<p><strong>ಢಾಕಾ</strong>: 2004ರಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಸೇರಿದಂತೆ ಎಲ್ಲರನ್ನೂ ಹೈಕೋರ್ಟ್ ಖುಲಾಸೆಗೊಳಿಸಿದೆ. </p>.<p>‘ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಭಾನುವಾರ ರದ್ದುಗೊಳಿಸಿದ್ದು, ತಾರಿಕ್ ಸೇರಿದಂತೆ ಎಲ್ಲರನ್ನೂ ಖುಲಾಸೆಗೊಳಿಸಿದೆ’ ಎಂದು ಅಟಾರ್ನಿ ಜನರಲ್ ಕಚೇರಿಯ ವಕ್ತಾರರು ತಿಳಿಸಿದ್ದಾರೆ. 57 ವರ್ಷದ ತಾರಿಕ್ ಅವರು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿಯ (ಬಿಎನ್ಪಿ) ಹಂಗಾಮಿ ಮುಖ್ಯಸ್ಥರಾಗಿದ್ದು, ಈಗ ಲಂಡನ್ನಲ್ಲಿ ನೆಲೆಸಿದ್ದಾರೆ. </p>.<p>ನ್ಯಾಯಮೂರ್ತಿಗಳಾದ ಎ.ಕೆ.ಎಂ ಅಬ್ದುಝ್ಝಮಾನ್ ಮತ್ತು ಸೈಯದ್ ಇನಾಯತ್ ಹೊಸೇನ್ ಅವರನ್ನೊಳಗೊಂಡ ಪೀಠವು, ವಿಚಾರಣಾ ನ್ಯಾಯಾಲದ ತೀರ್ಪನ್ನು ‘ಕಾನೂನುಬಾಹಿರ’ ಎಂದು ಘೋಷಿಸಿತು. ಎಲ್ಲ 49 ಅರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಪ್ರಕಟಿಸಿತು.</p>.<p>ಪದಚ್ಯುತ ಪ್ರಧಾನಿ ಶೇಕ್ ಹಸೀನಾ ಅವರು ವಿರೋಧ ಪಕ್ಷದ ನಾಯಕಿಯಾಗಿದ್ದ ಅವಧಿಯಲ್ಲಿ 2004ರ ಆಗಸ್ಟ್ 21ರಂದು ಆಯೋಜಿಸಿದ್ದ ರ್ಯಾಲಿಯನ್ನು ಗುರಿಯಾಗಿಸಿ ಗ್ರೆನೇಡ್ ದಾಳಿ ನಡೆದಿತ್ತು. ಘಟನೆಯಲ್ಲಿ 24 ಮಂದಿ ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಢಾಕಾದ ನ್ಯಾಯಾಲಯವು 19 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ್ದರೆ, ತಾರಿಕ್ ಸೇರಿದಂತೆ ಇತರ 19 ಮಂದಿಯನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಿತ್ತು. ಇನ್ನುಳಿದ 11 ಆರೋಪಿಗಳಿಗೆ ವಿವಿಧ ಅವಧಿಯ ಜೈಲು ಶಿಕ್ಷೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: 2004ರಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಸೇರಿದಂತೆ ಎಲ್ಲರನ್ನೂ ಹೈಕೋರ್ಟ್ ಖುಲಾಸೆಗೊಳಿಸಿದೆ. </p>.<p>‘ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಭಾನುವಾರ ರದ್ದುಗೊಳಿಸಿದ್ದು, ತಾರಿಕ್ ಸೇರಿದಂತೆ ಎಲ್ಲರನ್ನೂ ಖುಲಾಸೆಗೊಳಿಸಿದೆ’ ಎಂದು ಅಟಾರ್ನಿ ಜನರಲ್ ಕಚೇರಿಯ ವಕ್ತಾರರು ತಿಳಿಸಿದ್ದಾರೆ. 57 ವರ್ಷದ ತಾರಿಕ್ ಅವರು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿಯ (ಬಿಎನ್ಪಿ) ಹಂಗಾಮಿ ಮುಖ್ಯಸ್ಥರಾಗಿದ್ದು, ಈಗ ಲಂಡನ್ನಲ್ಲಿ ನೆಲೆಸಿದ್ದಾರೆ. </p>.<p>ನ್ಯಾಯಮೂರ್ತಿಗಳಾದ ಎ.ಕೆ.ಎಂ ಅಬ್ದುಝ್ಝಮಾನ್ ಮತ್ತು ಸೈಯದ್ ಇನಾಯತ್ ಹೊಸೇನ್ ಅವರನ್ನೊಳಗೊಂಡ ಪೀಠವು, ವಿಚಾರಣಾ ನ್ಯಾಯಾಲದ ತೀರ್ಪನ್ನು ‘ಕಾನೂನುಬಾಹಿರ’ ಎಂದು ಘೋಷಿಸಿತು. ಎಲ್ಲ 49 ಅರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ಪ್ರಕಟಿಸಿತು.</p>.<p>ಪದಚ್ಯುತ ಪ್ರಧಾನಿ ಶೇಕ್ ಹಸೀನಾ ಅವರು ವಿರೋಧ ಪಕ್ಷದ ನಾಯಕಿಯಾಗಿದ್ದ ಅವಧಿಯಲ್ಲಿ 2004ರ ಆಗಸ್ಟ್ 21ರಂದು ಆಯೋಜಿಸಿದ್ದ ರ್ಯಾಲಿಯನ್ನು ಗುರಿಯಾಗಿಸಿ ಗ್ರೆನೇಡ್ ದಾಳಿ ನಡೆದಿತ್ತು. ಘಟನೆಯಲ್ಲಿ 24 ಮಂದಿ ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಢಾಕಾದ ನ್ಯಾಯಾಲಯವು 19 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ್ದರೆ, ತಾರಿಕ್ ಸೇರಿದಂತೆ ಇತರ 19 ಮಂದಿಯನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಿತ್ತು. ಇನ್ನುಳಿದ 11 ಆರೋಪಿಗಳಿಗೆ ವಿವಿಧ ಅವಧಿಯ ಜೈಲು ಶಿಕ್ಷೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>