<p><strong>ಢಾಕಾ</strong>: ರಾಜಕೀಯ ನಂಟು ಹೊಂದಿದ್ದ ಆರೋಪದಲ್ಲಿ 2019ರಲ್ಲಿ ಸಹಪಾಟಿಯನ್ನು ಕೊಂದಿದ್ದ 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿರುವ ಕೆಳ ನ್ಯಾಯಾಲಯದ ತೀರ್ಪನ್ನು ಬಾಂಗ್ಲಾದೇಶ ಹೈಕೋರ್ಟ್ ಭಾನುವಾರ ಎತ್ತಿಹಿಡಿದಿದೆ.</p><p>ನ್ಯಾಯಮೂರ್ತಿಗಳಾದ ಎಕೆಎಂ ಅಸಾದುಜ್ಜಮಾನ್ ಮತ್ತು ಸಯ್ಯದ್ ಇನಾಯೆತ್ ಹೊಸೈನ್ ಅವರಿದ್ದ ದ್ವಿಸದಸ್ಯ ಪೀಠವು, ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಹಾಗೂ ಮರಣದಂಡನೆ ಉಲ್ಲೇಖ ಕುರಿತ ವಿಚಾರಣೆಯನ್ನು ಒಟ್ಟಿಗೆ ನಡೆಸಿ ತೀರ್ಪು ಪ್ರಕಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಿಕ್ಷೆಗೆ ಗುರಿಯಾಗಿರುವ ಎಲ್ಲರೂ, ಬಾಂಗ್ಲಾದೇಶ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಬಿಯುಇಟಿ) ವಿದ್ಯಾರ್ಥಿಗಳಾಗಿದ್ದು, ಸದ್ಯ ನಿಷೇಧಗೊಂಡಿರುವ ಬಾಂಗ್ಲಾದೇಶ ಛತ್ರ ಲೀಗ್ಗೆ (ಬಿಸಿಎಲ್) ಸೇರಿದವರಾಗಿದ್ದಾರೆ. ಇದು, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ 'ಅವಾಮಿ ಲೀಗ್' ಪಕ್ಷದ ವಿದ್ಯಾರ್ಥಿ ಘಟಕವಾಗಿದೆ.</p><p>'ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್' ವಿಷಯದ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಅಬ್ರಾರ್ ಫಹಾದ್ ಅವರ ಶವ ವಿವಿಯ ವಿದ್ಯಾರ್ಥಿನಿಲಯದಲ್ಲಿ 2019ರ ಅಕ್ಟೋಬರ್ 8ರಂದು ಬೆಳಿಗ್ಗೆ ಪತ್ತೆಯಾಗಿತ್ತು. ಆತನ ಮೇಲೆ, ಕ್ರಿಕೆಟ್ ಬ್ಯಾಟ್ ಹಾಗೂ ಇತರ ವಸ್ತುಗಳಿಂದ ಸುಮಾರು 6 ಗಂಟೆ ಕಾಲ, 25 ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರು ಎಂಬುದು ತನಿಖೆಯ ನಂತರ ಗೊತ್ತಾಗಿತ್ತು.</p><p>ಹಸೀನಾ ಸರ್ಕಾರದ ವಿರುದ್ಧ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡ ಕಾರಣಕ್ಕೆ ಫಹಾದ್ ಮೇಲೆ ಹಿಂದಿನ ದಿನ ದಾಳಿ ಮಾಡಲಾಗಿತ್ತು.</p><p>ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಈ ವಿದ್ಯಾರ್ಥಿಗಳನ್ನು ಬಿಯುಇಟಿ ಮತ್ತು ಬಿಸಿಎಲ್, ಕೂಡಲೇ ಹೊರಹಾಕಿದ್ದವು.</p><p>ಢಾಕಾ ನ್ಯಾಯಾಲಯ, ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗಲೇ (2021ರ ಡಿಸೆಂಬರ್ 8ರಂದು) 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಹೈಕೋರ್ಟ್, ಈ ಆದೇಶವನ್ನು ಎತ್ತಿಹಿಡಿದಿರುವುದಷ್ಟೇ ಅಲ್ಲದೆ, 'ಬಿಯುಇಟಿ ವಿದ್ಯಾರ್ಥಿಗಳಾಗಿದ್ದ ಇತರ ಐವರಿಗೂ ಮರಣದಂಡನೆ ವಿಧಿಸಿದೆ' ಎಂದು ಅಟಾರ್ನಿ ಜನರಲ್ ಎಂ. ಅಸಾದುಜ್ಜಮಾನ್ ಹೇಳಿದ್ದಾರೆ.