<p><strong>ಢಾಕಾ</strong>: ‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ವಿಫಲವಾಗಿದೆ’ ಎಂದು ಆರೋಪಿಸಿ ಇಲ್ಲಿನ ಅಲ್ಪಸಂಖ್ಯಾತ ಸಂಘಟನೆಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.</p>.<p>ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಬರ್ಬರ ಹತ್ಯೆಯಾದ ಕಾರಣಕ್ಕೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸಂಘಟನೆಗಳ ಮುಖಂಡರು ಢಾಕಾದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.</p>.<p class="title">‘ಅವರು (ಮುಹಮ್ಮದ್ ಯೂನಸ್) ಮಾನವೀಯ ಬಾಂಗ್ಲಾದೇಶ ನಿರ್ಮಾಣ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ವಾಸ್ತವದಲ್ಲಿ ಅಮಾನವೀಯ ಮುಖ್ಯ ಸಲಹೆಹಗಾರರಾಗಿದ್ದಾರೆ’ ಎಂದು ಅಲ್ಪಸಂಖ್ಯಾತ ಏಕತಾ ರಂಗದ ಜಂಟಿ ಸಂಯೋಜಕ ಮಹೀಂದ್ರ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="title">ಮತ್ತಿಬ್ಬರ ಬಂಧನ: ದಾಸ್ ಹತ್ಯೆಗೆ ಸಂಬಂಧಿಸಿದಂತೆ ಅಪರಾಧ ವಿರೋಧಿ ಕ್ಷಿಪ್ರ ಕಾರ್ಯಪಡೆಯು 10 ಮಂದಿ ಶಂಕಿತರನ್ನು ಬಂಧಿಸಿದ್ದು, ಸೋಮವಾರ ಮತ್ತಿಬ್ಬರನ್ನು ಬಂಧಿಸಿದೆ.</p>.<p class="title">ಗನ್ಮ್ಯಾನ್ ಭದ್ರತೆ: ಸಿಕ್ದರ್ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ, ಹೆಚ್ಚಿನ ಅಪಾಯ ಎದುರಿಸುತ್ತಿರುವ 20 ಮಂದಿಗೆ ಗನ್ಮ್ಯಾನ್ ಭದ್ರತೆ ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಇಲಾಖೆಯ ಸಲಹೆಗಾರ ಜಹಾಂಗೀರ್ ಆಲಮ್ ಚೌಧರಿ ತಿಳಿಸಿದ್ದಾರೆ.</p>.<p class="title">20 ಮಂದಿಯಲ್ಲಿ ಎನ್ಸಿಪಿ ಪಕ್ಷದ ಆರು ಮುಖಂಡರು, ಮೀಸಲಾತಿ ವಿರೋಧಿ ಚಳವಳಿಯ ಮುಂಚೂಣಿ ಹೋರಾಟಗಾರರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ‘ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಕಿರುಕುಳ ತಪ್ಪಿಸಲು ವಿಫಲವಾಗಿದೆ’ ಎಂದು ಆರೋಪಿಸಿ ಇಲ್ಲಿನ ಅಲ್ಪಸಂಖ್ಯಾತ ಸಂಘಟನೆಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.</p>.<p>ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿ ದೀಪು ಚಂದ್ರದಾಸ್ ಅವರ ಬರ್ಬರ ಹತ್ಯೆಯಾದ ಕಾರಣಕ್ಕೆ ಹಿಂದೂ ಹಾಗೂ ಇತರೆ ಅಲ್ಪಸಂಖ್ಯಾತರ ಸಂಘಟನೆಗಳ ಮುಖಂಡರು ಢಾಕಾದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.</p>.<p class="title">‘ಅವರು (ಮುಹಮ್ಮದ್ ಯೂನಸ್) ಮಾನವೀಯ ಬಾಂಗ್ಲಾದೇಶ ನಿರ್ಮಾಣ ಮಾಡುವುದಾಗಿ ಹೇಳಿಕೊಳ್ಳುತ್ತಾರೆ. ವಾಸ್ತವದಲ್ಲಿ ಅಮಾನವೀಯ ಮುಖ್ಯ ಸಲಹೆಹಗಾರರಾಗಿದ್ದಾರೆ’ ಎಂದು ಅಲ್ಪಸಂಖ್ಯಾತ ಏಕತಾ ರಂಗದ ಜಂಟಿ ಸಂಯೋಜಕ ಮಹೀಂದ್ರ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p class="title">ಮತ್ತಿಬ್ಬರ ಬಂಧನ: ದಾಸ್ ಹತ್ಯೆಗೆ ಸಂಬಂಧಿಸಿದಂತೆ ಅಪರಾಧ ವಿರೋಧಿ ಕ್ಷಿಪ್ರ ಕಾರ್ಯಪಡೆಯು 10 ಮಂದಿ ಶಂಕಿತರನ್ನು ಬಂಧಿಸಿದ್ದು, ಸೋಮವಾರ ಮತ್ತಿಬ್ಬರನ್ನು ಬಂಧಿಸಿದೆ.</p>.<p class="title">ಗನ್ಮ್ಯಾನ್ ಭದ್ರತೆ: ಸಿಕ್ದರ್ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ, ಹೆಚ್ಚಿನ ಅಪಾಯ ಎದುರಿಸುತ್ತಿರುವ 20 ಮಂದಿಗೆ ಗನ್ಮ್ಯಾನ್ ಭದ್ರತೆ ಒದಗಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಇಲಾಖೆಯ ಸಲಹೆಗಾರ ಜಹಾಂಗೀರ್ ಆಲಮ್ ಚೌಧರಿ ತಿಳಿಸಿದ್ದಾರೆ.</p>.<p class="title">20 ಮಂದಿಯಲ್ಲಿ ಎನ್ಸಿಪಿ ಪಕ್ಷದ ಆರು ಮುಖಂಡರು, ಮೀಸಲಾತಿ ವಿರೋಧಿ ಚಳವಳಿಯ ಮುಂಚೂಣಿ ಹೋರಾಟಗಾರರು ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>