ನರಮೇಧ ನಡೆದ ಸಂದರ್ಭದಲ್ಲಿ ವಿಧವೆಯರಾದ ಹಲವು ಮಹಿಳೆಯರು ಈಗಲೂ ನವದೆಹಲಿಯ ಕಾಲೊನಿಯೊಂದರಲ್ಲಿ ವಾಸ ಮಾಡುತ್ತಿದ್ದಾರೆ. ಅವರ ಮೇಲೆ ಹಲ್ಲೆ, ಅತ್ಯಾಚಾರ ನಡೆದಿತ್ತು ಮತ್ತು ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಈ ಮಹಿಳೆಯರು ಅವರ ಕುಟುಂಬಗಳ ವಿರುದ್ಧ ನಡೆದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅವರು ಈಗಲೂ ಒತ್ತಾಯಿಸುತ್ತಿದ್ದಾರೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.