</p>.ಬಲೂಚಿಸ್ತಾನದಲ್ಲಿ ಮತ್ತೊಂದು ದಾಳಿ: ಯೋಧರಿದ್ದ ಬಸ್ ಮೇಲೆ ಬಾಂಬ್, ಐವರು ಹುತಾತ್ಮ.33 ಉಗ್ರರ ಹತ್ಯೆ; 31 ಯೋಧರು ಹುತಾತ್ಮ, 354 ಒತ್ತೆಯಾಳುಗಳ ರಕ್ಷಣೆ: ಪಾಕ್.<p>ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಫಹಾದ್ ತಂದೆ, 'ತೀರ್ಪು ಸಮಾಧಾನ ತಂದಿದೆ. ಇದು ಶೀಘ್ರದಲ್ಲೇ ಜಾರಿಯಾಗಬೇಕು' ಎಂದಿದ್ದಾರೆ. ಫಹಾದ್ ಸಹೋದರ ಫೈಯಾಜ್, 'ಇಷ್ಟು ಶೀಘ್ರದಲ್ಲೇ ತೀರ್ಪು ಪ್ರಕಟವಾಗಲಿದೆ ಎಂದು ನಿರೀಕ್ಷಿಸಿರಲಿಲ್ಲ' ಎಂದು ಹೇಳಿದ್ದಾರೆ.</p><p>ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಿವಾದಿ ವಕೀಲ ಅಝಿಝುರ್ ರಹಮಾನ್ ದುಲು, ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.</p><p>ಶಿಕ್ಷೆಗೆ ಗುರಿಯಾಗಿರುವವರ ಪೈಕಿ, ಮುನ್ತಾಸಿರ್ ಅಲ್ ಜಮೀ ಎಂಬಾತ ಕಾಶಿಮುರ್ ಕೇಂದ್ರ ಕಾರಾಗೃಹದಿಂದ ಕಳೆದ ವರ್ಷ (2024ರಲ್ಲಿ) ಪರಾರಿಯಾಗಿದ್ದಾನೆ.</p><p>ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ 2024ರ ಆಗಸ್ಟ್ 5ರಂದು ದೇಶದಿಂದ ಪಲಾಯನ ಮಾಡಿದ್ದರು. ಮರುದಿನ (ಆಗಸ್ಟ್ 6ರಂದು) ಮುನ್ತಾಸಿರ್ ಸೇರಿದಂತೆ 86 ಕೈದಿಗಳು ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ರಾಜಕೀಯ ನಂಟು ಹೊಂದಿದ್ದ ಆರೋಪದಲ್ಲಿ 2019ರಲ್ಲಿ ಸಹಪಾಟಿಯನ್ನು ಕೊಂದಿದ್ದ 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿರುವ ಕೆಳ ನ್ಯಾಯಾಲಯದ ತೀರ್ಪನ್ನು ಬಾಂಗ್ಲಾದೇಶ ಹೈಕೋರ್ಟ್ ಭಾನುವಾರ ಎತ್ತಿಹಿಡಿದಿದೆ.</p><p>ನ್ಯಾಯಮೂರ್ತಿಗಳಾದ ಎಕೆಎಂ ಅಸಾದುಜ್ಜಮಾನ್ ಮತ್ತು ಸಯ್ಯದ್ ಇನಾಯೆತ್ ಹೊಸೈನ್ ಅವರಿದ್ದ ದ್ವಿಸದಸ್ಯ ಪೀಠವು, ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಹಾಗೂ ಮರಣದಂಡನೆ ಉಲ್ಲೇಖ ಕುರಿತ ವಿಚಾರಣೆಯನ್ನು ಒಟ್ಟಿಗೆ ನಡೆಸಿ ತೀರ್ಪು ಪ್ರಕಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶಿಕ್ಷೆಗೆ ಗುರಿಯಾಗಿರುವ ಎಲ್ಲರೂ, ಬಾಂಗ್ಲಾದೇಶ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಬಿಯುಇಟಿ) ವಿದ್ಯಾರ್ಥಿಗಳಾಗಿದ್ದು, ಸದ್ಯ ನಿಷೇಧಗೊಂಡಿರುವ ಬಾಂಗ್ಲಾದೇಶ ಛತ್ರ ಲೀಗ್ಗೆ (ಬಿಸಿಎಲ್) ಸೇರಿದವರಾಗಿದ್ದಾರೆ. ಇದು, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ 'ಅವಾಮಿ ಲೀಗ್' ಪಕ್ಷದ ವಿದ್ಯಾರ್ಥಿ ಘಟಕವಾಗಿದೆ.