<p><strong>ಬೈರೂತ್</strong>: ಕ್ರಿಸ್ಮಸ್ ಟ್ರೀಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಸಿರಿಯಾದ ಸುಖೈಲಬಿಯಾ ನಗರದಲ್ಲಿ ಕೈಸ್ತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.</p><p>ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಂತೆ ಪ್ರತಿಭಟನಾಕಾರರು ಇಸ್ಲಾಮಿಕ್ ಬಣ ಹಯಾತ್ ತೆಹ್ರೀರ್ ಅಲ್-ಶಾಮ್(ಎಚ್ಟಿಸಿ)ಗೆ ಆಗ್ರಹಿಸಿದ್ದಾರೆ.</p><p>ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಚ್ಟಿಸಿ, ಸಿರಿಯಾದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುವ ಭರವಸೆ ನೀಡಿದೆ. ಅಲ್ಲದೇ ಕೆಲ ವಿದೇಶಿ ಹೋರಾಟಗಾರರನ್ನು ಬಂಧಿಸಿರುವುದಾಗಿ ತಿಳಿಸಿದೆ.</p>.<p>ಇತ್ತೀಚೆಗೆ ಬಶರ್ ಅಲ್ ಅಸಾದ್ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಮೊಹಮ್ಮದ್ ಅಲ್ ಗೋಲಾನಿ ನೇತೃತ್ವದ ಹಯಾತ್ ತೆಹ್ರೀರ್ ಅಲ್-ಶಾಮ್ ಬಣ, ಸಿರಿಯಾದಲ್ಲಿ ಹಿಡಿತ ಸಾಧಿಸಿತ್ತು.</p><p><strong>ಘಟನೆ ಏನು?</strong></p><p>ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಮಧ್ಯ ಸಿರಿಯಾದ ಸುಖೈಲಬಿಯಾ ನಗರದ ಮುಖ್ಯ ಚೌಕದಲ್ಲಿ ಇಡಲಾಗಿದ್ದ ಕ್ರಿಸ್ಮಸ್ ಟ್ರೀಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈರೂತ್</strong>: ಕ್ರಿಸ್ಮಸ್ ಟ್ರೀಗೆ ಬೆಂಕಿ ಹಚ್ಚಿರುವುದನ್ನು ಖಂಡಿಸಿ ಸಿರಿಯಾದ ಸುಖೈಲಬಿಯಾ ನಗರದಲ್ಲಿ ಕೈಸ್ತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.</p><p>ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವಂತೆ ಪ್ರತಿಭಟನಾಕಾರರು ಇಸ್ಲಾಮಿಕ್ ಬಣ ಹಯಾತ್ ತೆಹ್ರೀರ್ ಅಲ್-ಶಾಮ್(ಎಚ್ಟಿಸಿ)ಗೆ ಆಗ್ರಹಿಸಿದ್ದಾರೆ.</p><p>ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಚ್ಟಿಸಿ, ಸಿರಿಯಾದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುವ ಭರವಸೆ ನೀಡಿದೆ. ಅಲ್ಲದೇ ಕೆಲ ವಿದೇಶಿ ಹೋರಾಟಗಾರರನ್ನು ಬಂಧಿಸಿರುವುದಾಗಿ ತಿಳಿಸಿದೆ.</p>.<p>ಇತ್ತೀಚೆಗೆ ಬಶರ್ ಅಲ್ ಅಸಾದ್ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಮೊಹಮ್ಮದ್ ಅಲ್ ಗೋಲಾನಿ ನೇತೃತ್ವದ ಹಯಾತ್ ತೆಹ್ರೀರ್ ಅಲ್-ಶಾಮ್ ಬಣ, ಸಿರಿಯಾದಲ್ಲಿ ಹಿಡಿತ ಸಾಧಿಸಿತ್ತು.</p><p><strong>ಘಟನೆ ಏನು?</strong></p><p>ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಮಧ್ಯ ಸಿರಿಯಾದ ಸುಖೈಲಬಿಯಾ ನಗರದ ಮುಖ್ಯ ಚೌಕದಲ್ಲಿ ಇಡಲಾಗಿದ್ದ ಕ್ರಿಸ್ಮಸ್ ಟ್ರೀಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>