<p><strong>ಲಂಡನ್:</strong> ಫ್ರಾನ್ಸ್ ಸರ್ಕಾರವು ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. ಈ ಗೌರವಕ್ಕೆ ಪಾತ್ರರಾದ ಭಾರತ ಮೂಲದ ಏಕೈಕ ಮಹಿಳೆಯಾಗಿದ್ದಾರೆ.</p>.<p>ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆಯು ನಾಜಿಗಳ ವಿರುದ್ಧ ಹೋರಾಡಿದವರ ಗೌರವಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟನ್ನ ವಿಶೇಷ ಕಾರ್ಯಾಚರಣೆ ವಿಭಾಗಕ್ಕೆ ರಹಸ್ಯ ಪ್ರತಿನಿಧಿಯಾಗಿ ಫ್ರಾನ್ಸ್ ಪರ ನೂರ್ ಕೆಲಸ ಮಾಡಿದ್ದರು.</p>.<p>ಎರಡನೇ ಮಹಾಯುದ್ಧದ 80 ವರ್ಷಾಚರಣೆ ಸಂದರ್ಭದಲ್ಲಿ ಈ ತಿಂಗಳು ಬಿಡುಗಡೆ ಮಾಡಿದ ಅಂಚೆ ಚೀಟಿಗಳಿಗೆ ಆಯ್ಕೆಯಾದ 12 ಯುದ್ಧ ವೀರರು ಮತ್ತು ನಾಯಕಿಯರಲ್ಲಿ ನೂರ್ ಸಹ ಒಬ್ಬರು.</p>.<p>‘ಫ್ರಾನ್ಸ್ ಸರ್ಕಾರ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿ ಬಿಡುಗಡೆ ಮೂಲಕ ಗೌರವಿಸಿರುವುದು ಸಂತೋಷ ತಂದಿದೆ’ ಎಂದು ನೂರ್ ಅವರ ಜೀವನ ಚರಿತ್ರೆ ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ನ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. </p>.<p>‘ನಿರಂಕುಶ ಪ್ರಭುತ್ವದ ವಿರುದ್ಧದ ಹೋರಾಟದಲ್ಲಿ ನೂರ್ ತನ್ನ ಪ್ರಾಣ ತ್ಯಾಗ ಮಾಡಿದ್ದರು. ಫ್ರಾನ್ಸ್ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವರ ಮುಖವನ್ನು ನೋಡುವುದು ಅದ್ಭುತವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್:</strong> ಫ್ರಾನ್ಸ್ ಸರ್ಕಾರವು ಟಿಪ್ಪು ಸುಲ್ತಾನ್ ವಂಶಸ್ಥೆ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಗೌರವ ಸಲ್ಲಿಸಿದೆ. ಈ ಗೌರವಕ್ಕೆ ಪಾತ್ರರಾದ ಭಾರತ ಮೂಲದ ಏಕೈಕ ಮಹಿಳೆಯಾಗಿದ್ದಾರೆ.</p>.<p>ಫ್ರೆಂಚ್ ಅಂಚೆ ಸೇವೆ, ಲಾ ಪೋಸ್ಟೆಯು ನಾಜಿಗಳ ವಿರುದ್ಧ ಹೋರಾಡಿದವರ ಗೌರವಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದೆ. ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಬ್ರಿಟನ್ನ ವಿಶೇಷ ಕಾರ್ಯಾಚರಣೆ ವಿಭಾಗಕ್ಕೆ ರಹಸ್ಯ ಪ್ರತಿನಿಧಿಯಾಗಿ ಫ್ರಾನ್ಸ್ ಪರ ನೂರ್ ಕೆಲಸ ಮಾಡಿದ್ದರು.</p>.<p>ಎರಡನೇ ಮಹಾಯುದ್ಧದ 80 ವರ್ಷಾಚರಣೆ ಸಂದರ್ಭದಲ್ಲಿ ಈ ತಿಂಗಳು ಬಿಡುಗಡೆ ಮಾಡಿದ ಅಂಚೆ ಚೀಟಿಗಳಿಗೆ ಆಯ್ಕೆಯಾದ 12 ಯುದ್ಧ ವೀರರು ಮತ್ತು ನಾಯಕಿಯರಲ್ಲಿ ನೂರ್ ಸಹ ಒಬ್ಬರು.</p>.<p>‘ಫ್ರಾನ್ಸ್ ಸರ್ಕಾರ ನೂರ್ ಇನಾಯತ್ ಖಾನ್ ಅವರ ಅಂಚೆ ಚೀಟಿ ಬಿಡುಗಡೆ ಮೂಲಕ ಗೌರವಿಸಿರುವುದು ಸಂತೋಷ ತಂದಿದೆ’ ಎಂದು ನೂರ್ ಅವರ ಜೀವನ ಚರಿತ್ರೆ ‘ಸ್ಪೈ ಪ್ರಿನ್ಸೆಸ್: ದಿ ಲೈಫ್ ಆಫ್ ನೂರ್ ಇನಾಯತ್ ಖಾನ್’ನ ಲೇಖಕಿ ಶ್ರಬಾನಿ ಬಸು ಹೇಳಿದ್ದಾರೆ. </p>.<p>‘ನಿರಂಕುಶ ಪ್ರಭುತ್ವದ ವಿರುದ್ಧದ ಹೋರಾಟದಲ್ಲಿ ನೂರ್ ತನ್ನ ಪ್ರಾಣ ತ್ಯಾಗ ಮಾಡಿದ್ದರು. ಫ್ರಾನ್ಸ್ನಲ್ಲಿ ಸಾಮಾನ್ಯ ಜನರು ಪೋಸ್ಟ್ ಮಾಡುವ ಅಂಚೆ ಚೀಟಿಯಲ್ಲಿ ಅವರ ಮುಖವನ್ನು ನೋಡುವುದು ಅದ್ಭುತವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>