<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಕ್ಷಿಪ್ರ ದಂಗೆ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು(ಬಿಎಸ್ಎಫ್) ಹೈ ಅಲರ್ಟ್ ಘೋಷಿಸಿದೆ.</p><p>ಪರಿಸ್ಥಿತಿ ಕುರಿತಂತೆ ಅವಲೋಕನ ನಡೆಸಲು ಬಿಎಸ್ಎಫ್ ಡಿಜಿ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರೆ ಹಿರಿಯ ಅಧಿಕಾರಿಗಳು ಕೋಲ್ಕತ್ತಗೆ ಬಂದಿದ್ದಾರೆ ಎಂದು ಬಿಎಸ್ಎಫ್ ತಿಳಿಸಿದೆ.</p><p>ಎಲ್ಲ ಸಿಬ್ಬಂದಿಯನ್ನು ಕೂಡಲೇ ಗಡಿ ಭದ್ರತೆಗೆ ನಿಯೋಜಿಸುವಂತೆ ಎಲ್ಲ ಫೀಲ್ಡ್ ಕಮಾಂಡರ್ಗಳಿಗೆ ಡಿಜಿ ನಿರ್ದೇಶನ ನೀಡಿದ್ದಾರೆ.</p><p>ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದಾಗಿನಿಂದ ಬಾಂಗ್ಲಾ ಗಡಿಯಲ್ಲಿ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಈಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.</p><p>ಈಶಾನ್ಯ ಭಾರತದ ಐದು ರಾಜ್ಯಗಳು ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿವೆ.</p><p>ಈ ಪೈಕಿ ಪಶ್ಚಿಮ ಬಂಗಾಳದ ಗಡಿ 2,217 ಕಿ.ಮೀ ಇದೆ. ತ್ರಿಪುರಾ(856 ಕಿ.ಮೀ), ಮೇಘಾಲಯ (443 ಕಿ.ಮೀ), ಅಸ್ಸಾಂ (262 ಕಿ.ಮೀ) ಮತ್ತು ಮಿಜೋರಾಂ (318 ಕಿ.ಮೀ) ಗಡಿ ಹಂಚಿಕೊಂಡಿವೆ.</p><p>ದೇಶದಲ್ಲಿ ಉದ್ವಿಗ್ನ ವಾತಾವರಣ ಮತ್ತು ತಮ್ಮ ಮನೆಗೆ ಪ್ರತಿಭಟನಾಕಾರರು ನುಗ್ಗಿದ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. </p><p>ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಪೊಲೀಸರು ಸೇರಿದಂತೆ 106 ಮಂದಿ ಮೃತಪಟ್ಟಿದ್ದಾರೆ.</p> .ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಾಂಗ್ಲಾದೇಶದಲ್ಲಿ ಕ್ಷಿಪ್ರ ದಂಗೆ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು(ಬಿಎಸ್ಎಫ್) ಹೈ ಅಲರ್ಟ್ ಘೋಷಿಸಿದೆ.</p><p>ಪರಿಸ್ಥಿತಿ ಕುರಿತಂತೆ ಅವಲೋಕನ ನಡೆಸಲು ಬಿಎಸ್ಎಫ್ ಡಿಜಿ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರೆ ಹಿರಿಯ ಅಧಿಕಾರಿಗಳು ಕೋಲ್ಕತ್ತಗೆ ಬಂದಿದ್ದಾರೆ ಎಂದು ಬಿಎಸ್ಎಫ್ ತಿಳಿಸಿದೆ.</p><p>ಎಲ್ಲ ಸಿಬ್ಬಂದಿಯನ್ನು ಕೂಡಲೇ ಗಡಿ ಭದ್ರತೆಗೆ ನಿಯೋಜಿಸುವಂತೆ ಎಲ್ಲ ಫೀಲ್ಡ್ ಕಮಾಂಡರ್ಗಳಿಗೆ ಡಿಜಿ ನಿರ್ದೇಶನ ನೀಡಿದ್ದಾರೆ.</p><p>ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದಾಗಿನಿಂದ ಬಾಂಗ್ಲಾ ಗಡಿಯಲ್ಲಿ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಈಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.</p><p>ಈಶಾನ್ಯ ಭಾರತದ ಐದು ರಾಜ್ಯಗಳು ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿವೆ.</p><p>ಈ ಪೈಕಿ ಪಶ್ಚಿಮ ಬಂಗಾಳದ ಗಡಿ 2,217 ಕಿ.ಮೀ ಇದೆ. ತ್ರಿಪುರಾ(856 ಕಿ.ಮೀ), ಮೇಘಾಲಯ (443 ಕಿ.ಮೀ), ಅಸ್ಸಾಂ (262 ಕಿ.ಮೀ) ಮತ್ತು ಮಿಜೋರಾಂ (318 ಕಿ.ಮೀ) ಗಡಿ ಹಂಚಿಕೊಂಡಿವೆ.</p><p>ದೇಶದಲ್ಲಿ ಉದ್ವಿಗ್ನ ವಾತಾವರಣ ಮತ್ತು ತಮ್ಮ ಮನೆಗೆ ಪ್ರತಿಭಟನಾಕಾರರು ನುಗ್ಗಿದ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ. </p><p>ಪ್ರತಿಭಟನಾಕಾರರು ಮತ್ತು ಅವಾಮಿ ಲೀಗ್ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿ ಪೊಲೀಸರು ಸೇರಿದಂತೆ 106 ಮಂದಿ ಮೃತಪಟ್ಟಿದ್ದಾರೆ.</p> .ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>