<p><strong>ಢಾಕಾ/ನವದೆಹಲಿ:</strong> ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರ ಶನಿವಾರ ಹೇಳಿದೆ.</p>.<p>ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ದೀಪು ಚಂದ್ರದಾಸ್ ಎಂಬ ವ್ಯಕ್ತಿಯನ್ನು ಗುಂಪೊಂದು ಹತ್ಯೆ ಮಾಡಿತ್ತು. ಮೈಮೆನ್ಶಿಂಘೋ ನಗರದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿತ್ತು.</p>.<p>ಪ್ರಕರಣ ಸಂಬಂಧ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಏಳು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಕಟಿಸಿದೆ. </p>.ಬಾಂಗ್ಲಾದೇಶ | ಧರ್ಮ ನಿಂದನೆ ಆರೋಪ: ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ.<h2>ಏನಿದು ಘಟನೆ</h2>.<p>ಧರ್ಮ ನಿಂದನೆ ಆರೋಪದ ಮೇಲೆ ಕಾರ್ಖಾನೆಯ ಆವರಣದಲ್ಲಿ ದೀಪು ಚಂದ್ರದಾಸ್ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಬಳಿಕ, ಆತನ ದೇಹವನ್ನು ಮರಕ್ಕೆ ನೇತುಹಾಕಿ, ಬೆಂಕಿ ಹಚ್ಚಿತ್ತು.</p>.<p>ಶವವನ್ನು ವಶಪಡಿಸಿಕೊಂಡು ಮರಣೊತ್ತರ ಪರೀಕ್ಷೆಗಾಗಿ ಮೈಮೆನ್ಶಿಂಘೋ ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿದ ಮಧ್ಯಂತರ ಸರ್ಕಾರ, ಹೊಸ ಬಾಂಗ್ಲಾದೇಶದಲ್ಲಿ ಇಂತಹ ಹಿಂಸಾಚಾರಕ್ಕೆ ಅವಕಾಶವಿಲ್ಲ. ಇಂತಹ ಘೋರ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಹೇಳಿತ್ತು.</p> .ಮೀಸಲಾತಿ ವಿರೋಧಿ ಹೋರಾಟದ ನಾಯಕ ಹಾದಿ ಹತ್ಯೆ: ಬಾಂಗ್ಲಾ ಮತ್ತೊಮ್ಮೆ ಉದ್ವಿಗ್ನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ/ನವದೆಹಲಿ:</strong> ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರ ಶನಿವಾರ ಹೇಳಿದೆ.</p>.<p>ಧರ್ಮನಿಂದನೆಯ ಆರೋಪದ ಮೇಲೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ದೀಪು ಚಂದ್ರದಾಸ್ ಎಂಬ ವ್ಯಕ್ತಿಯನ್ನು ಗುಂಪೊಂದು ಹತ್ಯೆ ಮಾಡಿತ್ತು. ಮೈಮೆನ್ಶಿಂಘೋ ನಗರದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿತ್ತು.</p>.<p>ಪ್ರಕರಣ ಸಂಬಂಧ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಏಳು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪ್ರಕಟಿಸಿದೆ. </p>.ಬಾಂಗ್ಲಾದೇಶ | ಧರ್ಮ ನಿಂದನೆ ಆರೋಪ: ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ.<h2>ಏನಿದು ಘಟನೆ</h2>.<p>ಧರ್ಮ ನಿಂದನೆ ಆರೋಪದ ಮೇಲೆ ಕಾರ್ಖಾನೆಯ ಆವರಣದಲ್ಲಿ ದೀಪು ಚಂದ್ರದಾಸ್ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಬಳಿಕ, ಆತನ ದೇಹವನ್ನು ಮರಕ್ಕೆ ನೇತುಹಾಕಿ, ಬೆಂಕಿ ಹಚ್ಚಿತ್ತು.</p>.<p>ಶವವನ್ನು ವಶಪಡಿಸಿಕೊಂಡು ಮರಣೊತ್ತರ ಪರೀಕ್ಷೆಗಾಗಿ ಮೈಮೆನ್ಶಿಂಘೋ ವೈದ್ಯಕೀಯ ಕಾಲೇಜು ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಯನ್ನು ಖಂಡಿಸಿದ ಮಧ್ಯಂತರ ಸರ್ಕಾರ, ಹೊಸ ಬಾಂಗ್ಲಾದೇಶದಲ್ಲಿ ಇಂತಹ ಹಿಂಸಾಚಾರಕ್ಕೆ ಅವಕಾಶವಿಲ್ಲ. ಇಂತಹ ಘೋರ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಹೇಳಿತ್ತು.</p> .ಮೀಸಲಾತಿ ವಿರೋಧಿ ಹೋರಾಟದ ನಾಯಕ ಹಾದಿ ಹತ್ಯೆ: ಬಾಂಗ್ಲಾ ಮತ್ತೊಮ್ಮೆ ಉದ್ವಿಗ್ನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>