<p><strong>ಟೊರೊಂಟೊ:</strong> 2008ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾ ಹುಸೇನ್ ಪೌರತ್ವ ರದ್ದುಪಡಿಸುವುದಕ್ಕೆ ಕೆನಡಾ ಸರ್ಕಾರ ಮುಂದಾಗಿದೆ.</p><p>ಪ್ರಧಾನಿ ಮಾರ್ಕ್ ಕಾರ್ನಿ ಅವರು ಭಾರತಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿಯೇ ಈ ಮಹತ್ವದ ಬೆಳವಣಿಗೆ ನಡೆದಿದೆ.</p><p>ಪಾಕಿಸ್ತಾನದಲ್ಲಿ ಜನಿಸಿರುವ ರಾಣಾ ಕೆನಡಾ ಪೌರತ್ವ ಹೊಂದಿದ್ದು, ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಸಂಚುಕೋರ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ಆಪ್ತನೂ ಆಗಿದ್ದಾನೆ. ಹೆಡ್ಲಿ ಅಮೆರಿಕದ ಪ್ರಜೆ.</p><p>‘2001ರಲ್ಲಿ ರಾಣಾ ಪಡೆದಿರುವ ಕೆನಡಾ ಪೌರತ್ವವನ್ನು ಹಿಂಪಡೆಯಲು ಉದ್ದೇಶಿಸಲಾಗಿದೆ’ ಎಂದು ವಲಸೆ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದನ್ನು ಉಲ್ಲೇಖಿಸಿ ಗ್ಲೊಬಲ್ ನ್ಯೂಸ್ ವರದಿ ಮಾಡಿದೆ.</p><p>ಭಯೋತ್ಪಾದಕ ಕೃತ್ಯಗಳ ಕಾರಣಗಳಿಂದಾಗಿ ರಾಣಾ ಪೌರತ್ವವನ್ನು ರದ್ದು ಮಾಡಲಾಗುತ್ತಿಲ್ಲ. ಪೌರತ್ವಕ್ಕಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಆತ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಕೆನಡಾದ ವಲಸೆ, ನಿರಾಶ್ರಿತರು ಹಾಗೂ ಪೌರತ್ವ(ಐಆರ್ಸಿಸಿ) ಇಲಾಖೆಯು ತಿಳಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.</p><p>ಮುಂಬೈ ಮೇಲೆ 2008ರ ನವೆಂಬರ್ 26ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 166 ಜನರು ಮೃತಪಟ್ಟಿದ್ದರು. </p><p>ಈ ಬಳಿಕ, ರಾಣಾನನ್ನು ಹಸ್ತಾಂತರಿಸುವಂತೆ ಭಾರತವು ಅಮೆರಿಕಕ್ಕೆ ಕೋರಿತ್ತು. ಸುದೀರ್ಘ ಕಾನೂನು ಹೋರಾಟದ ಬಳಿಕ, ಕಳೆದ ವರ್ಷ ಏಪ್ರಿಲ್ನಲ್ಲಿ ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು. ನವದೆಹಲಿಗೆ ಬಂದಿಳಿದ ಕೂಡಲೇ, ಆತನನ್ನು ಎನ್ಐಎ ಬಂಧಿಸಿತ್ತು.</p>.ಕುಟುಂಬಸ್ಥರ ಜತೆ ತಹವ್ವುರ್ ಹುಸೇನ್ ರಾಣಾ ಮಾತುಕತೆಗೆ ಕೋರ್ಟ್ ಒಪ್ಪಿಗೆ.Mumbai Attack: ತಹವ್ವುರ್ ರಾಣಾ ಧ್ವನಿ, ಕೈಬರಹ ದಾಖಲಿಸಲು NIAಗೆ ಕೋರ್ಟ್ ಅನುಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೊರೊಂಟೊ:</strong> 2008ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾ ಹುಸೇನ್ ಪೌರತ್ವ ರದ್ದುಪಡಿಸುವುದಕ್ಕೆ ಕೆನಡಾ ಸರ್ಕಾರ ಮುಂದಾಗಿದೆ.</p><p>ಪ್ರಧಾನಿ ಮಾರ್ಕ್ ಕಾರ್ನಿ ಅವರು ಭಾರತಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿಯೇ ಈ ಮಹತ್ವದ ಬೆಳವಣಿಗೆ ನಡೆದಿದೆ.</p><p>ಪಾಕಿಸ್ತಾನದಲ್ಲಿ ಜನಿಸಿರುವ ರಾಣಾ ಕೆನಡಾ ಪೌರತ್ವ ಹೊಂದಿದ್ದು, ಮುಂಬೈನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಸಂಚುಕೋರ ಡೇವಿಡ್ ಕೋಲ್ಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ಆಪ್ತನೂ ಆಗಿದ್ದಾನೆ. ಹೆಡ್ಲಿ ಅಮೆರಿಕದ ಪ್ರಜೆ.</p><p>‘2001ರಲ್ಲಿ ರಾಣಾ ಪಡೆದಿರುವ ಕೆನಡಾ ಪೌರತ್ವವನ್ನು ಹಿಂಪಡೆಯಲು ಉದ್ದೇಶಿಸಲಾಗಿದೆ’ ಎಂದು ವಲಸೆ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದನ್ನು ಉಲ್ಲೇಖಿಸಿ ಗ್ಲೊಬಲ್ ನ್ಯೂಸ್ ವರದಿ ಮಾಡಿದೆ.</p><p>ಭಯೋತ್ಪಾದಕ ಕೃತ್ಯಗಳ ಕಾರಣಗಳಿಂದಾಗಿ ರಾಣಾ ಪೌರತ್ವವನ್ನು ರದ್ದು ಮಾಡಲಾಗುತ್ತಿಲ್ಲ. ಪೌರತ್ವಕ್ಕಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಆತ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಕೆನಡಾದ ವಲಸೆ, ನಿರಾಶ್ರಿತರು ಹಾಗೂ ಪೌರತ್ವ(ಐಆರ್ಸಿಸಿ) ಇಲಾಖೆಯು ತಿಳಿಸಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.</p><p>ಮುಂಬೈ ಮೇಲೆ 2008ರ ನವೆಂಬರ್ 26ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ 166 ಜನರು ಮೃತಪಟ್ಟಿದ್ದರು. </p><p>ಈ ಬಳಿಕ, ರಾಣಾನನ್ನು ಹಸ್ತಾಂತರಿಸುವಂತೆ ಭಾರತವು ಅಮೆರಿಕಕ್ಕೆ ಕೋರಿತ್ತು. ಸುದೀರ್ಘ ಕಾನೂನು ಹೋರಾಟದ ಬಳಿಕ, ಕಳೆದ ವರ್ಷ ಏಪ್ರಿಲ್ನಲ್ಲಿ ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು. ನವದೆಹಲಿಗೆ ಬಂದಿಳಿದ ಕೂಡಲೇ, ಆತನನ್ನು ಎನ್ಐಎ ಬಂಧಿಸಿತ್ತು.</p>.ಕುಟುಂಬಸ್ಥರ ಜತೆ ತಹವ್ವುರ್ ಹುಸೇನ್ ರಾಣಾ ಮಾತುಕತೆಗೆ ಕೋರ್ಟ್ ಒಪ್ಪಿಗೆ.Mumbai Attack: ತಹವ್ವುರ್ ರಾಣಾ ಧ್ವನಿ, ಕೈಬರಹ ದಾಖಲಿಸಲು NIAಗೆ ಕೋರ್ಟ್ ಅನುಮತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>