<p><strong>ಥಿಂಪು:</strong> ಅಸ್ಸಾಂನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಪೂರೈಸುತ್ತಿರುವ ನೀರಿನ ಸರಬರಾಜನ್ನು ನಿಲ್ಲಿಸಲಾಗಿದೆ ಎಂಬ ಆರೋಪವನ್ನು ಭೂತಾನ್ ತಳ್ಳಿ ಹಾಕಿದೆ.</p>.<p>‘ಅಸ್ಸಾಂನ ಬಕ್ಸಾ ಮತ್ತು ಉದಲ್ಗಿರಿ ಜಿಲ್ಲೆಗಳ ರೈತರಿಗೆ ನೀರು ಪೂರೈಸುವುದನ್ನು ಭೂತಾನ್ ತಡೆಹಿಡಿದಿದೆ ಎಂದು ಭಾರತದ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ಆರೋಪಗಳು ಆಧಾರ ರಹಿತವಾಗಿವೆ. ಇದುಭಾರತ ಮತ್ತು ಭೂತಾನ್ ನಡುವೆ ಗೊಂದಲ ಸೃಷ್ಟಿಸುವ ಯತ್ನವಾಗಿದೆ.ಯಾವುದೇ ಕಾರಣವಿಲ್ಲದೇ ಭೂತಾನ್ ಯಾಕೆ ನೀರಿನ ಸರಬರಾಜನ್ನು ನಿಲ್ಲಿಸುತ್ತದೆ’ ಎಂದು ಭೂತಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಶ್ನಿಸಿದೆ.</p>.<p>‘ನೀರು ಸರಬರಾಜು ಮಾಡುತ್ತಿರುವ ಮಾರ್ಗದಲ್ಲಿ ನೈಸರ್ಗಿಕ ಮಲೀನಗಳು ಸೇರಿರುವುದರಿಂದ ನೀರು ಸರಬರಾಜಿನಲ್ಲಿ ತೊಡಕು ಉಂಟಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ವರದಿ ಮಾಡಿವೆ’ ಎಂದು ಅಸ್ಸಾಂನ ಮುಖ್ಯ ಕಾರ್ಯದರ್ಶಿ ಕುಮಾರ್ ಸಂಜಯ್ ಕೃಷ್ಣ ಅವರು ಟ್ಟೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಥಿಂಪು:</strong> ಅಸ್ಸಾಂನಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಪೂರೈಸುತ್ತಿರುವ ನೀರಿನ ಸರಬರಾಜನ್ನು ನಿಲ್ಲಿಸಲಾಗಿದೆ ಎಂಬ ಆರೋಪವನ್ನು ಭೂತಾನ್ ತಳ್ಳಿ ಹಾಕಿದೆ.</p>.<p>‘ಅಸ್ಸಾಂನ ಬಕ್ಸಾ ಮತ್ತು ಉದಲ್ಗಿರಿ ಜಿಲ್ಲೆಗಳ ರೈತರಿಗೆ ನೀರು ಪೂರೈಸುವುದನ್ನು ಭೂತಾನ್ ತಡೆಹಿಡಿದಿದೆ ಎಂದು ಭಾರತದ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ಆರೋಪಗಳು ಆಧಾರ ರಹಿತವಾಗಿವೆ. ಇದುಭಾರತ ಮತ್ತು ಭೂತಾನ್ ನಡುವೆ ಗೊಂದಲ ಸೃಷ್ಟಿಸುವ ಯತ್ನವಾಗಿದೆ.ಯಾವುದೇ ಕಾರಣವಿಲ್ಲದೇ ಭೂತಾನ್ ಯಾಕೆ ನೀರಿನ ಸರಬರಾಜನ್ನು ನಿಲ್ಲಿಸುತ್ತದೆ’ ಎಂದು ಭೂತಾನ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಶ್ನಿಸಿದೆ.</p>.<p>‘ನೀರು ಸರಬರಾಜು ಮಾಡುತ್ತಿರುವ ಮಾರ್ಗದಲ್ಲಿ ನೈಸರ್ಗಿಕ ಮಲೀನಗಳು ಸೇರಿರುವುದರಿಂದ ನೀರು ಸರಬರಾಜಿನಲ್ಲಿ ತೊಡಕು ಉಂಟಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ವರದಿ ಮಾಡಿವೆ’ ಎಂದು ಅಸ್ಸಾಂನ ಮುಖ್ಯ ಕಾರ್ಯದರ್ಶಿ ಕುಮಾರ್ ಸಂಜಯ್ ಕೃಷ್ಣ ಅವರು ಟ್ಟೀಟ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>