<p><strong>ಢಾಕಾ (ಎಪಿ):</strong> ‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಹಾಗೂ ಅಧಿಕಾರಿಗಳು ಪತ್ರಕರ್ತರ ರಕ್ಷಣೆಗೆ ಧಾವಿಸಬೇಕು. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು’ ಎಂದು ಪತ್ರಕರ್ತರು, ಸಂಪಾದಕರು ಮತ್ತು ಮಾಧ್ಯಮ ಸಂಸ್ಥೆಗಳ ಮಾಲೀಕರು ಒತ್ತಾಯಿಸಿದ್ದಾರೆ.</p>.<p>ಸಂಪಾದಕರ ಪರಿಷತ್ತು ಮತ್ತು ಬಾಂಗ್ಲಾದೇಶ ಪತ್ರಿಕೆಗಳ ಮಾಲೀಕರ ಸಂಘ ಜಂಟಿಯಾಗಿ ಶನಿವಾರ ಆಯೋಜಿಸಿದ್ದ ಸಮ್ಮೇಳನದಲ್ಲಿ ಪತ್ರಕರ್ತರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ.</p>.<p>‘ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಮಾಧ್ಯಮಗಳನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ದೇಶದ ಪ್ರಮುಖ ಇಂಗ್ಲಿಷ್ ಪತ್ರಿಕೆ ‘ಡೈಲಿ ಸ್ಟಾರ್’ ಮತ್ತು ಬಂಗಾಳಿ ಪತ್ರಿಕೆ ‘ಪ್ರೋಥೋಮ್ ಅಲೊ’ ಮೇಲೆ ಕಿಡಿಗೇಡಿಗಳ ಗುಂಪು ನಡೆಸಿದ ದಾಳಿಯನ್ನು ತಡೆಯುವಲ್ಲಿ ಆಡಳಿತವು ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಮಾಧ್ಯಮಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಹತ್ತಿಕ್ಕುವ ಪ್ರಯತ್ನಗಳು ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತವೆ’ ಎಂದು ಸಂಪಾದಕರ ಪರಿಷತ್ತಿನ ಅಧ್ಯಕ್ಷ ನೂರುಲ್ ಕಬೀರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಎಪಿ):</strong> ‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಹಾಗೂ ಅಧಿಕಾರಿಗಳು ಪತ್ರಕರ್ತರ ರಕ್ಷಣೆಗೆ ಧಾವಿಸಬೇಕು. ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು’ ಎಂದು ಪತ್ರಕರ್ತರು, ಸಂಪಾದಕರು ಮತ್ತು ಮಾಧ್ಯಮ ಸಂಸ್ಥೆಗಳ ಮಾಲೀಕರು ಒತ್ತಾಯಿಸಿದ್ದಾರೆ.</p>.<p>ಸಂಪಾದಕರ ಪರಿಷತ್ತು ಮತ್ತು ಬಾಂಗ್ಲಾದೇಶ ಪತ್ರಿಕೆಗಳ ಮಾಲೀಕರ ಸಂಘ ಜಂಟಿಯಾಗಿ ಶನಿವಾರ ಆಯೋಜಿಸಿದ್ದ ಸಮ್ಮೇಳನದಲ್ಲಿ ಪತ್ರಕರ್ತರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ.</p>.<p>‘ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಮಾಧ್ಯಮಗಳನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ದೇಶದ ಪ್ರಮುಖ ಇಂಗ್ಲಿಷ್ ಪತ್ರಿಕೆ ‘ಡೈಲಿ ಸ್ಟಾರ್’ ಮತ್ತು ಬಂಗಾಳಿ ಪತ್ರಿಕೆ ‘ಪ್ರೋಥೋಮ್ ಅಲೊ’ ಮೇಲೆ ಕಿಡಿಗೇಡಿಗಳ ಗುಂಪು ನಡೆಸಿದ ದಾಳಿಯನ್ನು ತಡೆಯುವಲ್ಲಿ ಆಡಳಿತವು ವಿಫಲವಾಗಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಮಾಧ್ಯಮಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಹತ್ತಿಕ್ಕುವ ಪ್ರಯತ್ನಗಳು ಅಪಾಯಕಾರಿ ಮಾದರಿಯನ್ನು ಪ್ರತಿಬಿಂಬಿಸುತ್ತವೆ’ ಎಂದು ಸಂಪಾದಕರ ಪರಿಷತ್ತಿನ ಅಧ್ಯಕ್ಷ ನೂರುಲ್ ಕಬೀರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>