<p><strong>ಢಾಕಾ</strong>: ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಕೈಗೊಂಡಿರುವ ರಾಜಕೀಯ ನಿರ್ಣಯಕ್ಕೆ ಸಂಬಂಧಿಸಿದಂತೆ ಜನಾಭಿಪ್ರಾಯ ಸಂಗ್ರಹಿಸಲು ಬಾಂಗ್ಲಾದ ಅಧ್ಯಕ್ಷರು ಅನುಮತಿ ನೀಡಿದ್ದು, ಈ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಇದನ್ನು ಅಸಂವಿಧಾನಿಕ ನಡೆ ಎಂದು ಬಾಂಗ್ಲಾದ ಕಾನೂನು ತಜ್ಞರು ಆಕ್ಷೇಪಿಸಿದ್ದಾರೆ.</p>.<p>ಸಂವಿಧಾನಕ್ಕೆ ತಿದ್ದುಪಡಿ ತರುವ ವಿಚಾರವೂ ಸೇರಿದಂತೆ 90 ಪ್ರಸ್ತಾವಗಳನ್ನು ಒಳಗೊಂಡಿರುವ ರಾಜಕೀಯ ನಿರ್ಣಯವನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ನೇತೃತ್ವದ ಆಯೋಗವು ರಚಿಸಿದೆ. </p>.<p class="title">2026ರ ಫೆಬ್ರವರಿಯಲ್ಲಿ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅದೇ ಸಮಯದಲ್ಲಿ ನಿರ್ಣಯ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ಉದ್ದೇಶಿಸಿದೆ. ಸರ್ಕಾರದ ಈ ಪ್ರಸ್ತಾವಕ್ಕೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಗುರುವಾರ ರಾತ್ರೋರಾತ್ರಿ ಅನುಮೋದನೆ ನೀಡಿ, ಸುಗ್ರೀವಾಜ್ಞೆ ಹೊರಡಿಸಿದ್ದಾರೆ.</p>.<p class="title">ಆದರೆ, ‘ಸಂವಿಧಾನದ ಯಾವುದೇ ನಿಬಂಧನೆಯನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ತರಲು ಜನಾಭಿಪ್ರಾಯ ಸಂಗ್ರಹಿಸುವ ವಿಧಾನಕ್ಕೆ ಸಂವಿಧಾನ ಆಸ್ಪದ ನೀಡುವುದಿಲ್ಲ. ಸಂವಿಧಾನದ 93ನೇ ವಿಧಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ. ಮಿಲಿಟರಿ ಆಡಳಿತವಿದ್ದು, ಸಂವಿಧಾನ ರದ್ದಾಗಿದ್ದರೆ ಮಾತ್ರ ಜನಾಭಿಪ್ರಾಯ ಸಂಗ್ರಹಣೆಗೆ ಅವಕಾಶವಿರುತ್ತದೆ’ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಜತೆಗೆ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಕೈಗೊಂಡಿರುವ ರಾಜಕೀಯ ನಿರ್ಣಯಕ್ಕೆ ಸಂಬಂಧಿಸಿದಂತೆ ಜನಾಭಿಪ್ರಾಯ ಸಂಗ್ರಹಿಸಲು ಬಾಂಗ್ಲಾದ ಅಧ್ಯಕ್ಷರು ಅನುಮತಿ ನೀಡಿದ್ದು, ಈ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಿದ್ದಾರೆ. ಇದನ್ನು ಅಸಂವಿಧಾನಿಕ ನಡೆ ಎಂದು ಬಾಂಗ್ಲಾದ ಕಾನೂನು ತಜ್ಞರು ಆಕ್ಷೇಪಿಸಿದ್ದಾರೆ.</p>.<p>ಸಂವಿಧಾನಕ್ಕೆ ತಿದ್ದುಪಡಿ ತರುವ ವಿಚಾರವೂ ಸೇರಿದಂತೆ 90 ಪ್ರಸ್ತಾವಗಳನ್ನು ಒಳಗೊಂಡಿರುವ ರಾಜಕೀಯ ನಿರ್ಣಯವನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ನೇತೃತ್ವದ ಆಯೋಗವು ರಚಿಸಿದೆ. </p>.<p class="title">2026ರ ಫೆಬ್ರವರಿಯಲ್ಲಿ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅದೇ ಸಮಯದಲ್ಲಿ ನಿರ್ಣಯ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸರ್ಕಾರ ಉದ್ದೇಶಿಸಿದೆ. ಸರ್ಕಾರದ ಈ ಪ್ರಸ್ತಾವಕ್ಕೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಗುರುವಾರ ರಾತ್ರೋರಾತ್ರಿ ಅನುಮೋದನೆ ನೀಡಿ, ಸುಗ್ರೀವಾಜ್ಞೆ ಹೊರಡಿಸಿದ್ದಾರೆ.</p>.<p class="title">ಆದರೆ, ‘ಸಂವಿಧಾನದ ಯಾವುದೇ ನಿಬಂಧನೆಯನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ತರಲು ಜನಾಭಿಪ್ರಾಯ ಸಂಗ್ರಹಿಸುವ ವಿಧಾನಕ್ಕೆ ಸಂವಿಧಾನ ಆಸ್ಪದ ನೀಡುವುದಿಲ್ಲ. ಸಂವಿಧಾನದ 93ನೇ ವಿಧಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ. ಮಿಲಿಟರಿ ಆಡಳಿತವಿದ್ದು, ಸಂವಿಧಾನ ರದ್ದಾಗಿದ್ದರೆ ಮಾತ್ರ ಜನಾಭಿಪ್ರಾಯ ಸಂಗ್ರಹಣೆಗೆ ಅವಕಾಶವಿರುತ್ತದೆ’ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಜತೆಗೆ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>