<p><strong>ಢಾಕಾ</strong>: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವುದನ್ನು ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ವಿದ್ಯಾರ್ಥಿ ಸಂಘಟನೆಯು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.</p>.<p>ಮೀಸಲಾತಿಯನ್ನು ಕಡಿತಗೊಳಿಸಿ ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ಭಾನುವಾರ ಆದೇಶಿಸಿದ ಬೆನ್ನಲ್ಲೇ ಪ್ರತಿಭಟನಾ ನಿರತ ಸಂಘಟನೆಯು ಸೋಮವಾರ ಈ ನಿರ್ಧಾರವನ್ನು ಪ್ರಕಟಿಸಿದೆ. </p>.<p>‘ನಾವು 48 ಗಂಟೆಗಳ ಕಾಲ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದೇವೆ. ಈ ಸಮಯದಲ್ಲಿ ಸರ್ಕಾರವು ಕರ್ಫ್ಯೂವನ್ನು ಹಿಂತೆಗೆದುಕೊಳ್ಳಬೇಕು. ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸಬೇಕು ಮತ್ತು ವಿದ್ಯಾರ್ಥಿಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು’ ಎಂದು ಸಂಘಟನೆಯ ಪ್ರಮುಖ ನಾಯಕ ನಹೀದ್ ಇಸ್ಲಾಂ ಹೇಳಿದರು. </p>.<p>ಇಂಟರ್ನೆಟ್ ಮರುಸ್ಥಾಪನೆ ಇಲ್ಲ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಸುಧಾರಿಸಿದ್ದು ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಆದರೂ, ಇಂಟರ್ನೆಟ್ ಸೇವೆ ಮತ್ತು ಮೊಬೈಲ್ ಡೇಟಾವನ್ನು ಸರ್ಕಾರ ಪುನರಾರಂಭಿಸಿಲ್ಲ. </p>.<p>ಸರ್ಕಾರವು ಸೋಮವಾರ ದೇಶದಾದ್ಯಂತ ಸಾರ್ವಜನಿಕ ರಜೆ ಘೋಷಿಸಿತ್ತು. ಅಗತ್ಯ ವಸ್ತುಗಳ ಮಾರಾಟ ಮತ್ತು ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿತ್ತು. ಈ ವೇಳೆ ಕರ್ಫ್ಯೂ ಸಹ ಮುಂದುವರಿದಿತ್ತು. </p>.<p>ಸರ್ಕಾರಿ ಹುದ್ದೆಗಳ ಭರ್ತಿ ವೇಳೆ, 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾ ಸಿಬ್ಬಂದಿಯ ಮಕ್ಕಳು ಮತ್ತು ಸಂಬಂಧಿಕರಿಗೆ ನೀಡಲಾಗಿದ್ದ ಶೇ30ರಷ್ಟು ಕೋಟಾವನ್ನು ಕೊನೆಗೊಳಿಸಬೇಕೆಂದು ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು. </p>.<p>ಈ ವೇಳೆ ನಡೆದ ಹಿಂಸಾಚಾರದಲ್ಲಿ ಈವರೆಗೆ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ದಿನ ಪತ್ರಿಕೆಗಳು ವರದಿ ಮಾಡಿವೆ. ಆದರೆ, ಸತ್ತವರ ಸಂಖ್ಯೆ ಎಷ್ಟು ಎಂಬುದನ್ನು ಸರ್ಕಾರ ಇದುವರೆಗೂ ಬಹಿರಂಗಪಡಿಸಿಲ್ಲ.</p>.