<p><strong>ಢಾಕಾ:</strong> ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಸೇರಿದಂತೆ ಇಸ್ಕಾನ್ ಜತೆ ಗುರುತಿಸಿಕೊಂಡಿರುವ 17 ಮಂದಿಯ ಬ್ಯಾಂಕ್ ಖಾತೆಗಳನ್ನು 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಹಣಕಾಸು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.</p>.<p>‘ಬಾಂಗ್ಲಾದೇಶ ಬ್ಯಾಂಕ್ನ ಹಣಕಾಸು ಗುಪ್ತಚರ ಘಟಕವು (ಬಿಎಫ್ಐಯು) ವಿವಿಧ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಇದಕ್ಕೆ ಸಂಬಂಧಪಟ್ಟ ನಿರ್ದೇಶನಗಳನ್ನು ಗುರುವಾರ ಕಳುಹಿಸಿದ್ದು, ಈ ಖಾತೆಗಳಲ್ಲಿನ ಎಲ್ಲಾ ರೀತಿಯ ವಹಿವಾಟುಗಳನ್ನು ಒಂದು ತಿಂಗಳ ಕಾಲ ಸ್ಥಗಿತಗೊಳಿಸಿದೆ’ ಎಂದು ಪ್ರಥಮ್ ಅಲೊ ಪತ್ರಿಕೆ ವರದಿ ಮಾಡಿದೆ. </p>.<p>ಈ 17 ವ್ಯಕ್ತಿಗಳಿಗೆ ಸೇರಿದ ಖಾತೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಅವರು ನಡೆಸಿರುವ ಎಲ್ಲ ರೀತಿಯ ಹಣಕಾಸು ವ್ಯವಹಾರಗಳ ವಿವರಗಳನ್ನು ಮೂರು ದಿನಗಳ ಒಳಗಾಗಿ ಕಳುಹಿಸಿಕೊಂಡುವಂತೆ ಬಿಎಫ್ಐಯು, ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಕೇಳಿದೆ.</p>.<p>ಬಾಂಗ್ಲಾದೇಶದ ‘ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯಿ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದಲ್ಲಿ ಸೋಮವಾರ ಢಾಕಾದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಮಂಗಳವಾರ ಇವರ ಜಾಮೀನು ಅರ್ಜಿಯನ್ನು ಚಟ್ಟೋಗ್ರಾಮ ನ್ಯಾಯಾಲಯವು ತಿರಸ್ಕರಿಸಿ, ಜೈಲಿಗೆ ಕಳುಹಿಸಿತ್ತು.</p>.<p>ಚಿನ್ಮಯಿ ಕೃಷ್ಣದಾಸ್ ಅವರ ಬಂಧನದ ವೇಳೆ ನಡೆದ ಘರ್ಷಣೆಯಲ್ಲಿ ವಕೀಲ ಸೈಫುಲ್ ಇಸ್ಲಾಂ ಎಂಬವರು ಮೃತಪಟ್ಟಿದ್ದರು. ಕೃಷ್ಣದಾಸ್ ಅವರು ಈ ಹಿಂದೆ ಬಾಂಗ್ಲಾದೇಶದ ಇಸ್ಕಾನ್ನ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. </p>.ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ವಿಎಚ್ಪಿ ಪ್ರತಿಭಟನೆ.ಬಾಂಗ್ಲಾ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು: ಭಾರತ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಸೇರಿದಂತೆ ಇಸ್ಕಾನ್ ಜತೆ ಗುರುತಿಸಿಕೊಂಡಿರುವ 17 ಮಂದಿಯ ಬ್ಯಾಂಕ್ ಖಾತೆಗಳನ್ನು 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಹಣಕಾಸು ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.</p>.<p>‘ಬಾಂಗ್ಲಾದೇಶ ಬ್ಯಾಂಕ್ನ ಹಣಕಾಸು ಗುಪ್ತಚರ ಘಟಕವು (ಬಿಎಫ್ಐಯು) ವಿವಿಧ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಇದಕ್ಕೆ ಸಂಬಂಧಪಟ್ಟ ನಿರ್ದೇಶನಗಳನ್ನು ಗುರುವಾರ ಕಳುಹಿಸಿದ್ದು, ಈ ಖಾತೆಗಳಲ್ಲಿನ ಎಲ್ಲಾ ರೀತಿಯ ವಹಿವಾಟುಗಳನ್ನು ಒಂದು ತಿಂಗಳ ಕಾಲ ಸ್ಥಗಿತಗೊಳಿಸಿದೆ’ ಎಂದು ಪ್ರಥಮ್ ಅಲೊ ಪತ್ರಿಕೆ ವರದಿ ಮಾಡಿದೆ. </p>.<p>ಈ 17 ವ್ಯಕ್ತಿಗಳಿಗೆ ಸೇರಿದ ಖಾತೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಅವರು ನಡೆಸಿರುವ ಎಲ್ಲ ರೀತಿಯ ಹಣಕಾಸು ವ್ಯವಹಾರಗಳ ವಿವರಗಳನ್ನು ಮೂರು ದಿನಗಳ ಒಳಗಾಗಿ ಕಳುಹಿಸಿಕೊಂಡುವಂತೆ ಬಿಎಫ್ಐಯು, ಬ್ಯಾಂಕ್ಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಕೇಳಿದೆ.</p>.<p>ಬಾಂಗ್ಲಾದೇಶದ ‘ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯಿ ಕೃಷ್ಣದಾಸ್ ಅವರನ್ನು ದೇಶದ್ರೋಹದ ಆರೋಪದಲ್ಲಿ ಸೋಮವಾರ ಢಾಕಾದ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಮಂಗಳವಾರ ಇವರ ಜಾಮೀನು ಅರ್ಜಿಯನ್ನು ಚಟ್ಟೋಗ್ರಾಮ ನ್ಯಾಯಾಲಯವು ತಿರಸ್ಕರಿಸಿ, ಜೈಲಿಗೆ ಕಳುಹಿಸಿತ್ತು.</p>.<p>ಚಿನ್ಮಯಿ ಕೃಷ್ಣದಾಸ್ ಅವರ ಬಂಧನದ ವೇಳೆ ನಡೆದ ಘರ್ಷಣೆಯಲ್ಲಿ ವಕೀಲ ಸೈಫುಲ್ ಇಸ್ಲಾಂ ಎಂಬವರು ಮೃತಪಟ್ಟಿದ್ದರು. ಕೃಷ್ಣದಾಸ್ ಅವರು ಈ ಹಿಂದೆ ಬಾಂಗ್ಲಾದೇಶದ ಇಸ್ಕಾನ್ನ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. </p>.ಬಾಂಗ್ಲಾದೇಶ: ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ವಿಎಚ್ಪಿ ಪ್ರತಿಭಟನೆ.ಬಾಂಗ್ಲಾ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸಬೇಕು: ಭಾರತ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>