<p><strong>ಢಾಕಾ:</strong> ಬಾಂಗ್ಲಾದೇಶದ ನಿವೃತ್ತ ನ್ಯಾಯಮೂರ್ತಿಯೊಬ್ಬರು ಪಲಾಯನಕ್ಕೆ ಯತ್ನಿಸುತ್ತಿದ್ದ ವೇಳೆ ಈಶಾನ್ಯ ಗಡಿ ಭಾಗದ ಸಿಲೆಟ್ ಎಂಬಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ‘ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್‘ (ಬಿಜಿಬಿ) ಶುಕ್ರವಾರ ಹೇಳಿದೆ.</p>.ಸಹಜ ಸ್ಥಿತಿಯತ್ತ ಮರಳುತ್ತಿರುವ ಬಾಂಗ್ಲಾದೇಶ; ಶೀಘ್ರದಲ್ಲೇ ಚುನಾವಣೆ: ಅಧಿಕಾರಿಗಳು.<p>ಸಿಲೆಟ್ನ ಕನಾಯ್ಘಾಟ್ ಗಡಿಯಲ್ಲಿ ಭಾರತಕ್ಕೆ ಪಲಾಯನ ಮಾಡಲೆತ್ನಿಸುತ್ತಿದ್ದ ಸುಪ್ರೀಂ ಕೋರ್ಟ್ನ ಮೇಲ್ಮನವಿ ವಿಭಾಗದ ನಿವೃತ್ತ ನ್ಯಾಯಮೂರ್ತಿ ಸಂಶುದ್ದೀನ್ ಚೌದರಿ ಮಾಣಿಕ್ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಿಜಿಬಿ ತಿಳಿಸಿದೆ.</p><p>ಮಧ್ಯರಾತ್ರಿವರೆಗೂ ಅವರನ್ನು ಬಿಜಿಬಿ ಔಟ್ಪೋಸ್ಟ್ನಲ್ಲಿ ಇರಿಸಲಾಗಿತ್ತು ಎಂದು ಪ್ರೋತೋಮ್ ಪತ್ರಿಕೆ ವರದಿ ಮಾಡಿದೆ.</p>.ಬಾಂಗ್ಲಾದೇಶ | ಮಾಜಿ ಪ್ರಧಾನಿ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ ದಾಖಲು.<p>ಮೀಸಲಾತಿ ಸಂಬಂಧ ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪರಿಣಾಮ ಆಗಸ್ಟ್ 5ರಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.</p><p>ಆಗಸ್ಟ್ 5ರ ಬಳಿಕ, ಹಿರಿಯ ಮಂತ್ರಿಗಳು ಸೇರಿದಂತೆ ಪದಚ್ಯುತ ಆಡಳಿತದ ಹಲವಾರು ನಾಯಕರನ್ನು ಬಂಧಿಸಲಾಗಿದೆ. ಅವರಲ್ಲಿ ಬಹುತೇಕರ ಮೇಲೆ ಕೊಲೆ ಆರೋಪ ಇದೆ. ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನಾಯಕರು ದಂಡು ಪ್ರದೇಶದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ ಎಂದು ಸೇನೆ ಈ ಹಿಂದೆ ಹೇಳಿತ್ತು.</p>.Bangla Unrest: ಬಾಂಗ್ಲಾದೇಶ ಕೇಂದ್ರ ಬ್ಯಾಂಕ್ ಗವರ್ನರ್ ರಾಜೀನಾಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದ ನಿವೃತ್ತ ನ್ಯಾಯಮೂರ್ತಿಯೊಬ್ಬರು ಪಲಾಯನಕ್ಕೆ ಯತ್ನಿಸುತ್ತಿದ್ದ ವೇಳೆ ಈಶಾನ್ಯ ಗಡಿ ಭಾಗದ ಸಿಲೆಟ್ ಎಂಬಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ‘ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್‘ (ಬಿಜಿಬಿ) ಶುಕ್ರವಾರ ಹೇಳಿದೆ.</p>.ಸಹಜ ಸ್ಥಿತಿಯತ್ತ ಮರಳುತ್ತಿರುವ ಬಾಂಗ್ಲಾದೇಶ; ಶೀಘ್ರದಲ್ಲೇ ಚುನಾವಣೆ: ಅಧಿಕಾರಿಗಳು.<p>ಸಿಲೆಟ್ನ ಕನಾಯ್ಘಾಟ್ ಗಡಿಯಲ್ಲಿ ಭಾರತಕ್ಕೆ ಪಲಾಯನ ಮಾಡಲೆತ್ನಿಸುತ್ತಿದ್ದ ಸುಪ್ರೀಂ ಕೋರ್ಟ್ನ ಮೇಲ್ಮನವಿ ವಿಭಾಗದ ನಿವೃತ್ತ ನ್ಯಾಯಮೂರ್ತಿ ಸಂಶುದ್ದೀನ್ ಚೌದರಿ ಮಾಣಿಕ್ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಿಜಿಬಿ ತಿಳಿಸಿದೆ.</p><p>ಮಧ್ಯರಾತ್ರಿವರೆಗೂ ಅವರನ್ನು ಬಿಜಿಬಿ ಔಟ್ಪೋಸ್ಟ್ನಲ್ಲಿ ಇರಿಸಲಾಗಿತ್ತು ಎಂದು ಪ್ರೋತೋಮ್ ಪತ್ರಿಕೆ ವರದಿ ಮಾಡಿದೆ.</p>.ಬಾಂಗ್ಲಾದೇಶ | ಮಾಜಿ ಪ್ರಧಾನಿ ಹಸೀನಾ ವಿರುದ್ಧ ಮತ್ತೊಂದು ಕೊಲೆ ಪ್ರಕರಣ ದಾಖಲು.<p>ಮೀಸಲಾತಿ ಸಂಬಂಧ ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪರಿಣಾಮ ಆಗಸ್ಟ್ 5ರಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.</p><p>ಆಗಸ್ಟ್ 5ರ ಬಳಿಕ, ಹಿರಿಯ ಮಂತ್ರಿಗಳು ಸೇರಿದಂತೆ ಪದಚ್ಯುತ ಆಡಳಿತದ ಹಲವಾರು ನಾಯಕರನ್ನು ಬಂಧಿಸಲಾಗಿದೆ. ಅವರಲ್ಲಿ ಬಹುತೇಕರ ಮೇಲೆ ಕೊಲೆ ಆರೋಪ ಇದೆ. ಹಸೀನಾ ಅವರ ಅವಾಮಿ ಲೀಗ್ ಪಕ್ಷದ ನಾಯಕರು ದಂಡು ಪ್ರದೇಶದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ ಎಂದು ಸೇನೆ ಈ ಹಿಂದೆ ಹೇಳಿತ್ತು.</p>.Bangla Unrest: ಬಾಂಗ್ಲಾದೇಶ ಕೇಂದ್ರ ಬ್ಯಾಂಕ್ ಗವರ್ನರ್ ರಾಜೀನಾಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>