<p class="title"><strong>ಮಾಸ್ಕೊ</strong>: ರಷ್ಯಾದ ಪೂರ್ವ ಕರಾವಳಿ ತೀರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದ ಆಂಟೊನೊವ್ ಎಎನ್ -26 ವಿಮಾನದಲ್ಲಿದ್ದ 19 ಪ್ರಯಾಣಿಕರು ಮತ್ತು ಸಿಬ್ಬಂದಿಯ ಮೃತದೇಹಗಳು ಬುಧವಾರ ಪತ್ತೆಯಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಒಟ್ಟು 28 ಜನರಿದ್ದ ವಿಮಾನವು ಮಂಗಳವಾರ ಪಲಾನಾಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆದಲ್ಲೇ ಕೆಟ್ಟ ಹವಾಮಾನದ ಕಾರಣ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿತ್ತು.</p>.<p class="title">ವಿಮಾನದಲ್ಲಿನ ಸಿಬ್ಬಂದಿ ಮತ್ತು ಪ್ರಯಾಣಿಕರಲ್ಲಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ. ಸಾವಿಗೀಡಾದವರಲ್ಲಿ ಪಲಾನಾದ ಸ್ಥಳೀಯ ಸರ್ಕಾರದ ಮುಖ್ಯಸ್ಥ ಓಲ್ಗಾ ಮೊಖಿರೇವಾ ಅವರೂ ಇದ್ದಾರೆ ಎಂದು ಕಮ್ಚಟ್ಕಾ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p class="title">ರಷ್ಯಾದ ಪೂರ್ವ ಕರಾವಳಿಯ ಬಂಡೆಗಳ ಪ್ರದೇಶದಲ್ಲಿ ವಿಮಾನವ ಭಗ್ನಾವೇಷಗಳು ಮಂಗಳವಾರ ಸಂಜೆ ಪತ್ತೆಯಾಗಿವೆ. ಅಪಘಾತಕ್ಕೀಡಾದ ಸ್ಥಳದಲ್ಲಿ ಕತ್ತಲೆ ಇದ್ದುದ್ದರಿಂದ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಾಸ್ಕೊ</strong>: ರಷ್ಯಾದ ಪೂರ್ವ ಕರಾವಳಿ ತೀರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದ ಆಂಟೊನೊವ್ ಎಎನ್ -26 ವಿಮಾನದಲ್ಲಿದ್ದ 19 ಪ್ರಯಾಣಿಕರು ಮತ್ತು ಸಿಬ್ಬಂದಿಯ ಮೃತದೇಹಗಳು ಬುಧವಾರ ಪತ್ತೆಯಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಒಟ್ಟು 28 ಜನರಿದ್ದ ವಿಮಾನವು ಮಂಗಳವಾರ ಪಲಾನಾಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆದಲ್ಲೇ ಕೆಟ್ಟ ಹವಾಮಾನದ ಕಾರಣ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿತ್ತು.</p>.<p class="title">ವಿಮಾನದಲ್ಲಿನ ಸಿಬ್ಬಂದಿ ಮತ್ತು ಪ್ರಯಾಣಿಕರಲ್ಲಿ ಯಾರೊಬ್ಬರೂ ಬದುಕುಳಿದಿರುವ ಸಾಧ್ಯತೆ ಇಲ್ಲ. ಸಾವಿಗೀಡಾದವರಲ್ಲಿ ಪಲಾನಾದ ಸ್ಥಳೀಯ ಸರ್ಕಾರದ ಮುಖ್ಯಸ್ಥ ಓಲ್ಗಾ ಮೊಖಿರೇವಾ ಅವರೂ ಇದ್ದಾರೆ ಎಂದು ಕಮ್ಚಟ್ಕಾ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p class="title">ರಷ್ಯಾದ ಪೂರ್ವ ಕರಾವಳಿಯ ಬಂಡೆಗಳ ಪ್ರದೇಶದಲ್ಲಿ ವಿಮಾನವ ಭಗ್ನಾವೇಷಗಳು ಮಂಗಳವಾರ ಸಂಜೆ ಪತ್ತೆಯಾಗಿವೆ. ಅಪಘಾತಕ್ಕೀಡಾದ ಸ್ಥಳದಲ್ಲಿ ಕತ್ತಲೆ ಇದ್ದುದ್ದರಿಂದ ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>