<p><strong>ಜೊಹಾನಸ್ಬರ್ಗ್</strong>: ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಭಾರತಕ್ಕೆ ಭೇಟಿ ನೀಡಲು ಒಪ್ಪಿಕೊಂಡಿದ್ದಾರೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗದಲ್ಲಿ ಭಾನುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಮೋದಿ ಅವರು ನೀಡಿದ ಆಹ್ವಾನವನ್ನು ಒಪ್ಪಿಕೊಂಡಿರುವ ಕಾರ್ನಿ ಅವರು 2026ರ ಆರಂಭದಲ್ಲಿ ಭೇಟಿ ನೀಡುವುದಾಗಿ ತಿಳಿಸಿದ್ದಾರೆ’ ಎಂದು ಕೆನಡಾ ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<p>‘ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ಇಂಧನ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಪಡಿಸುವುದರ ಜೊತೆಗೆ ರಕ್ಷಣೆ ಮತ್ತು ಬಾಹ್ಯಾಕಾಶ ವಲಯದಲ್ಲೂ ಸಹಕಾರವನ್ನು ಬಲಪಡಿಸಿಕೊಳ್ಳಲು ಮೋದಿ ಮತ್ತು ಕಾರ್ನಿ ಸಮ್ಮತಿಸಿದ್ದಾರೆ. ಸಮಗ್ರ ಆರ್ಥಿಕ ಪಾಲುದಾರಿಕೆಯ ಒಪ್ಪಂದದ(ಸಿಇಪಿಎ) ಬಗ್ಗೆಯೂ ಮಾತುಕತೆ ಆರಂಭಿಸಲು ಉಭಯ ನಾಯಕರು ನಿರ್ಧರಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>ಕಾನೂನು ಜಾರಿಗೆ ಸಂಬಂಧಿಸಿ ಉಭಯ ದೇಶಗಳ ನಡುವಿನ ಮಾತುಕತೆಯಲ್ಲಿನ ಪ್ರಗತಿಯ ಬಗ್ಗೆ ಕಾರ್ನಿ ಹರ್ಷ ವ್ಯಕ್ತಪಡಿಸಿದರು.</p>.<p>ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು 2023ರಲ್ಲಿ ಕೆನಡಾದ ಆಗಿನ ಪ್ರಧಾನಿ ಜಸ್ಟಿನ್ ಟ್ರೂಡೊ ಅವರು ಆರೋಪಿಸಿದ್ದರಿಂದ ಉಭಯ ದೇಶಗಳ ನಡುವಿನ ಸಂಬಂಧ ತೀವ್ರ ಹದಗೆಟ್ಟಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಹಾನಸ್ಬರ್ಗ್</strong>: ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನವನ್ನು ಸ್ವೀಕರಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಭಾರತಕ್ಕೆ ಭೇಟಿ ನೀಡಲು ಒಪ್ಪಿಕೊಂಡಿದ್ದಾರೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗದಲ್ಲಿ ಭಾನುವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಮೋದಿ ಅವರು ನೀಡಿದ ಆಹ್ವಾನವನ್ನು ಒಪ್ಪಿಕೊಂಡಿರುವ ಕಾರ್ನಿ ಅವರು 2026ರ ಆರಂಭದಲ್ಲಿ ಭೇಟಿ ನೀಡುವುದಾಗಿ ತಿಳಿಸಿದ್ದಾರೆ’ ಎಂದು ಕೆನಡಾ ಪ್ರಧಾನಿ ಕಚೇರಿಯ ಪ್ರಕಟಣೆ ತಿಳಿಸಿದೆ.</p>.<p>‘ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ಇಂಧನ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಪಡಿಸುವುದರ ಜೊತೆಗೆ ರಕ್ಷಣೆ ಮತ್ತು ಬಾಹ್ಯಾಕಾಶ ವಲಯದಲ್ಲೂ ಸಹಕಾರವನ್ನು ಬಲಪಡಿಸಿಕೊಳ್ಳಲು ಮೋದಿ ಮತ್ತು ಕಾರ್ನಿ ಸಮ್ಮತಿಸಿದ್ದಾರೆ. ಸಮಗ್ರ ಆರ್ಥಿಕ ಪಾಲುದಾರಿಕೆಯ ಒಪ್ಪಂದದ(ಸಿಇಪಿಎ) ಬಗ್ಗೆಯೂ ಮಾತುಕತೆ ಆರಂಭಿಸಲು ಉಭಯ ನಾಯಕರು ನಿರ್ಧರಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.</p>.<p>ಕಾನೂನು ಜಾರಿಗೆ ಸಂಬಂಧಿಸಿ ಉಭಯ ದೇಶಗಳ ನಡುವಿನ ಮಾತುಕತೆಯಲ್ಲಿನ ಪ್ರಗತಿಯ ಬಗ್ಗೆ ಕಾರ್ನಿ ಹರ್ಷ ವ್ಯಕ್ತಪಡಿಸಿದರು.</p>.<p>ಖಾಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು 2023ರಲ್ಲಿ ಕೆನಡಾದ ಆಗಿನ ಪ್ರಧಾನಿ ಜಸ್ಟಿನ್ ಟ್ರೂಡೊ ಅವರು ಆರೋಪಿಸಿದ್ದರಿಂದ ಉಭಯ ದೇಶಗಳ ನಡುವಿನ ಸಂಬಂಧ ತೀವ್ರ ಹದಗೆಟ್ಟಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>