<p><strong>ಢಾಕಾ</strong>: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿನ ಗಾರ್ಮೆಂಟ್ ಕಾರ್ಖಾನೆ ಮತ್ತು ರಾಸಾಯನಿಕ ಸಂಗ್ರಹಾಗಾರದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಕಾರ್ಮಿಕರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ.</p>.<p>ಮೊದಲಿಗೆ ರಾಸಾಯನಿಕ ಸಂಗ್ರಹಾಗಾರದಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಅದು ಗಾರ್ಮೆಂಟ್ ಕಾರ್ಖಾನೆಗೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.</p>.<p>ಗಾರ್ಮೆಂಟ್ನ ಮೊದಲ ಮತ್ತು ಎರಡನೇ ಮಹಡಿಗಳಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ನಾಗರಿಕ ರಕ್ಷಣಾ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಲೆಫ್ಟಿನೆಂಟ್ ಕರ್ನಲ್ ಮಹಮ್ಮದ್ ತಾಜುಲ್ ಇಸ್ಲಾಂ ಚೌಧರಿ ತಿಳಿಸಿದರು.</p>.<p>ವಿಷಯುಕ್ತ ಗಾಳಿ ಸೇವಿಸಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಕಿ ನಿಯಂತ್ರಣದಲ್ಲಿದ್ದು, ಶೋಧವನ್ನು ಮುಂದುವರಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿನ ಗಾರ್ಮೆಂಟ್ ಕಾರ್ಖಾನೆ ಮತ್ತು ರಾಸಾಯನಿಕ ಸಂಗ್ರಹಾಗಾರದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಒಂಬತ್ತು ಕಾರ್ಮಿಕರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ.</p>.<p>ಮೊದಲಿಗೆ ರಾಸಾಯನಿಕ ಸಂಗ್ರಹಾಗಾರದಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಅದು ಗಾರ್ಮೆಂಟ್ ಕಾರ್ಖಾನೆಗೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.</p>.<p>ಗಾರ್ಮೆಂಟ್ನ ಮೊದಲ ಮತ್ತು ಎರಡನೇ ಮಹಡಿಗಳಿಂದ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ನಾಗರಿಕ ರಕ್ಷಣಾ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಲೆಫ್ಟಿನೆಂಟ್ ಕರ್ನಲ್ ಮಹಮ್ಮದ್ ತಾಜುಲ್ ಇಸ್ಲಾಂ ಚೌಧರಿ ತಿಳಿಸಿದರು.</p>.<p>ವಿಷಯುಕ್ತ ಗಾಳಿ ಸೇವಿಸಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.</p>.<p>ಬೆಂಕಿ ನಿಯಂತ್ರಣದಲ್ಲಿದ್ದು, ಶೋಧವನ್ನು ಮುಂದುವರಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>