<p><strong>ಢಾಕಾ:</strong> ಉತ್ತರ ಬಾಂಗ್ಲಾದೇಶದ ದಿನಾಜ್ಪುರ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ನಾಯಕನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮ ವರದಿಯೊಂದು ಶುಕ್ರವಾರ ತಿಳಿಸಿದೆ.</p>.<p>ಢಾಕಾದಿಂದ ವಾಯವ್ಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ ದಿನಾಜ್ಪುರದ ಬಸುದೇಬ್ಪುರ ಗ್ರಾಮದ ನಿವಾಸಿ ಭಬೇಶ್ ಚಂದ್ರ ರಾಯ್(58) ಅವರ ಮೃತದೇಹ ಗುರುವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ಮತ್ತು ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ 'ದಿ ಡೈಲಿ ಸ್ಟಾರ್' ವರದಿ ಮಾಡಿದೆ.</p>.<p>ರಾಯ್ ಅವರ ಪತ್ನಿ ಶಾಂತನಾ ಅವರು ಡೈಲಿ ಸ್ಟಾರ್ಗೆ ನೀಡಿದ ಮಾಹಿತಿಯ ಪ್ರಕಾರ, ಗುರುವಾರ ಸಂಜೆ 4.30ರ ಸುಮಾರಿಗೆ ಅವರಿಗೆ ಫೋನ್ ಕರೆ ಬಂದಿತ್ತು. ಸುಮಾರು 30 ನಿಮಿಷಗಳ ನಂತರ, 2 ಬೈಕ್ಗಳಲ್ಲಿ ಬಂದ ನಾಲ್ವರು ಭಬೇಶ್ ಅವರನ್ನು ಮನೆಯಿಂದಲೇ ಅಪಹರಿಸಿದ್ದಾರೆ. ಬಳಿಕ ರಾಯ್ ಅವರನ್ನು ನರಬರಿ ಗ್ರಾಮಕ್ಕೆ ಕರೆದೊಯ್ದು, ಅಲ್ಲಿ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ.</p>.<p>ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕುಟುಂಬ ಸದಸ್ಯರು ದಿನಾಜ್ಪುರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು ಎಂದಿದ್ದಾರೆ.</p>.<p>ರಾಯ್ ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ತಿನ ಬೀರಲ್ ಘಟಕದ ಉಪಾಧ್ಯಕ್ಷರಾಗಿದ್ದರು. ಅಲ್ಲದೇ ಆ ಪ್ರದೇಶದ ಹಿಂದೂ ಸಮುದಾಯದ ಪ್ರಮುಖ ನಾಯಕರಾಗಿದ್ದರು.</p>.<p>ಪ್ರಕರಣ ದಾಖಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಬೀರಲ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಬ್ದುಸ್ ಸಬೂರ್ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. </p>.ಬಾಂಗ್ಲಾದೇಶ: ಸಹ-ವಿದ್ಯಾರ್ಥಿ ಹತ್ಯೆ ಮಾಡಿದ್ದ 20 ವಿದ್ಯಾರ್ಥಿಗಳಿಗೆ ಗಲ್ಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಉತ್ತರ ಬಾಂಗ್ಲಾದೇಶದ ದಿನಾಜ್ಪುರ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ನಾಯಕನನ್ನು ಅಪಹರಿಸಿ, ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮ ವರದಿಯೊಂದು ಶುಕ್ರವಾರ ತಿಳಿಸಿದೆ.</p>.<p>ಢಾಕಾದಿಂದ ವಾಯವ್ಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ ದಿನಾಜ್ಪುರದ ಬಸುದೇಬ್ಪುರ ಗ್ರಾಮದ ನಿವಾಸಿ ಭಬೇಶ್ ಚಂದ್ರ ರಾಯ್(58) ಅವರ ಮೃತದೇಹ ಗುರುವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ಮತ್ತು ಕುಟುಂಬ ಸದಸ್ಯರ ಹೇಳಿಕೆಯನ್ನು ಉಲ್ಲೇಖಿಸಿ 'ದಿ ಡೈಲಿ ಸ್ಟಾರ್' ವರದಿ ಮಾಡಿದೆ.</p>.<p>ರಾಯ್ ಅವರ ಪತ್ನಿ ಶಾಂತನಾ ಅವರು ಡೈಲಿ ಸ್ಟಾರ್ಗೆ ನೀಡಿದ ಮಾಹಿತಿಯ ಪ್ರಕಾರ, ಗುರುವಾರ ಸಂಜೆ 4.30ರ ಸುಮಾರಿಗೆ ಅವರಿಗೆ ಫೋನ್ ಕರೆ ಬಂದಿತ್ತು. ಸುಮಾರು 30 ನಿಮಿಷಗಳ ನಂತರ, 2 ಬೈಕ್ಗಳಲ್ಲಿ ಬಂದ ನಾಲ್ವರು ಭಬೇಶ್ ಅವರನ್ನು ಮನೆಯಿಂದಲೇ ಅಪಹರಿಸಿದ್ದಾರೆ. ಬಳಿಕ ರಾಯ್ ಅವರನ್ನು ನರಬರಿ ಗ್ರಾಮಕ್ಕೆ ಕರೆದೊಯ್ದು, ಅಲ್ಲಿ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ.</p>.<p>ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಕುಟುಂಬ ಸದಸ್ಯರು ದಿನಾಜ್ಪುರದ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು ಎಂದಿದ್ದಾರೆ.</p>.<p>ರಾಯ್ ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ತಿನ ಬೀರಲ್ ಘಟಕದ ಉಪಾಧ್ಯಕ್ಷರಾಗಿದ್ದರು. ಅಲ್ಲದೇ ಆ ಪ್ರದೇಶದ ಹಿಂದೂ ಸಮುದಾಯದ ಪ್ರಮುಖ ನಾಯಕರಾಗಿದ್ದರು.</p>.<p>ಪ್ರಕರಣ ದಾಖಲಿಸಲು ಸಿದ್ಧತೆ ನಡೆಯುತ್ತಿದೆ ಎಂದು ಬೀರಲ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಬ್ದುಸ್ ಸಬೂರ್ ಹೇಳಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. </p>.ಬಾಂಗ್ಲಾದೇಶ: ಸಹ-ವಿದ್ಯಾರ್ಥಿ ಹತ್ಯೆ ಮಾಡಿದ್ದ 20 ವಿದ್ಯಾರ್ಥಿಗಳಿಗೆ ಗಲ್ಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>