<p><strong>ಇಸ್ಲಾಮಾಬಾದ್</strong>: ಸಿಂಧೂ ನದಿ ನೀರಿನ ಒಪ್ಪಂದದ(ಐಡಬ್ಲ್ಯುಟಿ) ಅನ್ವಯ ನ್ಯಾಯಯುತವಾಗಿ ನಮಗೆ ಸೇರಬೇಕಿರುವ ನೀರಿನ ಪಾಲನ್ನು ಕೊಡಲು ಒಪ್ಪದಿದ್ದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿದ್ದಾರೆ.</p> <p>26 ಮಂದಿ ಭಾರತೀಯರ ಜೀವ ತೆಗೆದ ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು 1960ರ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದು ಮಾಡಿತ್ತು. ಈ ಒಪ್ಪಂದವನ್ನು ಮರುಸ್ಥಾಪಿಸುವುದಿಲ್ಲ ಎಂದು ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದರು.</p><p>ಅಂತರರಾಷ್ಟ್ರೀಯ ಒಪ್ಪಂದದ ಬಗ್ಗೆ ಶಾ ಅವರ ಹೇಳಿಕೆ ಲಜ್ಜೆಗೇಡಿತನದ ನಿರ್ಲಕ್ಷ್ಯದಿಂದ ಕೂಡಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಟೀಕಿಸಿದ ಎರಡು ದಿನಗಳ ನಂತರ ಬಿಲಾವಲ್ ಅವರ ಹೇಳಿಕೆ ಬಂದಿದೆ.</p><p>ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್, ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ವಿರೋಧಿಸಿದ್ದು, ಪಾಕಿಸ್ತಾನವು ನೀರಿನ ಪಾಲನ್ನು ಪಡೆದೇ ತೀರುವುದಾಗಿ ಹೇಳಿದ್ದಾರೆ.</p><p>ಭಾರತಕ್ಕೆ ಎರಡು ಆಯ್ಕೆಗಳಿವೆ. ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಅಥವಾ ನಾವು ಆರು ನದಿಗಳಿಂದ ನೀರನ್ನು ನಾವೇ ಹರಿಸಿಕೊಳ್ಳುತ್ತೇವೆ ಎಂದು ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.</p><p>ಒಪ್ಪಂದದ ಸ್ಥಗಿತ ಸಾಧ್ಯವಿಲ್ಲದ ಕಾರಣ ಅದಿನ್ನೂ ಅಸ್ತಿತ್ವದಲ್ಲಿದೆ ಎಂದಿದ್ಧಾರೆ.</p><p>ಸಿಂಧೂ ಒಪ್ಪಂದ ಕೊನೆಗೊಂಡಿದೆ ಅಥವಾ ಸ್ಥಗಿತಗೊಂಡಿದೆ ಎಂಬ ಭಾರತದ ಹೇಳಿಕೆ ಕಾನೂನುಬಾಹಿರವಾಗಿದೆ. ಏಕೆಂದರೆ, ಒಪ್ಪಂದ ಸ್ಥಗಿತಗೊಂಡಿಲ್ಲ. ಇದು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳ ಬದ್ಧತೆಯಾಗಿದೆ. ಆದರೆ, ನೀರನ್ನು ನಿಲ್ಲಿಸುವ ಬೆದರಿಕೆ ವಿಶ್ವಸಂಸ್ಥೆಯ ನಿಯಮಗಳ ಪ್ರಕಾರ ಕಾನೂನುಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.