<p><strong>ಬೀಜಿಂಗ್</strong>: ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲು ನಿರ್ಧರಿಸಿರುವ ಚೀನಾ, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.</p><p>ಟಿಬೆಟ್ನಲ್ಲಿ ಸ್ಥಳೀಯವಾಗಿ ಯಾರ್ಲಂಗ್ ಸಂಗ್ಪೊ ಎಂದು ಕರೆಯುವ ಬ್ರಹ್ಮಪುತ್ರ ನದಿಯ ಕೆಳಭಾಗದಲ್ಲಿ ಅಣೆಕಟ್ಟು ಕಟ್ಟುವ ಕೆಲಸವನ್ನು ಪ್ರಾರಂಭಿಸಲು ಚೀನಾ ಪ್ರಧಾನಿ ಲಿ ಕಿಯಾಂಗ್ ಸೂಚಿಸಿದ್ದಾರೆ. ವಿಶ್ವದಲ್ಲೇ ಅತಿ ದೊಡ್ಡ ಅಣೆಕಟ್ಟು ಇದಾಗಿದೆ.</p><p>ಈ ಯೋಜನೆಯಿಂದ ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ‘ಅಣೆಕಟ್ಟು ನದಿಯ ಮೇಲ್ಭಾಗದವರೆಗೆ ಬಂದರೂ ನದಿಯ ಮಟ್ಟದಿಂದ ಕೆಳಕ್ಕಿರುವ ಪ್ರದೇಶಗಳ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದ್ದಾರೆ.</p><p>ಆದರೂ, ಅಣೆಕಟ್ಟಿನ ನಿರ್ಮಾಣದಿಂದ ಪರಿಸರದ ಮೇಲಾಗುವ ಸಂಭಾವ್ಯ ಪರಿಣಾಮದ ಬಗ್ಗೆ ಭಾರತದಲ್ಲಿ ಹೆಚ್ಚಿನ ಕಳವಳಗಳು ವ್ಯಕ್ತವಾಗಿವೆ. ಅಲ್ಲದೆ ಅಣೆಕಟ್ಟು ನಿರ್ಮಾಣದ ಬಗ್ಗೆ ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ.</p>.ಆಳ–ಅಗಲ: ಚೀನಾ ದುಸ್ಸಾಹಸ ಭಾರತಕ್ಕೆ ಕಂಟಕ?.ಬ್ರಹ್ಮಪುತ್ರ ನದಿಗೆ 4 ಅಣೆಕಟ್ಟೆ: ಭಾರತಕ್ಕೆ ನೀರು ತಡೆಯುವ ಚೀನಾ ಹುನ್ನಾರ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್</strong>: ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಟಿಬೆಟ್ನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಲು ನಿರ್ಧರಿಸಿರುವ ಚೀನಾ, ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ.</p><p>ಟಿಬೆಟ್ನಲ್ಲಿ ಸ್ಥಳೀಯವಾಗಿ ಯಾರ್ಲಂಗ್ ಸಂಗ್ಪೊ ಎಂದು ಕರೆಯುವ ಬ್ರಹ್ಮಪುತ್ರ ನದಿಯ ಕೆಳಭಾಗದಲ್ಲಿ ಅಣೆಕಟ್ಟು ಕಟ್ಟುವ ಕೆಲಸವನ್ನು ಪ್ರಾರಂಭಿಸಲು ಚೀನಾ ಪ್ರಧಾನಿ ಲಿ ಕಿಯಾಂಗ್ ಸೂಚಿಸಿದ್ದಾರೆ. ವಿಶ್ವದಲ್ಲೇ ಅತಿ ದೊಡ್ಡ ಅಣೆಕಟ್ಟು ಇದಾಗಿದೆ.</p><p>ಈ ಯೋಜನೆಯಿಂದ ಭಾರತ ಮತ್ತು ಬಾಂಗ್ಲಾದೇಶದ ಮೇಲೆ ಪರಿಣಾಮ ಬೀರುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ‘ಅಣೆಕಟ್ಟು ನದಿಯ ಮೇಲ್ಭಾಗದವರೆಗೆ ಬಂದರೂ ನದಿಯ ಮಟ್ಟದಿಂದ ಕೆಳಕ್ಕಿರುವ ಪ್ರದೇಶಗಳ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದ್ದಾರೆ.</p><p>ಆದರೂ, ಅಣೆಕಟ್ಟಿನ ನಿರ್ಮಾಣದಿಂದ ಪರಿಸರದ ಮೇಲಾಗುವ ಸಂಭಾವ್ಯ ಪರಿಣಾಮದ ಬಗ್ಗೆ ಭಾರತದಲ್ಲಿ ಹೆಚ್ಚಿನ ಕಳವಳಗಳು ವ್ಯಕ್ತವಾಗಿವೆ. ಅಲ್ಲದೆ ಅಣೆಕಟ್ಟು ನಿರ್ಮಾಣದ ಬಗ್ಗೆ ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ.</p>.ಆಳ–ಅಗಲ: ಚೀನಾ ದುಸ್ಸಾಹಸ ಭಾರತಕ್ಕೆ ಕಂಟಕ?.ಬ್ರಹ್ಮಪುತ್ರ ನದಿಗೆ 4 ಅಣೆಕಟ್ಟೆ: ಭಾರತಕ್ಕೆ ನೀರು ತಡೆಯುವ ಚೀನಾ ಹುನ್ನಾರ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>