<p><strong>ನವದೆಹಲಿ/ಢಾಕಾ:</strong> ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಕಾರನ್ನು ತಡೆಯಲು ಯತ್ನಿಸಿದ್ದ, ಹಿಂದೂ ಧರ್ಮದ ರಿಪನ್ ಸಹಾ (30) ಎಂಬುವವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘಟನೆ ಸಂಬಂಧ, ಕಾರಿನ ಮಾಲೀಕ ಅಬುಲ್ ಹಶೀಮ್ ಅಲಿಯಾಸ್ ಸುಜನ್ (55) ಮತ್ತು ಚಾಲಕ ಕಮಲ್ ಹುಸೇನ್ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ರಾಜ್ಬರಿ ಜಿಲ್ಲಾ ಘಟಕದ ಮಾಜಿ ಖಜಾಂಚಿ ಮತ್ತು ಜುಬೊ ದಾಲ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾಗಿರುವ ಹಶೀಮ್ ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದ ಇತ್ತೀಚಿನ ಘಟನೆ ಇದಾಗಿದೆ.</p>.<p>‘ಗೋಲಾಂಡ ಮೋರ್ನ ಕರೀಂ ಫಿಲ್ಲಿಂಗ್ ಸ್ಟೇಷನ್ಗೆ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಬಂದ ಹಶೀಮ್ ಹಾಗೂ ಹುಸೇನ್ ಅವರು 5 ಸಾವಿರ ಟಾಕಾ (₹3,710) ಮೌಲ್ಯದ ಪೆಟ್ರೋಲ್ ಹಾಕಿಕೊಂಡಿದ್ದಾರೆ. </p><p>ಹಣ ಪಾವತಿಸದೆ ಪರಾರಿಯಾಗಲು ಯತ್ನಿಸಿದಾಗ ರಿಪನ್ ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ, ಕಾರನ್ನು ನಿಲ್ಲಿಸದೆ ರಿಪನ್ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು’ ಎಂದು ರಾಜ್ಬರಿ ಸದರ್ ಪೊಲೀಸ್ ಠಾಣೆಯ ಖೊಂಡಕರ್ ಜಿಯಾವುರ್ ರೆಹಮಾನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಢಾಕಾ:</strong> ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗಲು ಯತ್ನಿಸಿದ ಕಾರನ್ನು ತಡೆಯಲು ಯತ್ನಿಸಿದ್ದ, ಹಿಂದೂ ಧರ್ಮದ ರಿಪನ್ ಸಹಾ (30) ಎಂಬುವವರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಘಟನೆ ಸಂಬಂಧ, ಕಾರಿನ ಮಾಲೀಕ ಅಬುಲ್ ಹಶೀಮ್ ಅಲಿಯಾಸ್ ಸುಜನ್ (55) ಮತ್ತು ಚಾಲಕ ಕಮಲ್ ಹುಸೇನ್ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ.</p>.<p>ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ (ಬಿಎನ್ಪಿ) ರಾಜ್ಬರಿ ಜಿಲ್ಲಾ ಘಟಕದ ಮಾಜಿ ಖಜಾಂಚಿ ಮತ್ತು ಜುಬೊ ದಾಲ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾಗಿರುವ ಹಶೀಮ್ ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಿಂಸಾಚಾರದ ಇತ್ತೀಚಿನ ಘಟನೆ ಇದಾಗಿದೆ.</p>.<p>‘ಗೋಲಾಂಡ ಮೋರ್ನ ಕರೀಂ ಫಿಲ್ಲಿಂಗ್ ಸ್ಟೇಷನ್ಗೆ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಬಂದ ಹಶೀಮ್ ಹಾಗೂ ಹುಸೇನ್ ಅವರು 5 ಸಾವಿರ ಟಾಕಾ (₹3,710) ಮೌಲ್ಯದ ಪೆಟ್ರೋಲ್ ಹಾಕಿಕೊಂಡಿದ್ದಾರೆ. </p><p>ಹಣ ಪಾವತಿಸದೆ ಪರಾರಿಯಾಗಲು ಯತ್ನಿಸಿದಾಗ ರಿಪನ್ ಕಾರನ್ನು ತಡೆಯಲು ಮುಂದಾಗಿದ್ದಾರೆ. ಆದರೆ, ಕಾರನ್ನು ನಿಲ್ಲಿಸದೆ ರಿಪನ್ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು’ ಎಂದು ರಾಜ್ಬರಿ ಸದರ್ ಪೊಲೀಸ್ ಠಾಣೆಯ ಖೊಂಡಕರ್ ಜಿಯಾವುರ್ ರೆಹಮಾನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>