<p><strong>ಢಾಕಾ: ‘</strong>ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಅವಾಮಿ ಲೀಗ್ ಮತ್ತು ಶೇಖ್ ಹಸೀನಾ ಇಂದಿನ ಬಾಂಗ್ಲಾದಲ್ಲಿ ಇಲ್ಲ. ಭಾರತವು ಇದನ್ನು ಅರ್ಥ ಮಾಡಿ ಕೊಳ್ಳ ಬೇಕು. ಪರಸ್ಪರ ಲಾಭಕ್ಕಾಗಿ ಹೊಸ ಹೆಜ್ಜೆಗಳೊಂದಿಗೆ, ಹೊಸ ಸಂಬಂಧ<br>ವನ್ನು ಆರಂಭಿಸಲು ನಾವು ತಯಾರಿ ದ್ದೇವೆ’ ಎಂದು ಬಿಎನ್ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರ ಸಲಹೆ ಗಾರ ಹುಮಾಯೂನ್ ಕಬೀರ್ ಹೇಳಿದರು.</p><p>‘ಪಿಟಿಐ’ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಬಿಎನ್ಪಿಗೆ ಸಿಕ್ಕ ಅಭೂತಪೂರ್ವ ಗೆಲುವನ್ನು ಭಾರತ ಮನಗಾಣಬೇಕು. ದೇಶದ ಬದಲಾವಣೆಯನ್ನು ಸ್ವೀಕರಿಸಿ ಅದನ್ನು ಒಪ್ಪಿಕೊಳ್ಳುವುದು ಭಾರತದ ಹೊಣೆಗಾರಿಕೆ’ ಎಂದರು.</p><p>ಹಸೀನಾ ಅವರನ್ನು ಬಾಂಗ್ಲಾಕ್ಕೆ ವಾಪಸು ಕಳುಹಿಸಿಕೊಡುವ ವಿಚಾರದ ಕುರಿತು ಪ್ರಕ್ರಿಯಿಸಿ, ‘ನಮ್ಮ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುವಂಥ ಚಟುವಟಿಕೆಗಳಿಗೆ ಭಾರತವು ತನ್ನ ನೆಲದಲ್ಲಿ ಅವಕಾಶ ನೀಡಬಾರದು. ಇದು ಸಾಧ್ಯವಾಗದ ಹೊರತು, ಭಾರತ<br>ದೊಂದಿಗೆ ಸಹಜವಾದ ರಾಜತಾಂತ್ರಿಕ ಸಹಕಾರ ಅಸಾಧ್ಯ’ ಎಂದು ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ತಾರಿಕ್ ಅವರನ್ನು ಭಾರತಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ತಾರಿಕ್ ಅವರು ಮೊದಲು ದೇಶದ ಸಮೃದ್ಧಿ, ಆರ್ಥಿಕ ಭದ್ರತೆಗೆ ಕಡೆಗೆ ಒತ್ತು ನೀಡಲಿದ್ದಾರೆ. ಈ ಎಲ್ಲವೂ ಒಂದು ಹಂತಕ್ಕೆ ಬಂದ ನಂತರವೇ ಅವರು ವಿದೇಶ ಭೇಟಿ ಆರಂಭಿಸಲಿದ್ದಾರೆ’ ಎಂದರು.</p>.<p><strong>ನಾಳೆ ಪ್ರಮಾಣ ವಚನ: ಓಂ ಬಿರ್ಲಾ ಭಾಗಿ</strong></p><p>ಬಿಎನ್ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಫೆ.17ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಸಮಾರಂಭವು ಸಂಪ್ರದಾಯದಂತೆ ಅಧ್ಯಕ್ಷರ ಭವನದಲ್ಲಿ ನಡೆಯದೆ, ಸಂಸತ್ ಭವನದ ಆವರಣದಲ್ಲಿ ನಡೆಯಲಿದೆ.</p><p>ಇದರ ಜೊತೆಯಲ್ಲಿ ತಾರಿಕ್ ಅವರ ನೂತನ ಸಂಪುಟದ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷರೇ ಇವರಿಗೂ ಪ್ರಮಾಣ ವಚನ ಬೋಧಿಸಲಿದ್ದಾರೆ. </p><p>‘ಸಂಪ್ರದಾಯದಂತೆ ಹಿಂದಿನ ಸರ್ಕಾರದ<br>ಅವಧಿಯಲ್ಲಿದ್ದ ಸ್ಪೀಕರ್ ಅಥವಾ ಉಪ ಸ್ಪೀಕರ್ ಸಂಸದರಿಗೆ ಪ್ರಮಾಣ ವಚನ ಬೋಧಿಸಬೇಕು. ಆದರೆ, ಸ್ಪೀಕರ್ ಅವರು ರಾಜೀನಾಮೆ ನೀಡಿದ್ದರಿಂದ ಮುಖ್ಯ ಚುನಾವಣಾ ಆಯುಕ್ತರು ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p><p><strong>ಓಂ ಬಿರ್ಲಾ ಭಾಗಿ:</strong> ಸಮಾರಂಭದಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಢಾಕಾಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ಪ್ರಧಾನಿ ಮೋದಿ ಅವರಿಗೆ ಸಮಾರಂಭ ಆಮಂತ್ರಣ ನೀಡಲಾಗಿತ್ತು. ಆದರೆ, ಅವರು ಭಾಗವಹಿಸುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ: ‘</strong>ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಅವಾಮಿ ಲೀಗ್ ಮತ್ತು ಶೇಖ್ ಹಸೀನಾ ಇಂದಿನ ಬಾಂಗ್ಲಾದಲ್ಲಿ ಇಲ್ಲ. ಭಾರತವು ಇದನ್ನು ಅರ್ಥ ಮಾಡಿ ಕೊಳ್ಳ ಬೇಕು. ಪರಸ್ಪರ ಲಾಭಕ್ಕಾಗಿ ಹೊಸ ಹೆಜ್ಜೆಗಳೊಂದಿಗೆ, ಹೊಸ ಸಂಬಂಧ<br>ವನ್ನು ಆರಂಭಿಸಲು ನಾವು ತಯಾರಿ ದ್ದೇವೆ’ ಎಂದು ಬಿಎನ್ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರ ಸಲಹೆ ಗಾರ ಹುಮಾಯೂನ್ ಕಬೀರ್ ಹೇಳಿದರು.</p><p>‘ಪಿಟಿಐ’ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಬಿಎನ್ಪಿಗೆ ಸಿಕ್ಕ ಅಭೂತಪೂರ್ವ ಗೆಲುವನ್ನು ಭಾರತ ಮನಗಾಣಬೇಕು. ದೇಶದ ಬದಲಾವಣೆಯನ್ನು ಸ್ವೀಕರಿಸಿ ಅದನ್ನು ಒಪ್ಪಿಕೊಳ್ಳುವುದು ಭಾರತದ ಹೊಣೆಗಾರಿಕೆ’ ಎಂದರು.</p><p>ಹಸೀನಾ ಅವರನ್ನು ಬಾಂಗ್ಲಾಕ್ಕೆ ವಾಪಸು ಕಳುಹಿಸಿಕೊಡುವ ವಿಚಾರದ ಕುರಿತು ಪ್ರಕ್ರಿಯಿಸಿ, ‘ನಮ್ಮ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುವಂಥ ಚಟುವಟಿಕೆಗಳಿಗೆ ಭಾರತವು ತನ್ನ ನೆಲದಲ್ಲಿ ಅವಕಾಶ ನೀಡಬಾರದು. ಇದು ಸಾಧ್ಯವಾಗದ ಹೊರತು, ಭಾರತ<br>ದೊಂದಿಗೆ ಸಹಜವಾದ ರಾಜತಾಂತ್ರಿಕ ಸಹಕಾರ ಅಸಾಧ್ಯ’ ಎಂದು ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ತಾರಿಕ್ ಅವರನ್ನು ಭಾರತಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ತಾರಿಕ್ ಅವರು ಮೊದಲು ದೇಶದ ಸಮೃದ್ಧಿ, ಆರ್ಥಿಕ ಭದ್ರತೆಗೆ ಕಡೆಗೆ ಒತ್ತು ನೀಡಲಿದ್ದಾರೆ. ಈ ಎಲ್ಲವೂ ಒಂದು ಹಂತಕ್ಕೆ ಬಂದ ನಂತರವೇ ಅವರು ವಿದೇಶ ಭೇಟಿ ಆರಂಭಿಸಲಿದ್ದಾರೆ’ ಎಂದರು.</p>.<p><strong>ನಾಳೆ ಪ್ರಮಾಣ ವಚನ: ಓಂ ಬಿರ್ಲಾ ಭಾಗಿ</strong></p><p>ಬಿಎನ್ಪಿ ಮುಖ್ಯಸ್ಥ ತಾರಿಕ್ ರೆಹಮಾನ್ ಅವರು ಫೆ.17ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಸಮಾರಂಭವು ಸಂಪ್ರದಾಯದಂತೆ ಅಧ್ಯಕ್ಷರ ಭವನದಲ್ಲಿ ನಡೆಯದೆ, ಸಂಸತ್ ಭವನದ ಆವರಣದಲ್ಲಿ ನಡೆಯಲಿದೆ.</p><p>ಇದರ ಜೊತೆಯಲ್ಲಿ ತಾರಿಕ್ ಅವರ ನೂತನ ಸಂಪುಟದ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಧ್ಯಕ್ಷರೇ ಇವರಿಗೂ ಪ್ರಮಾಣ ವಚನ ಬೋಧಿಸಲಿದ್ದಾರೆ. </p><p>‘ಸಂಪ್ರದಾಯದಂತೆ ಹಿಂದಿನ ಸರ್ಕಾರದ<br>ಅವಧಿಯಲ್ಲಿದ್ದ ಸ್ಪೀಕರ್ ಅಥವಾ ಉಪ ಸ್ಪೀಕರ್ ಸಂಸದರಿಗೆ ಪ್ರಮಾಣ ವಚನ ಬೋಧಿಸಬೇಕು. ಆದರೆ, ಸ್ಪೀಕರ್ ಅವರು ರಾಜೀನಾಮೆ ನೀಡಿದ್ದರಿಂದ ಮುಖ್ಯ ಚುನಾವಣಾ ಆಯುಕ್ತರು ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ’ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p><p><strong>ಓಂ ಬಿರ್ಲಾ ಭಾಗಿ:</strong> ಸಮಾರಂಭದಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಢಾಕಾಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ಪ್ರಧಾನಿ ಮೋದಿ ಅವರಿಗೆ ಸಮಾರಂಭ ಆಮಂತ್ರಣ ನೀಡಲಾಗಿತ್ತು. ಆದರೆ, ಅವರು ಭಾಗವಹಿಸುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>