</p><p>ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥರಾಗಿರುವ ಬಿಲಾವಲ್, ಭಾರತವು ಬೆದರಿಕೆಯನ್ನು ಮುಂದುವರಿಸಿದರೆ, ನಾವು ಮತ್ತೆ ಯುದ್ಧ ಮಾಡಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಿರಾಕರಿಸಿದರೆ ಮತ್ತು ಭಯೋತ್ಪಾದನೆಯ ಬಗ್ಗೆ ಯಾವುದೇ ಸಮನ್ವಯವಿಲ್ಲದಿದ್ದರೆ, ಎರಡೂ ದೇಶಗಳಲ್ಲಿ ಹಿಂಸಾಚಾರ ತೀವ್ರಗೊಳ್ಳುತ್ತದೆ ಎಂದಿದ್ದಾರೆ.</p><p><strong>ವಾಯುಪ್ರದೇಶ ನಿರ್ಬಂಧ ಮುಂದುವರಿಕೆ</strong> </p><p>ಪಾಕಿಸ್ತಾನವು ತನ್ನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ವಿಧಿಸಿರುವ ನಿರ್ಬಂಧವನ್ನು ಇನ್ನೊಂದು ತಿಂಗಳು ವಿಸ್ತರಿಸಿದೆ. ಭಾರತದ ಜತೆಗಿನ ಸಂಘರ್ಷದ ಬೆನ್ನಲ್ಲೇ ಪಾಕಿಸ್ತಾನವು ಈ ನಿರ್ಬಂಧ ಹೇರಿತ್ತು. ಮೇ 23ರವರೆಗೆ ವಿಧಿಸಿದ್ದ ನಿರ್ಬಂಧವನ್ನು ಮೊದಲು ಜೂನ್ 23ರವರೆಗೆ ವಿಸ್ತರಿಸಿತ್ತು. ಇದೀಗ ಇನ್ನೊಂದು ತಿಂಗಳು ವಿಸ್ತರಿಸಿದ್ದು ನಿರ್ಬಂಧವು ಜುಲೈ 23ರ ವರೆಗೆ ಮುಂದುವರಿಯಲಿದೆ ಎಂದು ಪಾಕ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಸಿಂಧೂ ನದಿ ನೀರಿನ ಒಪ್ಪಂದದ(ಐಡಬ್ಲ್ಯುಟಿ) ಅನ್ವಯ ನ್ಯಾಯಯುತವಾಗಿ ನಮಗೆ ಸೇರಬೇಕಿರುವ ನೀರಿನ ಪಾಲನ್ನು ಕೊಡಲು ಒಪ್ಪದಿದ್ದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿದ್ದಾರೆ.</p> <p>26 ಮಂದಿ ಭಾರತೀಯರ ಜೀವ ತೆಗೆದ ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತವು 1960ರ ಸಿಂಧೂ ನದಿ ನೀರಿನ ಒಪ್ಪಂದವನ್ನು ರದ್ದು ಮಾಡಿತ್ತು. ಈ ಒಪ್ಪಂದವನ್ನು ಮರುಸ್ಥಾಪಿಸುವುದಿಲ್ಲ ಎಂದು ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದರು.</p><p>ಅಂತರರಾಷ್ಟ್ರೀಯ ಒಪ್ಪಂದದ ಬಗ್ಗೆ ಶಾ ಅವರ ಹೇಳಿಕೆ ಲಜ್ಜೆಗೇಡಿತನದ ನಿರ್ಲಕ್ಷ್ಯದಿಂದ ಕೂಡಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಟೀಕಿಸಿದ ಎರಡು ದಿನಗಳ ನಂತರ ಬಿಲಾವಲ್ ಅವರ ಹೇಳಿಕೆ ಬಂದಿದೆ.</p><p>ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಬಿಲಾವಲ್, ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರವನ್ನು ವಿರೋಧಿಸಿದ್ದು, ಪಾಕಿಸ್ತಾನವು ನೀರಿನ ಪಾಲನ್ನು ಪಡೆದೇ ತೀರುವುದಾಗಿ ಹೇಳಿದ್ದಾರೆ.