ಢಾಕಾ: ಬಾಂಗ್ಲಾದೇಶದಲ್ಲಿ ಸೋಮವಾರ ಸಂಭವಿಸಿದ ದೋಣಿ ದುರಂತದಲ್ಲಿ 23 ಪ್ರಯಾಣಿಕರು ಸತ್ತಿದ್ದಾರೆ. ಅಪಘಾತದ ನಂತರ ಬುರಿಗಂಗಾ ನದಿಯಲ್ಲಿ ದೋಣಿ ಮುಳುಗಿ ಅವಘಡ ಸಂಭವಿಸಿದೆ.
ದೋಣಿಯಲ್ಲಿ ಸುಮಾರು 50 ಪ್ರಯಾಣಿಕರಿದ್ದರು. ಮೃತರಲ್ಲಿ ಮೂವರು ಮಕ್ಕಳು, ಆರು ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಅಗ್ನಿಶಾಮಕ ಸೇವೆಯ ಅಧಿಕಾರಿ ಶಹಜಹಾನ್ ಶಿಕ್ತೇರ್ ತಿಳಿಸಿದ್ದಾರೆ.
ಕೆಲ ಪ್ರಯಾಣಿಕರು ಈಜಿ ಪಾರಾಗಿದ್ದಾರೆ. ಇನ್ನೂ ಕೆಲವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆದಿದೆ. ಇದುವರೆಗೂ ಒಟ್ಟು 23 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.