<p><strong>ವಾಷಿಂಗ್ಟನ್ </strong>(ಪಿಟಿಐ): ಭಾರತದಲ್ಲಿ 1984ರ ಸಿಖ್ ವಿರೋಧಿ ಹಿಂಸಾಚಾರವನ್ನು ಖಂಡಿಸಬೇಕು ಹಾಗೂ ಆ ದುಷ್ಕೃತ್ಯವನ್ನು ನರಮೇಧ ಎಂಬುದಾಗಿ ಪರಿಗಣಿಸಬೇಕು ಎಂದು ಕ್ಯಾಲಿಫೋರ್ನಿಯಾ ರಾಜ್ಯ ಅಸೆಂಬ್ಲಿಯು ಅಮೆರಿಕ ಸಂಸತ್ ಅನ್ನು ಒತ್ತಾಯಿಸುವ ನಿರ್ಣಯ ಅಂಗೀಕರಿಸಿದೆ.</p>.<p>ಶಾಸನಸಭೆಯ ಮೊದಲ ಚುನಾಯಿತ ಸಿಖ್ ಸದಸ್ಯೆ ಜಸ್ಮೀತ್ ಕೌರ್ ಬೈನ್ಸ್ ಅವರು ಮಾರ್ಚ್ 22 ರಂದು ಈ ನಿರ್ಣಯ ಮಂಡಿಸಿದರು ಮತ್ತು ಸೋಮವಾರ ಇದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ಗಲಭೆಯ ದೈಹಿಕ ಮತ್ತು ಮಾನಸಿಕ ಆಘಾತದಿಂದ ಅಮೆರಿಕದಲ್ಲಿರುವ ಸಿಖ್ ಸಮುದಾಯ ಚೇತರಿಸಿಕೊಂಡಿಲ್ಲ. ಸಿಖ್ ವಿರೋಧಿ ಹಿಂಸಾಚಾರವನ್ನು ನರಮೇಧ ಎಂಬುದಾಗಿ ಪರಿಗಣಿಸಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p>.<p>ನರಮೇಧ ನಡೆದ ಸಂದರ್ಭದಲ್ಲಿ ವಿಧವೆಯರಾದ ಹಲವು ಮಹಿಳೆಯರು ಈಗಲೂ ನವದೆಹಲಿಯ ಕಾಲೊನಿಯೊಂದರಲ್ಲಿ ವಾಸ ಮಾಡುತ್ತಿದ್ದಾರೆ. ಅವರ ಮೇಲೆ ಹಲ್ಲೆ, ಅತ್ಯಾಚಾರ ನಡೆದಿತ್ತು ಮತ್ತು ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಈ ಮಹಿಳೆಯರು ಅವರ ಕುಟುಂಬಗಳ ವಿರುದ್ಧ ನಡೆದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅವರು ಈಗಲೂ ಒತ್ತಾಯಿಸುತ್ತಿದ್ದಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ </strong>(ಪಿಟಿಐ): ಭಾರತದಲ್ಲಿ 1984ರ ಸಿಖ್ ವಿರೋಧಿ ಹಿಂಸಾಚಾರವನ್ನು ಖಂಡಿಸಬೇಕು ಹಾಗೂ ಆ ದುಷ್ಕೃತ್ಯವನ್ನು ನರಮೇಧ ಎಂಬುದಾಗಿ ಪರಿಗಣಿಸಬೇಕು ಎಂದು ಕ್ಯಾಲಿಫೋರ್ನಿಯಾ ರಾಜ್ಯ ಅಸೆಂಬ್ಲಿಯು ಅಮೆರಿಕ ಸಂಸತ್ ಅನ್ನು ಒತ್ತಾಯಿಸುವ ನಿರ್ಣಯ ಅಂಗೀಕರಿಸಿದೆ.</p>.<p>ಶಾಸನಸಭೆಯ ಮೊದಲ ಚುನಾಯಿತ ಸಿಖ್ ಸದಸ್ಯೆ ಜಸ್ಮೀತ್ ಕೌರ್ ಬೈನ್ಸ್ ಅವರು ಮಾರ್ಚ್ 22 ರಂದು ಈ ನಿರ್ಣಯ ಮಂಡಿಸಿದರು ಮತ್ತು ಸೋಮವಾರ ಇದನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.</p>.<p>ಗಲಭೆಯ ದೈಹಿಕ ಮತ್ತು ಮಾನಸಿಕ ಆಘಾತದಿಂದ ಅಮೆರಿಕದಲ್ಲಿರುವ ಸಿಖ್ ಸಮುದಾಯ ಚೇತರಿಸಿಕೊಂಡಿಲ್ಲ. ಸಿಖ್ ವಿರೋಧಿ ಹಿಂಸಾಚಾರವನ್ನು ನರಮೇಧ ಎಂಬುದಾಗಿ ಪರಿಗಣಿಸಬೇಕು ಎಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.</p>.<p>ನರಮೇಧ ನಡೆದ ಸಂದರ್ಭದಲ್ಲಿ ವಿಧವೆಯರಾದ ಹಲವು ಮಹಿಳೆಯರು ಈಗಲೂ ನವದೆಹಲಿಯ ಕಾಲೊನಿಯೊಂದರಲ್ಲಿ ವಾಸ ಮಾಡುತ್ತಿದ್ದಾರೆ. ಅವರ ಮೇಲೆ ಹಲ್ಲೆ, ಅತ್ಯಾಚಾರ ನಡೆದಿತ್ತು ಮತ್ತು ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಈ ಮಹಿಳೆಯರು ಅವರ ಕುಟುಂಬಗಳ ವಿರುದ್ಧ ನಡೆದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅವರು ಈಗಲೂ ಒತ್ತಾಯಿಸುತ್ತಿದ್ದಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>