<p><strong>ಢಾಕಾ</strong>: ‘ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಯಾವುದೇ ಪರಿಸ್ಥಿತಿಯಲ್ಲೂ ಅನುಮತಿ ನೀಡುವುದಿಲ್ಲ’ ಎಂದು ಬಾಂಗ್ಲಾದೇಶ ಹೇಳಿದೆ.</p>.<p>‘ದೇಶದಲ್ಲಿರುವ ಎಲ್ಲ ಸಮುದಾಯದವರ ಹಕ್ಕುಗಳನ್ನು ಕಾಪಾಡಲು ಹಾಗೂ ಪೂಜಾ ಸ್ಥಳಗಳನ್ನು ರಕ್ಷಿಸಲು ಬದ್ಧ’ ಎಂದು ಇದೇ ಸಂದರ್ಭ ಪುನರುಚ್ಚರಿಸಿದೆ.</p>.<p>ಢಾಕಾದಲ್ಲಿ ದುರ್ಗಾ ದೇವಾಲಯವನ್ನು ಧ್ವಂಸಗೊಳಿಸಿದ ಘಟನೆಯನ್ನು ಭಾರತವು ಖಂಡಿಸಿದ ಒಂದು ದಿನದ ನಂತರ, ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಈ ರೀತಿ ಪ್ರತಿಕ್ರಿಯೆ ನೀಡಿದೆ. ಹಿಂದೂಗಳು ಮತ್ತು ಅವರ ಧಾರ್ಮಿಕ ಸಂಸ್ಥೆಗಳನ್ನು ರಕ್ಷಿಸುವುದಾಗಿಯೂ ಹೇಳಿದೆ.</p>.<p>ಢಾಕಾದ ಖಿಲ್ಖೆತ್ ಪ್ರದೇಶದಲ್ಲಿದ್ದ ದೇಗುಲವನ್ನು ಬಾಂಗ್ಲಾದ ರೈಲ್ವೆ ಒಡೆತನದ ಭೂಮಿಯಲ್ಲಿ ನಿರ್ಮಿಸಲಾಗಿತ್ತು ಎಂದು ಸಚಿವಾಲಯ ಹೇಳಿಕೊಂಡಿದೆ.</p>.<p>ಸಾರ್ವಜನಿಕ ಭೂಮಿಯನ್ನು ವಾಪಸ್ ಪಡೆಯಲು ಅಗತ್ಯವಿರುವ ಸೂಕ್ತ ಪ್ರಕ್ರಿಯೆ ನಡೆಸಿದ ನಂತರವೇ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಎಸ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ದೇಗುಲವನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿತ್ತು. ಸಂಘಟಕರಿಗೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ತಾತ್ಕಾಲಿಕ ವ್ಯವಸ್ಥೆಯನ್ನೇ ಶಾಶ್ವತವಾಗಿಸಲು ಯತ್ನಿಸಿದರು. ಜೂನ್ 26ರಂದು ರೈಲ್ವೆಯು, ಖಿಲ್ಖೆತ್ ಪ್ರದೇಶದ ರೈಲು ಹಳಿಯ ಎರಡೂ ಬದಿಗಳಲ್ಲಿದ್ದ ಎಲ್ಲ ಒತ್ತುವರಿಯನ್ನು ತೆರವುಗೊಳಿಸಿದೆ ಎಂದು ಹೇಳಿದೆ.</p>.<p><strong>ಸರ್ಕಾರ ಭದ್ರತೆ ಒದಗಿಸಲಿ: ಜೈಸ್ವಾಲ್ </strong></p><p>‘ಢಾಕಾದ ಖಿಲ್ಖೆತ್ನಲ್ಲಿರುವ ದುರ್ಗಾ ದೇಗುಲವನ್ನು ಕೆಡವಲು ಉಗ್ರವಾದಿಗಳು ಹುಯಿಲೆಬ್ಬಿಸಿದ್ದಾರೆ. ಮಧ್ಯಂತರ ಸರ್ಕಾರವು ದೇಗುಲಕ್ಕೆ ಭದ್ರತೆ ಒದಗಿಸುವ ಬದಲು ಇದನ್ನು ಸರ್ಕಾರಿ ಭೂಮಿಯ ಅತಿಕ್ರಮಣ ಎಂದು ಬಿಂಬಿಸುತ್ತಿದೆ’ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. </p><p>‘ಹಿಂದೂಗಳು ಅವರ ಆಸ್ತಿ ಹಾಗೂ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವುದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ‘ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಯಾವುದೇ ಪರಿಸ್ಥಿತಿಯಲ್ಲೂ ಅನುಮತಿ ನೀಡುವುದಿಲ್ಲ’ ಎಂದು ಬಾಂಗ್ಲಾದೇಶ ಹೇಳಿದೆ.