<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ಫೆ.12ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸೋಮವಾರ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದವು. ರಾಜಧಾನಿ ಢಾಕಾ ಸೇರಿದಂತೆ ಹಲವು ಕಡೆಗಳಲ್ಲಿ ಅಬ್ಬರದ ರ್ಯಾಲಿಗಳು ನಡೆದವು. </p>.<p>ಮತದಾನಕ್ಕೆ 48 ಗಂಟೆಗಳ ಮುಂಚೆ, ಅಂದರೆ ಮಂಗಳವಾರ ಬೆಳಿಗ್ಗೆ 7.30ಕ್ಕೆ ಪ್ರಚಾರಕ್ಕೆ ತೆರೆ ಬೀಳಲಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಕೆಳಗಿಸಲು ಕಾರಣವಾದ 2024ರ ದಂಗೆಯನ್ನು ಪಕ್ಷಗಳು ಪ್ರಚಾರದ ಪ್ರಮುಖ ವಿಷಯವನ್ನಾಗಿ ಬಳಸಿಕೊಂಡವು. </p>.<p>17 ವರ್ಷ ಗಡಿಪಾರಿನಲ್ಲಿದ್ದ, ತಾರಿಕ್ ರೆಹಮಾನ್ ಅವರ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷವು (ಬಿಎನ್ಪಿ) ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ. ಮಾಜಿ ಪ್ರಧಾನಿ, ದಿವಂಗತ ಖಾಲಿದಾ ಜಿಯಾ ಅವರ ನಿಧನದ ಬಳಿಕ ಪುತ್ರ ರೆಹಮಾನ್ ಅವರು ಪಕ್ಷದ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. </p>.<p>ರೆಹಮಾನ್ ಅವರು ಢಾಕಾದಲ್ಲಿ ಭಾನುವಾರ ಬೃಹತ್ ರ್ಯಾಲಿ ನಡೆಸಿದರು. ಜಮಾತ್-ಎ-ಇಸ್ಲಾಮಿ ಪಕ್ಷದ ಮುಖ್ಯಸ್ಥ ಶಫೀಕುರ್ ರೆಹಮಾನ್ ಅವರು ಢಾಕಾ ಹೊರವಲಯದ ಮೀರ್ಪುರದಲ್ಲಿ ಪ್ರಚಾರ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದಲ್ಲಿ ಫೆ.12ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸೋಮವಾರ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದವು. ರಾಜಧಾನಿ ಢಾಕಾ ಸೇರಿದಂತೆ ಹಲವು ಕಡೆಗಳಲ್ಲಿ ಅಬ್ಬರದ ರ್ಯಾಲಿಗಳು ನಡೆದವು. </p>.<p>ಮತದಾನಕ್ಕೆ 48 ಗಂಟೆಗಳ ಮುಂಚೆ, ಅಂದರೆ ಮಂಗಳವಾರ ಬೆಳಿಗ್ಗೆ 7.30ಕ್ಕೆ ಪ್ರಚಾರಕ್ಕೆ ತೆರೆ ಬೀಳಲಿದೆ. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಕೆಳಗಿಸಲು ಕಾರಣವಾದ 2024ರ ದಂಗೆಯನ್ನು ಪಕ್ಷಗಳು ಪ್ರಚಾರದ ಪ್ರಮುಖ ವಿಷಯವನ್ನಾಗಿ ಬಳಸಿಕೊಂಡವು. </p>.<p>17 ವರ್ಷ ಗಡಿಪಾರಿನಲ್ಲಿದ್ದ, ತಾರಿಕ್ ರೆಹಮಾನ್ ಅವರ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷವು (ಬಿಎನ್ಪಿ) ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ. ಮಾಜಿ ಪ್ರಧಾನಿ, ದಿವಂಗತ ಖಾಲಿದಾ ಜಿಯಾ ಅವರ ನಿಧನದ ಬಳಿಕ ಪುತ್ರ ರೆಹಮಾನ್ ಅವರು ಪಕ್ಷದ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. </p>.<p>ರೆಹಮಾನ್ ಅವರು ಢಾಕಾದಲ್ಲಿ ಭಾನುವಾರ ಬೃಹತ್ ರ್ಯಾಲಿ ನಡೆಸಿದರು. ಜಮಾತ್-ಎ-ಇಸ್ಲಾಮಿ ಪಕ್ಷದ ಮುಖ್ಯಸ್ಥ ಶಫೀಕುರ್ ರೆಹಮಾನ್ ಅವರು ಢಾಕಾ ಹೊರವಲಯದ ಮೀರ್ಪುರದಲ್ಲಿ ಪ್ರಚಾರ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>