<p>ಪರಿಸ್ಥಿತಿ ಸುಧಾರಿಸಿದ್ದರೂ ಇಂಟರ್ನೆಟ್ ಸೇವೆ ಪುನರಾರಂಭವಿಲ್ಲ ಕರ್ಫ್ಯೂ ಹಿಂಪಡೆಯಲು ವಿದ್ಯಾರ್ಥಿ ಸಂಘಟನೆ ಆಗ್ರಹ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವುದನ್ನು ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ವಿದ್ಯಾರ್ಥಿ ಸಂಘಟನೆಯು 48 ಗಂಟೆಗಳ ಕಾಲ ಸ್ಥಗಿತಗೊಳಿಸಿದೆ.</p>.<p>ಮೀಸಲಾತಿಯನ್ನು ಕಡಿತಗೊಳಿಸಿ ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ಭಾನುವಾರ ಆದೇಶಿಸಿದ ಬೆನ್ನಲ್ಲೇ ಪ್ರತಿಭಟನಾ ನಿರತ ಸಂಘಟನೆಯು ಸೋಮವಾರ ಈ ನಿರ್ಧಾರವನ್ನು ಪ್ರಕಟಿಸಿದೆ. </p>.<p>‘ನಾವು 48 ಗಂಟೆಗಳ ಕಾಲ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದೇವೆ. ಈ ಸಮಯದಲ್ಲಿ ಸರ್ಕಾರವು ಕರ್ಫ್ಯೂವನ್ನು ಹಿಂತೆಗೆದುಕೊಳ್ಳಬೇಕು. ಇಂಟರ್ನೆಟ್ ಸೇವೆಯನ್ನು ಮರುಸ್ಥಾಪಿಸಬೇಕು ಮತ್ತು ವಿದ್ಯಾರ್ಥಿಗಳನ್ನು ಗುರಿಯಾಗಿಸುವುದನ್ನು ನಿಲ್ಲಿಸಬೇಕು’ ಎಂದು ಸಂಘಟನೆಯ ಪ್ರಮುಖ ನಾಯಕ ನಹೀದ್ ಇಸ್ಲಾಂ ಹೇಳಿದರು. </p>.<p>ಇಂಟರ್ನೆಟ್ ಮರುಸ್ಥಾಪನೆ ಇಲ್ಲ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಸುಧಾರಿಸಿದ್ದು ಶಾಂತಿಯುತ ವಾತಾವರಣ ನಿರ್ಮಾಣವಾಗಿದೆ. ಆದರೂ, ಇಂಟರ್ನೆಟ್ ಸೇವೆ ಮತ್ತು ಮೊಬೈಲ್ ಡೇಟಾವನ್ನು ಸರ್ಕಾರ ಪುನರಾರಂಭಿಸಿಲ್ಲ. </p>.<p>ಸರ್ಕಾರವು ಸೋಮವಾರ ದೇಶದಾದ್ಯಂತ ಸಾರ್ವಜನಿಕ ರಜೆ ಘೋಷಿಸಿತ್ತು. ಅಗತ್ಯ ವಸ್ತುಗಳ ಮಾರಾಟ ಮತ್ತು ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿತ್ತು. ಈ ವೇಳೆ ಕರ್ಫ್ಯೂ ಸಹ ಮುಂದುವರಿದಿತ್ತು. </p>.<p>ಸರ್ಕಾರಿ ಹುದ್ದೆಗಳ ಭರ್ತಿ ವೇಳೆ, 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾ ಸಿಬ್ಬಂದಿಯ ಮಕ್ಕಳು ಮತ್ತು ಸಂಬಂಧಿಕರಿಗೆ ನೀಡಲಾಗಿದ್ದ ಶೇ30ರಷ್ಟು ಕೋಟಾವನ್ನು ಕೊನೆಗೊಳಿಸಬೇಕೆಂದು ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು. </p>.<p>ಈ ವೇಳೆ ನಡೆದ ಹಿಂಸಾಚಾರದಲ್ಲಿ ಈವರೆಗೆ 100ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ದಿನ ಪತ್ರಿಕೆಗಳು ವರದಿ ಮಾಡಿವೆ. ಆದರೆ, ಸತ್ತವರ ಸಂಖ್ಯೆ ಎಷ್ಟು ಎಂಬುದನ್ನು ಸರ್ಕಾರ ಇದುವರೆಗೂ ಬಹಿರಂಗಪಡಿಸಿಲ್ಲ.</p>.<p>ಪರಿಸ್ಥಿತಿ ಸುಧಾರಿಸಿದ್ದರೂ ಇಂಟರ್ನೆಟ್ ಸೇವೆ ಪುನರಾರಂಭವಿಲ್ಲ ಕರ್ಫ್ಯೂ ಹಿಂಪಡೆಯಲು ವಿದ್ಯಾರ್ಥಿ ಸಂಘಟನೆ ಆಗ್ರಹ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>