</p>.<p>‘ದೇಶದಲ್ಲಿರುವ ಎಲ್ಲ ಸಮುದಾಯದವರ ಹಕ್ಕುಗಳನ್ನು ಕಾಪಾಡಲು ಹಾಗೂ ಪೂಜಾ ಸ್ಥಳಗಳನ್ನು ರಕ್ಷಿಸಲು ಬದ್ಧ’ ಎಂದು ಇದೇ ಸಂದರ್ಭ ಪುನರುಚ್ಚರಿಸಿದೆ.</p>.<p>ಢಾಕಾದಲ್ಲಿ ದುರ್ಗಾ ದೇವಾಲಯವನ್ನು ಧ್ವಂಸಗೊಳಿಸಿದ ಘಟನೆಯನ್ನು ಭಾರತವು ಖಂಡಿಸಿದ ಒಂದು ದಿನದ ನಂತರ, ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಈ ರೀತಿ ಪ್ರತಿಕ್ರಿಯೆ ನೀಡಿದೆ. ಹಿಂದೂಗಳು ಮತ್ತು ಅವರ ಧಾರ್ಮಿಕ ಸಂಸ್ಥೆಗಳನ್ನು ರಕ್ಷಿಸುವುದಾಗಿಯೂ ಹೇಳಿದೆ.</p>.<p>ಢಾಕಾದ ಖಿಲ್ಖೆತ್ ಪ್ರದೇಶದಲ್ಲಿದ್ದ ದೇಗುಲವನ್ನು ಬಾಂಗ್ಲಾದ ರೈಲ್ವೆ ಒಡೆತನದ ಭೂಮಿಯಲ್ಲಿ ನಿರ್ಮಿಸಲಾಗಿತ್ತು ಎಂದು ಸಚಿವಾಲಯ ಹೇಳಿಕೊಂಡಿದೆ.</p>.<p>ಸಾರ್ವಜನಿಕ ಭೂಮಿಯನ್ನು ವಾಪಸ್ ಪಡೆಯಲು ಅಗತ್ಯವಿರುವ ಸೂಕ್ತ ಪ್ರಕ್ರಿಯೆ ನಡೆಸಿದ ನಂತರವೇ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಎಸ್ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>ದೇಗುಲವನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿತ್ತು. ಸಂಘಟಕರಿಗೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ತಾತ್ಕಾಲಿಕ ವ್ಯವಸ್ಥೆಯನ್ನೇ ಶಾಶ್ವತವಾಗಿಸಲು ಯತ್ನಿಸಿದರು. ಜೂನ್ 26ರಂದು ರೈಲ್ವೆಯು, ಖಿಲ್ಖೆತ್ ಪ್ರದೇಶದ ರೈಲು ಹಳಿಯ ಎರಡೂ ಬದಿಗಳಲ್ಲಿದ್ದ ಎಲ್ಲ ಒತ್ತುವರಿಯನ್ನು ತೆರವುಗೊಳಿಸಿದೆ ಎಂದು ಹೇಳಿದೆ.</p>.<p><strong>ಸರ್ಕಾರ ಭದ್ರತೆ ಒದಗಿಸಲಿ: ಜೈಸ್ವಾಲ್ </strong></p><p>‘ಢಾಕಾದ ಖಿಲ್ಖೆತ್ನಲ್ಲಿರುವ ದುರ್ಗಾ ದೇಗುಲವನ್ನು ಕೆಡವಲು ಉಗ್ರವಾದಿಗಳು ಹುಯಿಲೆಬ್ಬಿಸಿದ್ದಾರೆ. ಮಧ್ಯಂತರ ಸರ್ಕಾರವು ದೇಗುಲಕ್ಕೆ ಭದ್ರತೆ ಒದಗಿಸುವ ಬದಲು ಇದನ್ನು ಸರ್ಕಾರಿ ಭೂಮಿಯ ಅತಿಕ್ರಮಣ ಎಂದು ಬಿಂಬಿಸುತ್ತಿದೆ’ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. </p><p>‘ಹಿಂದೂಗಳು ಅವರ ಆಸ್ತಿ ಹಾಗೂ ಧಾರ್ಮಿಕ ಸ್ಥಳಗಳನ್ನು ರಕ್ಷಿಸುವುದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಜವಾಬ್ದಾರಿಯಾಗಿದೆ’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>