</p><p>'ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್' ವಿಷಯದ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಅಬ್ರಾರ್ ಫಹಾದ್ ಅವರ ಶವ ವಿವಿಯ ವಿದ್ಯಾರ್ಥಿನಿಲಯದಲ್ಲಿ 2019ರ ಅಕ್ಟೋಬರ್ 8ರಂದು ಬೆಳಿಗ್ಗೆ ಪತ್ತೆಯಾಗಿತ್ತು. ಆತನ ಮೇಲೆ, ಕ್ರಿಕೆಟ್ ಬ್ಯಾಟ್ ಹಾಗೂ ಇತರ ವಸ್ತುಗಳಿಂದ ಸುಮಾರು 6 ಗಂಟೆ ಕಾಲ, 25 ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರು ಎಂಬುದು ತನಿಖೆಯ ನಂತರ ಗೊತ್ತಾಗಿತ್ತು.</p><p>ಹಸೀನಾ ಸರ್ಕಾರದ ವಿರುದ್ಧ ಫೇಸ್ಬುಕ್ನಲ್ಲಿ ಪೋಸ್ಟ್ ಹಂಚಿಕೊಂಡ ಕಾರಣಕ್ಕೆ ಫಹಾದ್ ಮೇಲೆ ಹಿಂದಿನ ದಿನ ದಾಳಿ ಮಾಡಲಾಗಿತ್ತು.</p><p>ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಈ ವಿದ್ಯಾರ್ಥಿಗಳನ್ನು ಬಿಯುಇಟಿ ಮತ್ತು ಬಿಸಿಎಲ್, ಕೂಡಲೇ ಹೊರಹಾಕಿದ್ದವು.</p><p>ಢಾಕಾ ನ್ಯಾಯಾಲಯ, ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗಲೇ (2021ರ ಡಿಸೆಂಬರ್ 8ರಂದು) 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಹೈಕೋರ್ಟ್, ಈ ಆದೇಶವನ್ನು ಎತ್ತಿಹಿಡಿದಿರುವುದಷ್ಟೇ ಅಲ್ಲದೆ, 'ಬಿಯುಇಟಿ ವಿದ್ಯಾರ್ಥಿಗಳಾಗಿದ್ದ ಇತರ ಐವರಿಗೂ ಮರಣದಂಡನೆ ವಿಧಿಸಿದೆ' ಎಂದು ಅಟಾರ್ನಿ ಜನರಲ್ ಎಂ. ಅಸಾದುಜ್ಜಮಾನ್ ಹೇಳಿದ್ದಾರೆ.</p>.ಬಲೂಚಿಸ್ತಾನದಲ್ಲಿ ಮತ್ತೊಂದು ದಾಳಿ: ಯೋಧರಿದ್ದ ಬಸ್ ಮೇಲೆ ಬಾಂಬ್, ಐವರು ಹುತಾತ್ಮ.33 ಉಗ್ರರ ಹತ್ಯೆ; 31 ಯೋಧರು ಹುತಾತ್ಮ, 354 ಒತ್ತೆಯಾಳುಗಳ ರಕ್ಷಣೆ: ಪಾಕ್.<p>ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಫಹಾದ್ ತಂದೆ, 'ತೀರ್ಪು ಸಮಾಧಾನ ತಂದಿದೆ. ಇದು ಶೀಘ್ರದಲ್ಲೇ ಜಾರಿಯಾಗಬೇಕು' ಎಂದಿದ್ದಾರೆ. ಫಹಾದ್ ಸಹೋದರ ಫೈಯಾಜ್, 'ಇಷ್ಟು ಶೀಘ್ರದಲ್ಲೇ ತೀರ್ಪು ಪ್ರಕಟವಾಗಲಿದೆ ಎಂದು ನಿರೀಕ್ಷಿಸಿರಲಿಲ್ಲ' ಎಂದು ಹೇಳಿದ್ದಾರೆ.</p><p>ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಿವಾದಿ ವಕೀಲ ಅಝಿಝುರ್ ರಹಮಾನ್ ದುಲು, ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.</p><p>ಶಿಕ್ಷೆಗೆ ಗುರಿಯಾಗಿರುವವರ ಪೈಕಿ, ಮುನ್ತಾಸಿರ್ ಅಲ್ ಜಮೀ ಎಂಬಾತ ಕಾಶಿಮುರ್ ಕೇಂದ್ರ ಕಾರಾಗೃಹದಿಂದ ಕಳೆದ ವರ್ಷ (2024ರಲ್ಲಿ) ಪರಾರಿಯಾಗಿದ್ದಾನೆ.</p><p>ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ 2024ರ ಆಗಸ್ಟ್ 5ರಂದು ದೇಶದಿಂದ ಪಲಾಯನ ಮಾಡಿದ್ದರು. ಮರುದಿನ (ಆಗಸ್ಟ್ 6ರಂದು) ಮುನ್ತಾಸಿರ್ ಸೇರಿದಂತೆ 86 ಕೈದಿಗಳು ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>