<p><strong>ಢಾಕಾ</strong>: ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿಗಳ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ, ಭಾರತದ ಹೈಕಮಿಷನರ್ ಪ್ರಣಯ್ ವರ್ಮ ಅವರಿಗೆ ಮಂಗಳವಾರ ಸಮನ್ಸ್ ನೀಡಿದೆ.</p>.<p>ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿ, ವೀಸಾ ಕೇಂದ್ರಗಳ ಎದುರು ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ಬಾಂಗ್ಲಾದೇಶ ಕಳವಳ ವ್ಯಕ್ತಪಡಿಸಿದೆ.</p>.<p>ಇಂಥ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಬಾಂಗ್ಲಾದೇಶದ ಹೈಕಮಿಷನ್ ಮತ್ತು ಇತರ ರಾಜತಾಂತ್ರಿಕ ಕಚೇರಿಗಳ ಭದ್ರತೆಗೆ ಕ್ರಮವಹಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕಳೆದ 10 ದಿನಗಳಲ್ಲಿ ವರ್ಮಾ ಅವರಿಗೆ ಎರಡನೇ ಬಾರಿಗೆ ಸಮನ್ಸ್ ನೀಡಲಾಗಿದೆ.</p>.<p>ಪತ್ರಕರ್ತರ ಕಳವಳ: ಬಾಂಗ್ಲಾದೇಶದ ಮಾಧ್ಯಮಗಳು ಕಷ್ಟದ ಪರಿಸ್ಥಿತಿಯಲ್ಲಿವೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿಂತ ಜೀವಿಸುವ ಹಕ್ಕನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಬಾಂಗ್ಲಾದೇಶದ ಪ್ರಮುಖ ಪತ್ರಿಕೆಗಳ ಸಂಪಾದಕರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಬಾಕ್ಸ್</p>.<p>ಅಮೆರಿಕ ಸಂಸದರಿಂದ ಖಂಡನೆ</p>.<p>ನ್ಯೂಯಾರ್ಕ್/ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ಕೊಂದಿರುವುದನ್ನು ಅಮೆರಿಕ ಸಂಸದರು ಖಂಡಿಸಿದ್ದಾರೆ.</p>.<p>ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಮತ್ತು ಕಾನೂನು ಪುನರ್ಸ್ಥಾಪನೆ ಮಾಡುವಂತೆ ಬಾಂಗ್ಲಾದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p>ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಸದರಾದ ರಾಜಾ ಕೃಷ್ಣಮೂರ್ತಿ ಮತ್ತು ಜೆನಿಫೆರ್ ರಾಜ್ಕುಮಾರ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿಗಳ ಭದ್ರತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ, ಭಾರತದ ಹೈಕಮಿಷನರ್ ಪ್ರಣಯ್ ವರ್ಮ ಅವರಿಗೆ ಮಂಗಳವಾರ ಸಮನ್ಸ್ ನೀಡಿದೆ.</p>.<p>ಭಾರತದಲ್ಲಿರುವ ತನ್ನ ಹೈಕಮಿಷನ್ ಕಚೇರಿ, ವೀಸಾ ಕೇಂದ್ರಗಳ ಎದುರು ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ಬಾಂಗ್ಲಾದೇಶ ಕಳವಳ ವ್ಯಕ್ತಪಡಿಸಿದೆ.</p>.<p>ಇಂಥ ಘಟನೆಗಳ ಬಗ್ಗೆ ತನಿಖೆ ನಡೆಸುವಂತೆ ಹಾಗೂ ಬಾಂಗ್ಲಾದೇಶದ ಹೈಕಮಿಷನ್ ಮತ್ತು ಇತರ ರಾಜತಾಂತ್ರಿಕ ಕಚೇರಿಗಳ ಭದ್ರತೆಗೆ ಕ್ರಮವಹಿಸುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಕಳೆದ 10 ದಿನಗಳಲ್ಲಿ ವರ್ಮಾ ಅವರಿಗೆ ಎರಡನೇ ಬಾರಿಗೆ ಸಮನ್ಸ್ ನೀಡಲಾಗಿದೆ.</p>.<p>ಪತ್ರಕರ್ತರ ಕಳವಳ: ಬಾಂಗ್ಲಾದೇಶದ ಮಾಧ್ಯಮಗಳು ಕಷ್ಟದ ಪರಿಸ್ಥಿತಿಯಲ್ಲಿವೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಿಂತ ಜೀವಿಸುವ ಹಕ್ಕನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಬಾಂಗ್ಲಾದೇಶದ ಪ್ರಮುಖ ಪತ್ರಿಕೆಗಳ ಸಂಪಾದಕರು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಬಾಕ್ಸ್</p>.<p>ಅಮೆರಿಕ ಸಂಸದರಿಂದ ಖಂಡನೆ</p>.<p>ನ್ಯೂಯಾರ್ಕ್/ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ಕೊಂದಿರುವುದನ್ನು ಅಮೆರಿಕ ಸಂಸದರು ಖಂಡಿಸಿದ್ದಾರೆ.</p>.<p>ಧಾರ್ಮಿಕ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಮತ್ತು ಕಾನೂನು ಪುನರ್ಸ್ಥಾಪನೆ ಮಾಡುವಂತೆ ಬಾಂಗ್ಲಾದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.</p>.<p>ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಸದರಾದ ರಾಜಾ ಕೃಷ್ಣಮೂರ್ತಿ ಮತ್ತು ಜೆನಿಫೆರ್ ರಾಜ್ಕುಮಾರ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>