</p><p>ಭಾರತಕ್ಕೆ ಎರಡು ಆಯ್ಕೆಗಳಿವೆ. ನೀರನ್ನು ನ್ಯಾಯಯುತವಾಗಿ ಹಂಚಿಕೊಳ್ಳಿ, ಅಥವಾ ನಾವು ಆರು ನದಿಗಳಿಂದ ನೀರನ್ನು ನಾವೇ ಹರಿಸಿಕೊಳ್ಳುತ್ತೇವೆ ಎಂದು ಸಿಂಧೂ ಜಲಾನಯನ ಪ್ರದೇಶದ ಆರು ನದಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.</p><p>ಒಪ್ಪಂದದ ಸ್ಥಗಿತ ಸಾಧ್ಯವಿಲ್ಲದ ಕಾರಣ ಅದಿನ್ನೂ ಅಸ್ತಿತ್ವದಲ್ಲಿದೆ ಎಂದಿದ್ಧಾರೆ.</p><p>ಸಿಂಧೂ ಒಪ್ಪಂದ ಕೊನೆಗೊಂಡಿದೆ ಅಥವಾ ಸ್ಥಗಿತಗೊಂಡಿದೆ ಎಂಬ ಭಾರತದ ಹೇಳಿಕೆ ಕಾನೂನುಬಾಹಿರವಾಗಿದೆ. ಏಕೆಂದರೆ, ಒಪ್ಪಂದ ಸ್ಥಗಿತಗೊಂಡಿಲ್ಲ. ಇದು ಪಾಕಿಸ್ತಾನ ಮತ್ತು ಭಾರತ ಎರಡೂ ದೇಶಗಳ ಬದ್ಧತೆಯಾಗಿದೆ. ಆದರೆ, ನೀರನ್ನು ನಿಲ್ಲಿಸುವ ಬೆದರಿಕೆ ವಿಶ್ವಸಂಸ್ಥೆಯ ನಿಯಮಗಳ ಪ್ರಕಾರ ಕಾನೂನುಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.</p><p>ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖ್ಯಸ್ಥರಾಗಿರುವ ಬಿಲಾವಲ್, ಭಾರತವು ಬೆದರಿಕೆಯನ್ನು ಮುಂದುವರಿಸಿದರೆ, ನಾವು ಮತ್ತೆ ಯುದ್ಧ ಮಾಡಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಿರಾಕರಿಸಿದರೆ ಮತ್ತು ಭಯೋತ್ಪಾದನೆಯ ಬಗ್ಗೆ ಯಾವುದೇ ಸಮನ್ವಯವಿಲ್ಲದಿದ್ದರೆ, ಎರಡೂ ದೇಶಗಳಲ್ಲಿ ಹಿಂಸಾಚಾರ ತೀವ್ರಗೊಳ್ಳುತ್ತದೆ ಎಂದಿದ್ದಾರೆ.</p><p><strong>ವಾಯುಪ್ರದೇಶ ನಿರ್ಬಂಧ ಮುಂದುವರಿಕೆ</strong> </p><p>ಪಾಕಿಸ್ತಾನವು ತನ್ನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ವಿಧಿಸಿರುವ ನಿರ್ಬಂಧವನ್ನು ಇನ್ನೊಂದು ತಿಂಗಳು ವಿಸ್ತರಿಸಿದೆ. ಭಾರತದ ಜತೆಗಿನ ಸಂಘರ್ಷದ ಬೆನ್ನಲ್ಲೇ ಪಾಕಿಸ್ತಾನವು ಈ ನಿರ್ಬಂಧ ಹೇರಿತ್ತು. ಮೇ 23ರವರೆಗೆ ವಿಧಿಸಿದ್ದ ನಿರ್ಬಂಧವನ್ನು ಮೊದಲು ಜೂನ್ 23ರವರೆಗೆ ವಿಸ್ತರಿಸಿತ್ತು. ಇದೀಗ ಇನ್ನೊಂದು ತಿಂಗಳು ವಿಸ್ತರಿಸಿದ್ದು ನಿರ್ಬಂಧವು ಜುಲೈ 23ರ ವರೆಗೆ ಮುಂದುವರಿಯಲಿದೆ ಎಂದು ಪಾಕ್ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>