<p><strong><br>ಜೆರುಸಲೇಂ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸ್ನೇಹಿತನಿಗಿಂತ ಹೆಚ್ಚು’ ಎಂದು ಬಣ್ಣಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು 2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ಭೀಕರ ದಾಳಿಯ ಬಳಿಕ ಇಸ್ರೇಲ್ ಪರವಾಗಿ ನಿಂತಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.</p><p>ಹಮಾಸ್ ನಡೆಸಿದ ಮಾರಕ ದಾಳಿಯನ್ನು ಆರಂಭದಲ್ಲಿಯೇ ಖಂಡಿಸಿದ ವಿಶ್ವದ ನಾಯಕರಲ್ಲಿ ಮೋದಿ ಕೂಡ ಒಬ್ಬರು. ಈ ದಾಳಿಯಲ್ಲಿ 1200 ಇಸ್ರೇಲಿಗಳು ಮೃತಪಟ್ಟಿದ್ದರೆ ಸುಮಾರು 250 ಮಂದಿಯನ್ನು ಅಪಹರಿಸಲಾಗಿತ್ತು. </p><p>‘ನನ್ನ ಪ್ರೀತಿಯ ಸ್ನೇಹಿತ ನರೇಂದ್ರ ಅವರ ಭೇಟಿಯಿಂದ ನಾನು ಭಾವುಕನಾಗಿದ್ದೇನೆ. ನೀವು ಇಸ್ರೇಲ್ನ ಉತ್ತಮ ಸ್ನೇಹಿತ. ಜಾಗತಿಕ ವೇದಿಕೆಯಲ್ಲಿ ಉತ್ತಮ ನಾಯಕ. ನೀವು ನನಗೆ ಸ್ನೇಹಿತನಿಗಿಂತಲೂ ಹೆಚ್ಚು ಒಬ್ಬ ಸಹೋದರ’ ಎಂದು ನೆತನ್ಯಾಹು ಹೇಳಿದರು. ‘</p><p>ಭಾರತ ಒಂದು ದೈತ್ಯ ದೇಶ ಅಗಾಧ ಶಕ್ತಿ ಹೊಂದಿದೆ. ಅದು ತನ್ನ ಶಕ್ತಿಯೊಂದಿಗೆ ಇಸ್ರೇಲ್ಗೆ ಬೆಂಬಲ ನೀಡಿದೆ’ ಎಂದರು. ‘ಭಾರತವು ಬಾಹ್ಯಾಕಾಶದ ಸೂಪರ್ ಪವರ್ ದೇಶವಾಗಿದ್ದು ಏಷ್ಯಾದ ಹುಲಿಯಾಗಿದೆ’ ಎಂದು ಅವರು ಶ್ಲಾಘಿಸಿದರು</p>.ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ .ಹಮಾಸ್ ವಿರೋಧಿ ಗುಂಪಿಗೆ ಇಸ್ರೇಲ್ ಬೆಂಬಲ ಒಪ್ಪಿಕೊಂಡ ಬೆಂಜಮಿನ್ ನೆತನ್ಯಾಹು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong><br>ಜೆರುಸಲೇಂ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸ್ನೇಹಿತನಿಗಿಂತ ಹೆಚ್ಚು’ ಎಂದು ಬಣ್ಣಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು 2023ರ ಅಕ್ಟೋಬರ್ 7ರಂದು ಹಮಾಸ್ ನಡೆಸಿದ ಭೀಕರ ದಾಳಿಯ ಬಳಿಕ ಇಸ್ರೇಲ್ ಪರವಾಗಿ ನಿಂತಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.</p><p>ಹಮಾಸ್ ನಡೆಸಿದ ಮಾರಕ ದಾಳಿಯನ್ನು ಆರಂಭದಲ್ಲಿಯೇ ಖಂಡಿಸಿದ ವಿಶ್ವದ ನಾಯಕರಲ್ಲಿ ಮೋದಿ ಕೂಡ ಒಬ್ಬರು. ಈ ದಾಳಿಯಲ್ಲಿ 1200 ಇಸ್ರೇಲಿಗಳು ಮೃತಪಟ್ಟಿದ್ದರೆ ಸುಮಾರು 250 ಮಂದಿಯನ್ನು ಅಪಹರಿಸಲಾಗಿತ್ತು. </p><p>‘ನನ್ನ ಪ್ರೀತಿಯ ಸ್ನೇಹಿತ ನರೇಂದ್ರ ಅವರ ಭೇಟಿಯಿಂದ ನಾನು ಭಾವುಕನಾಗಿದ್ದೇನೆ. ನೀವು ಇಸ್ರೇಲ್ನ ಉತ್ತಮ ಸ್ನೇಹಿತ. ಜಾಗತಿಕ ವೇದಿಕೆಯಲ್ಲಿ ಉತ್ತಮ ನಾಯಕ. ನೀವು ನನಗೆ ಸ್ನೇಹಿತನಿಗಿಂತಲೂ ಹೆಚ್ಚು ಒಬ್ಬ ಸಹೋದರ’ ಎಂದು ನೆತನ್ಯಾಹು ಹೇಳಿದರು. ‘</p><p>ಭಾರತ ಒಂದು ದೈತ್ಯ ದೇಶ ಅಗಾಧ ಶಕ್ತಿ ಹೊಂದಿದೆ. ಅದು ತನ್ನ ಶಕ್ತಿಯೊಂದಿಗೆ ಇಸ್ರೇಲ್ಗೆ ಬೆಂಬಲ ನೀಡಿದೆ’ ಎಂದರು. ‘ಭಾರತವು ಬಾಹ್ಯಾಕಾಶದ ಸೂಪರ್ ಪವರ್ ದೇಶವಾಗಿದ್ದು ಏಷ್ಯಾದ ಹುಲಿಯಾಗಿದೆ’ ಎಂದು ಅವರು ಶ್ಲಾಘಿಸಿದರು</p>.ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ .ಹಮಾಸ್ ವಿರೋಧಿ ಗುಂಪಿಗೆ ಇಸ್ರೇಲ್ ಬೆಂಬಲ ಒಪ್ಪಿಕೊಂಡ ಬೆಂಜಮಿನ್ ನೆತನ್ಯಾಹು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>