾಹಿತಿ ನೀಡಿರುವುದು ಪ್ರಾಮುಖ್ಯತೆ ಪಡೆದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>